Homeಕರ್ನಾಟಕಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ದೇವಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.

- Advertisement -
- Advertisement -

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

“ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ?” ಎಂದು ಪ್ರಶ್ನಿಸಿದೆ.

“ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ” ಎಂದು ಜೆಡಿಎಸ್ ಕುಟುಕಿದೆ.

“ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ” ಎಂದು ಹರಿಹಾಯ್ದಿದೆ.

“20 ದಿನಗಳ ಹಿಂದೆ ಸಚಿವ ಅಶ್ವತ್‌ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ” ಎಂದು ಸ್ಪಷ್ಟಪಡಿಸಿದೆ.

“ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?” ಎಂದು ಅಣಕ ಮಾಡಿದೆ.

“ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?” ಎಂದು ಕೇಳಿದೆ.

“ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’, ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ಕರ್ನಾಟಕ ಬಿಜೆಪಿ ನೋಡಲಿಲ್ಲವೆ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿರಿ: ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

“ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?” ಎಂದು ಟೀಕಾಪ್ರಹಾರ ನಡೆಸಿದೆ.

“ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ” ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...