Homeಮುಖಪುಟಶಾಸಕ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಬಂಧನ

ಶಾಸಕ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಬಂಧನ

- Advertisement -
- Advertisement -

ಚಿತ್ತಾಪುರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಎಂಬುವವರನ್ನು ಕಲಬುರಗಿ ನಗರದ ಬ್ರಹ್ಮಪುರ ಪೊಲೀಸರು ಹೈದರಾಬಾದ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

“ನಿಮ್ಮನ್ನು ಶೂಟ್ ಮಾಡಲು ನಾವು ರೆಡಿ ಇದ್ದೀವಿ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಇತ್ತೀಚೆಗೆ ಬೆದರಿಕೆ ಹಾಕಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, “ನೀವು ಎಕೆ-47ನಿಂದ ಶೂಟ್ ಮಾಡುವಿರಾ? ಅಥವಾ ತೋಪ್‌ನಿಂದ ಮಾಡೋದಿದೆಯಾ? ನೀವು ಶೂಟ್ ಮಾಡಿ, ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ” ಎನ್ನುವ ಮೂಲಕ ಬಂದೂಕಿನ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿದ್ದರು.

ಈ ಹೇಳಿಕೆಯನ್ನು ಖಂಡಿಸಿ ಆರೋಪಿಯನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸಹ ಆ ಬಿಜೆಪಿ ರೌಡಿಯನ್ನು ಬಂಧಿಸಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತಿಪ್ಪಣಪ್ಪ ಕುಮಕನೂರರವರು ಕಲಬುರಗಿಯ ಬ್ರಹ್ಮಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ದೂರಿನ ಮೇರೆಗೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ಧ ಪ್ರಕರಣ ದಾಖಲಾಗಿರುವುದು ತಿಳಿಯುತ್ತಲೇ ಆರೋಪಿ ಮಣಿಕಂಠ ರಾಠೋಡ್‌ ನಾಪತ್ತೆಯಾಗಿದ್ದರು. ಅವರ ಪತ್ತೆಯಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಹೈದರಾಬಾದ್‌ನಲ್ಲಿ ಅಡಗಿರುವ ಸುಳಿವು ಹಿನ್ನೆಲೆಯಲ್ಲಿ 5 ಜನರ ಪೊಲೀಸ್ ತಂಡ ಹೈದರಾಬಾದ್‌ಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ಪ್ರಿಯಾಂಕ್ ಖರ್ಗೆಯವರು “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶೂಟ್ ಬೆದರಿಕೆ ಹಾಕಲಾಗಿತ್ತು.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ಪ್ರಿಯಾಂಕ್ ಖರ್ಗೆಯವರು “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದನ್ನು ಖಂಡಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಶೂಟ್ ಬೆದರಿಕೆ ಹಾಕಲಾಗಿತ್ತು.

ಇದನ್ನೂ ಓದಿ; ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...