Homeಮುಖಪುಟಜೆಪಿ ನಡ್ಡಾ v/s ಅನುರಾಗ್ ಠಾಕೂರ್: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೊಳಗೆ ಭಿನ್ನಮತ

ಜೆಪಿ ನಡ್ಡಾ v/s ಅನುರಾಗ್ ಠಾಕೂರ್: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೊಳಗೆ ಭಿನ್ನಮತ

ಹಿಮಾಚಲಪ್ರದೇಶ ವಿಧಾನಸಭೆಗೆ ಶನಿವಾರ ಮತದಾನ ನಡೆದಿದೆ. ಬಿಜೆಪಿಯೊಳಗಿನ ಭಿನ್ನಮತ ಫಲಿತಾಂಶದ ಮೇಲೆ ಪ್ರಭಾವಿಸಲಿದೆಯೇ?

- Advertisement -
- Advertisement -

ಹಿಮಾಚಲ ಪ್ರದೇಶದ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಕಾರ್ಯಕರ್ತರು, ಮುಖಂಡರು, ಸಹಾನುಭೂತಿ ಹೊಂದಿರುವವರಿಗೆ ಇದು ಗೊತ್ತಿದ್ದರೂ ಬಹಿರಂಗವಾಗಿ ಮಾತನಾಡುವುದಿಲ್ಲ. ಕ್ಯಾಮೆರಾ ಮುಂದೆ ಬಿಜೆಪಿ ಒಗ್ಗಟ್ಟು ಪ್ರದರ್ಶಿಸುತ್ತದೆ. ಆದರೆ ಈಗ ಕೇಂದ್ರ ನಾಯಕತ್ವದಲ್ಲಿ ಗುರುತಿಸಿಕೊಂಡಿರುವ ಗುಡ್ಡಗಾಡು ರಾಜ್ಯದ ಇಬ್ಬರು ನಾಯಕರ ನಡುವೆ ಸಂಬಂಧ ಸರಿ ಇಲ್ಲ ಎಂದು ಇತ್ತೀಚೆಗೆ ‘ನ್ಯೂಸ್ ಲಾಂಡ್ರಿ’ ವರದಿ ಮಾಡಿದೆ.

ಹಿಮಾಚಲಪ್ರದೇಶ ವಿಧಾನಸಭೆಗೆ ಶನಿವಾರ ಮತದಾನ ನಡೆದಿದೆ. ಶೇ.65.20ರಷ್ಟು ಮತದಾನವಾಗಿದೆ. ಆದರೆ ಬಿಜೆಪಿಯು ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೇ ಚುನಾವಣೆಯನ್ನು ಎದುರಿಸಿದೆ ಎಂಬುದು ರಾಜಕೀಯ ಪಡೆಸಾಲೆಯಲ್ಲಿ ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿಯಾದಾಗ ಭಿನ್ನಾಭಿಪ್ರಾಯ ಸ್ಪಷ್ಟವಾಗಿ ಕಂಡುಬಂತು. ಎಎನ್‌ಐ ವರದಿ ಪ್ರಕಾರ, ಅನುರಾಗ್ ಅವರು ಹಿಮಾಚಲ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಆದರೆ ಈ ಸಭೆಗೆ ಸಂಬಂಧಿಸಿದಂತೆ ಎಎನ್‌ಐ ಪ್ರಕಟಿಸಿದ ವೀಡಿಯೊ ತುಣುಕಿನಲ್ಲಿ ಅನುರಾಗ್ ಮತ್ತು ನಡ್ಡಾ ಮೀಟರ್‌ಗಳ ಅಂತರದಲ್ಲಿ ನಿಂತಿರುವುದು ಕಂಡು ಬಂತು. ಯಾವುದೇ ಸಂವಹನವನ್ನೂ ನಡೆಸಲಿಲ್ಲ. ಜೈರಾಮ್ ಠಾಕೂರ್ ಅವರು ನಡ್ಡಾ ಅವರಿಗೆ ಪುಷ್ಪಗುಚ್ಛ, ಸಾಂಪ್ರದಾಯಿಕ ಹಿಮಾಚಲಿ ಕ್ಯಾಪ್ ಮತ್ತು ಶಾಲು ನೀಡಿದರು. ಇಬ್ಬರೂ ಅಪ್ಪುಗೆ ಹಾಗೂ ಹಸ್ತಲಾಘವ ಮಾಡಿದರು. ಆದರೆ ನಡ್ಡಾ ಅವರು ನಗುತ್ತಾ ಪಕ್ಕದಲ್ಲಿ ನಿಂತಿರುವ ಅನುರಾಗ್ ಕಡೆಗೆ ನೋಡಲೇ ಇಲ್ಲ.

ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಮತದಾನವಾಗಿದೆ. ಆದರೆ ರಾಜ್ಯದ ಸುಮಾರು ಮೂರನೇ ಒಂದು ಭಾಗದಷ್ಟು ಸ್ಥಳೀಯ ಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ ಎಂದು ಚುನಾವಣಾ ಪೂರ್ವದಲ್ಲಿ ಪ್ರಕಟವಾಗಿರುವ ‘ನ್ಯೂಸ್‌ಲಾಂಡ್ರಿ ವರದಿ ’ಉಲ್ಲೇಖಿಸಿದೆ. ಅವರಲ್ಲಿ ಕೆಲವರು ಪ್ರಮುಖ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದಾರೆ. ಅಂಥವರಲ್ಲಿ ಆರು ಮಂದಿಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಕುರಿತು ವಿಸ್ತೃತವಾಗಿ ವರದಿ ಮಾಡಿರುವ ನ್ಯೂಸ್‌ಲಾಂಡ್ರಿ, “ಸ್ಥಳೀಯ ಬಂಡಾಯವು ಹೈಕಮಾಂಡ್‌ನೊಳಗಿನ ಹಗೆತನದೊಂದಿಗೆ ನಂಟು ಹೊಂದಿದೆ” ಎಂದು ವಿಶ್ಲೇಷಿಸಿದೆ.

ಹಿಮಾಚಲಪ್ರದೇಶದ ಬಿಜೆಪಿಯೊಳಗೆ ನಡ್ಡಾ ಮತ್ತು ಅನುರಾಗ್ ಎಂದು ಎರಡು ಬಣಗಳಾಗಿವೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೇರಿದಂತೆ ನಡ್ಡಾ ಅವರಿಗೆ ಆಪ್ತರು ಎನ್ನಲಾದ ಹೆಚ್ಚಿನವರು ಬಿಜೆಪಿಯ ಟಿಕೆಟ್ ಪಡೆದಿದ್ದಾರೆ. ಆದರೆ ಹೊರಗುಳಿದಿರುವ ಮತ್ತು ‘ಬಂಡಾಯಗಾರರು’ ಎಂದು ಕರೆಯಲ್ಪಟ್ಟಿರುವ ಗಮನಾರ್ಹ ಸಂಖ್ಯೆಯ ನಾಯಕರು ಅನುರಾಗ್‌ ಠಾಕೂರ್ ಮತ್ತು ಅವರ ತಂದೆ, ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಅವರಿಗೆ ನಿಷ್ಠರೆಂಬುದು ಚರ್ಚೆಯ ವಿಷಯವಾಗಿದೆ.

ನಡ್ಡಾ ಮತ್ತು ಅನುರಾಗ್ ಅವರ ನಡುವಿನ ಭಿನ್ನಾಭಿಪ್ರಾಯಗಳು 2020ರಲ್ಲಿ ಸಾರ್ವಜನಿಕವಾಗಿ ಹೊರಬಿದ್ದವು.  ನವೆಂಬರ್‌ನಲ್ಲಿ ಕಂಗ್ರಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾದ ಅನುರಾಗ್‌ ತೀವ್ರ ವಾಗ್ದಾಳಿ ನಡೆಸಿದ್ದರು. ತಮ್ಮ ‘ಕನಸಿನ ಯೋಜನೆ’ ಎಂದೇ ಭಾವಿಸಿರುವ ವಿಶ್ವವಿದ್ಯಾನಿಲಯ ಯೋಜನೆಗೆ ಭೂಮಿ ವರ್ಗಾವಣೆಯಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡಿದ್ದನ್ನು ಅವರು ವಿರೋಧಿಸಿದ್ದರು.

ಹಿಮಾಚಲ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ (CUHP) ಸಂಬಂಧಿಸಿದ ಪ್ರಶ್ನೆ ಇದಾಗಿತ್ತು. “ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಅವಧಿಯಲ್ಲಿ 11 ವರ್ಷಗಳ ಹಿಂದೆ ರಾಜ್ಯಕ್ಕೆ ಮಂಜೂರು ಮಾಡಿದ ಯೋಜನೆಯನ್ನು ಪೂರ್ಣಗೊಳಿಸಲು ವಿಳಂಬವಾಗುತ್ತಿದೆ. ಇದಕ್ಕೆ ಸಿಎಂ ಕೂಡ ಕಾರಣ” ಎಂದು ದೂರಿದ್ದಾಗಿ ವರದಿಯಾಗಿತ್ತು.

ಜೈರಾಮ್‌ಗೆ ಮುಜುಗರವಾಯಿತು. “ಈ ವಿಷಯವನ್ನು ಅನುರಾಗ್ ಠಾಕೂರ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಪ್ರಸ್ತಾಪಿಸಬಾರದಿತ್ತು” ಎಂದಿರುವುದಾಗಿ ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿತ್ತು.

ಎರಡು ದಿನಗಳ ನಂತರ, ನಡ್ಡಾ ಅವರು ಜೈರಾಮ್ ಅವರ ಪರ ನಿಂತರು. ರ್ಯಾಲಿಯಲ್ಲಿ ಸಿಎಂ ಅವರನ್ನು ಶ್ಲಾಘಿಸಿದ ಅವರು, “ಅಭಿವೃದ್ಧಿಯ ವಿಷಯಕ್ಕೆ ಬಂದಾಗ ತಾಳ್ಮೆಯಿಂದಿರಬೇಕು” ಎಂದು ಅನುರಾಗ್ ಅವರಿಗೆ ಕುಟುಕಿದ್ದರು.

ಜೈರಾಮ್ ಮತ್ತು ನಡ್ಡಾ 1980ರ ದಶಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿ ಹಿಮಾಚಲ ರಾಜಕೀಯದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಡ್ಡಾ ಅವರು ಬಿಹಾರದಲ್ಲಿ ಜನಿಸಿದವರು. ಆದರೆ 1980ರ ದಶಕದ ಆರಂಭದಲ್ಲಿ ಎಬಿವಿಪಿ ಮೂಲಕ ಹಿಮಾಚಲದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡರು.

ಅನುರಾಗ್ ತಂದೆ ಧುಮಾಲ್ ಅವರು ನಡ್ಡಾಗಿಂತ ಹಿರಿಯವರು. 1982ರಲ್ಲಿ ಧುಮಾಲ್ ಅವರು ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ನಡ್ಡಾ ಅವರು ಹಿಮಾಚಲದಲ್ಲಿ ಎಬಿವಿಪಿಯ ಕಾರ್ಯದರ್ಶಿಯಾಗಿದ್ದರು.

1989ರಲ್ಲಿ ಧುಮಾಲ್ ಅವರು ಮೊದಲ ಭಾರಿಗೆ ಲೋಕಸಭೆಯನ್ನು ಪ್ರವೇಶಿಸಿದಾಗ, ಆ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ನಡ್ಡಾ ಅವರು ಬಿಜೆಪಿ ಯುವಮೋರ್ಚಾದ ಉಸ್ತುವಾರಿಯಾಗಿದ್ದರು.

ನಡ್ಡಾ 1993ರಲ್ಲಿ ಹಿಮಾಚಲದಿಂದ ಮೊದಲ ಬಾರಿಗೆ ಟಿಕೆಟ್ ಪಡೆದರು. ಅವರು ತಮ್ಮ ಸ್ಥಾನವನ್ನು ಗೆದ್ದರು. ಆದರೆ ಕಾಂಗ್ರೆಸ್ ಬಹುಮತ ಗಳಿಸಿತು. ಪ್ರತಿಪಕ್ಷದ ನಾಯಕರಾಗಿ ಐದು ವರ್ಷಗಳ ನಂತರ, ನಡ್ಡಾ 1998 ರಲ್ಲಿ ಮತ್ತೊಮ್ಮೆ ಗೆದ್ದರು ಮತ್ತು ಬಿಜೆಪಿ ಅಧಿಕಾರಕ್ಕೆ ಬಂದಿತು. ಧುಮಾಲ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ನಡ್ಡಾ ಅವರು ‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ’, ‘ಸಂಸದೀಯ ವ್ಯವಹಾರಗಳ ಖಾತೆ’ ಸಚಿವರಾದರು.

2007ರಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ, ನಡ್ಡಾ ಅವರಿಗೆ ಅರಣ್ಯ, ಪರಿಸರ ಮತ್ತು ವಿಜ್ಞಾನ- ತಂತ್ರಜ್ಞಾನ ಖಾತೆಗಳನ್ನು ನೀಡಲಾಯಿತು.

1990ರಲ್ಲಿ ರಾಜ್ಯದಲ್ಲಿ ಮೊದಲ ಬಿಜೆಪಿ ಸರ್ಕಾರವನ್ನು ರಚಿಸಿದ ಶಾಂತ ಕುಮಾರ್ ಅವರನ್ನು ಬದಿಗೆ ತಳ್ಳಿದವರು ಧುಮಾಲ್. 2007 ಮತ್ತು 2012ರ ನಡುವೆ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಪಕ್ಷದ ಮೇಲೆ ಧುಮಾಲ್ ಅವರ ಹಿಡಿತವನ್ನು ಪ್ರಶ್ನಿಸಿದರು. 2010ರ ಹೊತ್ತಿಗೆ, ಧುಮಾಲ್ ಮತ್ತು ನಡ್ಡಾ ನಡುವಿನ ಭಿನ್ನಾಭಿಪ್ರಾಯಗಳು ಬೆಳೆದವು.

ಇದನ್ನೂ ಓದಿರಿ: ವಂದೇಭಾರತ್‌ ಮೈಸೂರು-ಬೆಂಗಳೂರು ಪ್ರಯಾಣ; 5 ನಿಮಿಷಕ್ಕಾಗಿ ₹415 ಹೆಚ್ಚುವರಿ ಪಾವತಿಸಿ!

ದೆಹಲಿಯಲ್ಲಿ ನಡ್ಡಾ ಶಕ್ತಿಶಾಲಿಯಾದರು. 2010ರಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರು. 2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. “ದೆಹಲಿಯಲ್ಲಿ ಕುಳಿತ ನಡ್ಡಾ ಅವರ ಹಸ್ತಕ್ಷೇಪ ಹಿಮಾಚಲ ಪ್ರದೇಶದಲ್ಲೂ ಇಣುಕಲಾರಂಭಿಸಿತು” ಎಂದು ಪತ್ರಕರ್ತ ಹೇಳುತ್ತಾರೆ. ಆದರೆ ಧುಮಾಲ್ ರಾಜ್ಯದಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಾರೆ.

ಧುಮಾಲ್ ಅವರ ಅಧಿಕಾರಾವಧಿಯಲ್ಲಿ ಅವರ ಮಗ ಅನುರಾಗ್ ಠಾಕೂರ್ ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬಂದರು. 2000ನೇ ಇಸವಿಯಲ್ಲಿ ತಮ್ಮ 25ನೇ ವಯಸ್ಸಿನಲ್ಲಿಯೇ ಠಾಕೂರ್ ಅವರು ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದರು. ರಾಜ್ಯ ಕ್ರಿಕೆಟ್ ಮಂಡಳಿಗೆ ಏರಿದ ಅತ್ಯಂತ ಕಿರಿಯ ವ್ಯಕ್ತಿ ಅವರಾಗಿದ್ದರು. 2008ರಲ್ಲಿ, ಅವರು ಹಮೀರ್‌ಪುರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಇಂತಹ ರಾಜಕೀಯ ಏರಿಳಿತ ಕಂಡಿರುವ ಹಿಮಾಚಲಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆಯೋ ಸೋಲುತ್ತದೆಯೋ ಎಂಬ ಕುತೂಹಲ ಹುಟ್ಟಿಸಿದೆ.

(ಪೂರ್ಣ ವಿಶ್ಲೇಷಣೆ- ‘ನ್ಯೂಸ್‌ಲಾಂಡ್ರಿ’ಯಲ್ಲಿ ಲಭ್ಯ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...