Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...