Homeಕರ್ನಾಟಕಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ದೇವಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.

- Advertisement -
- Advertisement -

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

“ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ?” ಎಂದು ಪ್ರಶ್ನಿಸಿದೆ.

“ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ” ಎಂದು ಜೆಡಿಎಸ್ ಕುಟುಕಿದೆ.

“ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ” ಎಂದು ಹರಿಹಾಯ್ದಿದೆ.

“20 ದಿನಗಳ ಹಿಂದೆ ಸಚಿವ ಅಶ್ವತ್‌ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ” ಎಂದು ಸ್ಪಷ್ಟಪಡಿಸಿದೆ.

“ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?” ಎಂದು ಅಣಕ ಮಾಡಿದೆ.

“ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?” ಎಂದು ಕೇಳಿದೆ.

“ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’, ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ಕರ್ನಾಟಕ ಬಿಜೆಪಿ ನೋಡಲಿಲ್ಲವೆ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿರಿ: ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

“ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?” ಎಂದು ಟೀಕಾಪ್ರಹಾರ ನಡೆಸಿದೆ.

“ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ” ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...