Homeಮುಖಪುಟರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

ರಾಮದಾಸ್‌ v/s ಪ್ರತಾಪ್‌ಸಿಂಹ ಒಳಜಗಳದಲ್ಲಿ ‘ಗುಂಬಜ್‌’ ವಿವಾದ ಹುಟ್ಟಿತೇ?

“ಮೈಸೂರಿನ ಬಿಜೆಪಿ ಮುಖಂಡರ ನಡುವಿನ ಒಳಸಮರ ಗುಂಬಜ್‌ ಮಾದರಿ ಬಸ್‌ ನಿಲ್ದಾಣದ ನೆಪದಲ್ಲಿ ಮತ್ತೆ ಸ್ಫೋಟಗೊಂಡಿದೆ”

- Advertisement -
- Advertisement -

ಮೈಸೂರು ನಗರದ ಊಟಿ‌ ರಸ್ತೆಯ‌ ಜೆಎಸ್ಎಸ್ ಕಾಲೇಜು ಬಳಿ ನಿರ್ಮಿಸಿರುವ ಬಸ್ ನಿಲ್ದಾಣದ ಮೇಲಿನ ಗುಮ್ಮಟ(ಗುಂಬಜ್)ದ ಮಾದರಿಯ ವಿನ್ಯಾಸವನ್ನು ಕೆಡವುತ್ತೇನೆ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಂಗಾಯಣದಲ್ಲಿ ಭಾನುವಾರ ನಡೆದ ‘ಟಿಪ್ಪು ನಿಜಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, “ಗುತ್ತಿಗೆದಾರರೊಬ್ಬರು ಮಸೀದಿ ಗುಂಬಜ್‌ ಹೋಲುವ ಬಸ್‌ ನಿಲ್ದಾಣ ನಿರ್ಮಿಸಿದ್ದಾರೆ. ಇದನ್ನು ಬದಲಿಸಲು 3 ದಿನಗಳ ಗಡುವು ನೀಡಿದ್ದೇನೆ. ಬದಲಿಸದಿದ್ದರೆ, ಜೆಸಿಬಿ ತರಿಸಿ ಕೆಡವಿಸುತ್ತೇನೆ” ಎಂದಿದ್ದರು.

“ತದನಂತರ ರಾತ್ರೋರಾತ್ರಿ ಗುಮ್ಮಟದ ವಿನ್ಯಾಸದ ಮೇಲೆ ಕಳಶಗಳನ್ನು ಜೋಡಿಸಿ, ಹಿಂದೂ ಧಾರ್ಮಿಕತೆ ಪ್ರದರ್ಶಿಸಲಾಗಿದೆ. ತಂಗುದಾಣದ ಒಳಗೆ ಅರಮನೆ ಚಿತ್ರ, ಶಾಸಕ ಎಸ್‌.ಎ.ರಾಮದಾಸ್ ಹಾಗೂ ಚಾಮುಂಡೇಶ್ವರಿ ದೇವಸ್ಥಾನದ ಫೋಟೋಗಳನ್ನು ಹಾಕಲಾಗಿದೆ” ಎಂದು ಮಾಧ್ಯಮಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಗುಂಬಜ್‌ ಮಾದರಿಯ ಕಟ್ಟಡವಲ್ಲ, ಅರಮನೆ ಶೈಲಿಯ ಕಟ್ಟಡ” ಎಂಬ ಸಮರ್ಥನೆಗಳನ್ನು ರಾಮದಾಸ್ ಬೆಂಬಲಿಗರು ನೀಡುತ್ತಿದ್ದಾರೆ. “ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ನಿರ್ಮಿಸಿರುವುದು ಅರಮನೆಯ ಮಾದರಿಯ ಗೋಪುರವೇ ಹೊರತು, ಗುಂಬಜ್ ಅಲ್ಲ‌. ಶಾಸಕರೇ ಮುತುವರ್ಜಿ ವಹಿಸಿ ಈ ಮಾದರಿ ನಿರ್ಮಾಣಕ್ಕೆ ಕ್ರಮ ವಹಿಸಿದ್ದಾರೆ” ಎಂದು ಬಸ್‌ ನಿಲ್ದಾಣ ನಿರ್ಮಿಸಿದ ಕೆಆರ್‌ಡಿಎಲ್‌ ಎಂಜಿನಿಯರ್ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ಶಾಸಕರ ಅನುದಾನದಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೂಲ ವಿನ್ಯಾಸದಲ್ಲಿ ಚಾವಣಿಯ ಮೇಲೆ ಯಾವುದೇ ಆಕೃತಿ ರಚಿಸುವ ಯೋಜನೆ ಇರಲಿಲ್ಲ. ಶಾಸಕರು ಪರಿಚಿತ ಗುತ್ತಿಗೆದಾರರಿಂದ ಅರಮನೆಯಂತೆ ಗೋಪುರ ನಿರ್ಮಿಸಿದ್ದಾರೆ. ಇದಕ್ಕೂ‌ ನಮಗೂ ಸಂಬಂಧವಿಲ್ಲ” ಎಂದಿದ್ದಾರೆ.

ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದರೆ ಈ ವಿವಾದದ ಸುತ್ತ ಬೇರೆಯೇ ರಾಜಕೀಯ ಕೆಲಸ ಮಾಡುತ್ತಿದೆ. ಮೈಸೂರು ಭಾಗದ ಬಿಜೆಪಿಯೊಳಗಿನ ನಾಯಕತ್ವ ಸಮರವೇ ಈ ವಿವಾದದ ಕೇಂದ್ರಬಿಂದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

“ಈ ಪ್ರಕರಣವನ್ನು ಮೇಲುನೋಟಕ್ಕೆ ನೋಡಿದರೆ- ಹಿಂದೂ ಮುಸ್ಲಿಂ ಕೇಂದ್ರಿತ ರಾಜಕಾರಣವಾಗಿ ಕಾಣುತ್ತದೆ. ಅದಕ್ಕಿಂತ ಮುಖ್ಯವಾಗಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್‌ ಮತ್ತು ಸಂಸದ ಪ್ರತಾಪಸಿಂಹ ನಡುವಿನ ಜಟಾಪಟಿಯೇ ಈ ವಿವಾದಕ್ಕೆ ಕಾರಣ” ಎನ್ನುತ್ತಾರೆ ಸ್ಥಳೀಯರು.

ಈ ಇಬ್ಬರ ನಡುವೆ ಮೈಸೂರು ಭಾಗದಲ್ಲಿ ಆಗಾಗ್ಗೆ ವೈಮಸ್ಸುಗಳು ತಲೆದೋರಿವೆ. ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ, ಈ ಭಾಗದಲ್ಲಿ ಬಿಜೆಪಿಯೊಳಗೆ ನಿರಂತರ ಸಮರ ನಡೆಯುತ್ತಿದೆ.

ಪ್ರತಾಪ್‌ಸಿಂಹ ಹಾಗೂ ರಾಮದಾಸ್ ನಡುವಿನ ಜಟಾಪಟಿ ಇತಿಹಾಸವು ಸುಯೇಜ್ ಫಾರಂ ವಿವಾದದಲ್ಲಿ ಸ್ಫೋಟಗೊಳ್ಳುತ್ತದೆ. ಎರಡು ವರ್ಷಗಳ ಹಿಂದೆ ಸೂಯೇಜ್‌ ಫಾರಂ ವಿಚಾರಕ್ಕೆ ಪ್ರತಾಪ್ ಸಿಂಹ ಕೈಹಾಕಿದ್ದಕ್ಕೆ ರಾಮದಾಸ್ ಸಿಡಿಮಿಡಿಗೊಂಡಿದ್ದರು. ತನ್ನ ಕ್ಷೇತ್ರದ ವಿಚಾರದಲ್ಲಿ ಸಂಸದರು ತಲೆಹಾಕುತ್ತಿರುವುದು ಶಾಸಕರಿಗೆ ಇರಸುಮುರುಸು ಉಂಟು ಮಾಡಿತು.

ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅಧ್ಯಕ್ಷತೆಯಲ್ಲಿ 2020ರ ಮೇನಲ್ಲಿ ನಡೆದಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಸಂಸದ ಮತ್ತು ಶಾಸಕರ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಸಚಿವ ಎಸ್.ಟಿ.ಸೋಮಶೇಖರ್ ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು.

“ಸುಯೇಜ್‌ ಫಾರಂ ಕಸ ವಿಲೇವಾರಿ ಸಂಬಂಧ ವರ್ಕ್ ಆರ್ಡರ್‌ ನೀಡಲಾಗಿದೆ” ಎಂದು ಪ್ರತಾಪ ಸಿಂಹ ಹೇಳಿದರೆ, “ಈ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ” ಎಂದು ರಾಮದಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಈ ಯೋಜನೆ ನನ್ನ ಗಮನಕ್ಕೂ ಬಂದಿಲ್ಲ. ಆದರೂ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಕತ್ತಲಿನಲ್ಲಿ ಕೆಲಸ ಮಾಡುವಂತೆ ಮಾಡಿದ್ದಾರೆ. ನಾಗ್ಪುರ ಮಾದರಿಯಲ್ಲಿಯೇ ಕಸ ವಿಂಗಡಣೆ ಮಾಡಿ. ಆದರೆ ಸುಯೇಜ್ ಫಾರಂನಲ್ಲಿ ಮಾಡುವುದಕ್ಕಿಂತ ರಾಯನಕೆರೆಯಲ್ಲಿ ನಿಗದಿಪಡಿಸಿರುವ 110 ಎಕರೆ ಪ್ರದೇಶದಲ್ಲಿ ಮಾಡಬೇಕು” ಎಂದು ಆಗ್ರಹಿಸಿದ್ದರು.

“ಸುಯೇಜ್ ಫಾರಂನಲ್ಲಿ 5 ಘಟಕಗಳನ್ನು ಸ್ಥಾಪಿಸಿ, 15 ಯಂತ್ರಗಳಿಂದ ಗೊಬ್ಬರ ತಯಾರಿಕೆ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕೆ ರೂಪುರೇಷೆಗಳನ್ನು ರಚಿಸಿ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು. 25 ವರ್ಷದಿಂದ ಇಲ್ಲಿನ ಸಾರ್ವಜನಿಕರು ಅನಾರೋಗ್ಯಕ್ಕೊಳಗಾಗಿದ್ದಾರೆ. ಇದನ್ನು ಮೊದಲು ಕೊನೆಗಾಣಿಸಿ. ಸಂಸದ ಪ್ರತಾಪ್ ಸಿಂಹ ಅವರಿಗೂ ನನಗೂ ಯಾವುದೇ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ. ಅವರು ರಾಷ್ಟ್ರೀಯ ನಾಯಕರು. ನಾನು ಸ್ಥಳೀಯ ಕಾರ್ಯಕರ್ತ. 25 ವರ್ಷದಿಂದ ಮೈಸೂರು ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಸಚಿವರು ಏನೂ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ದೂರದೃಷ್ಟಿತ್ವದ ಬಗ್ಗೆ ನಾನು ಹೇಳುತ್ತಿದ್ದೇನೆ ಅಷ್ಟೇ” ಎಂದು ರಾಮದಾಸ್ ತಿರುಗೇಟು ನೀಡಿದ್ದರು.

ramdas tweet

ಕೆಲವು ತಿಂಗಳ ಹಿಂದೆ ಇಬ್ಬರ ನಡುವೆ ಪೈಪೋಟಿ ಮತ್ತೆ ಮುನ್ನೆಲೆಗೆ ಬಂದಿತು. ನಗರದಲ್ಲಿ ರಸ್ತೆಗಳನ್ನು ಅಗೆದು ಗ್ಯಾಸ್ ಪೈಪ್‌ಲೈನ್‌ಗಳನ್ನು ಹಾಕುವ ಯೋಜನೆಯನ್ನು ರಾಮದಾಸ್‌ ಕೆಲವು ತಿಂಗಳ ಹಿಂದಷ್ಟೇ ವಿರೋಧಿಸಿದ್ದರು. ಇದಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್‌.ನಾಗೇಂದ್ರ ಅವರೂ ರಾಮದಾಸ್‌ ನಿಲುವನ್ನು ಬೆಂಬಲಿಸಿದ್ದರು.

ರಸ್ತೆಯನ್ನು ಅಗೆಯುವ ಯೋಜನೆಯನ್ನು ಬೆಂಬಲಿಸಬಾರದು ಎಂದು ಮೈಸೂರು ಪಾಲಿಕೆಗೆ ರಾಮದಾಸ್ ಕೋರಿದ್ದರು. ಅದಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿ, “ಗ್ಯಾಸ್ ಪೈಪ್‌ಲೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲವಿದೆ” ಎಂದಿದ್ದರು. ಈ ಭಿನ್ನಮತವು ಯೋಗ ದಿನಾಚರಣೆಯ ಹೊಸ್ತಿಲಲ್ಲೂ ತಲೆದೋರಿತ್ತು.

ಪ್ರಧಾನಿ ಮೋದಿಯವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಬರಲಿದ್ದರು. ಇದರಲ್ಲಿ ಮೈಲೇಜ್‌ ಪಡೆಯುವುದಕ್ಕಾಗಿ ಸಂಸದರು, ಶಾಸಕರು ಪ್ರಯತ್ನಿಸಿದ್ದರು. ಎಷ್ಟು ಜನರನ್ನು ಕಾರ್ಯಕ್ರಮಕ್ಕೆ ಸೇರಿಸಲಾಗುತ್ತದೆ ಎಂಬ ವಿಚಾರವಾಗಿಯೂ ಮಾಧ್ಯಮಗಳೆದುರು ಈ ಇಬ್ಬರು ಬಿಜೆಪಿಗರು ಕಿತಾಪತಿ ಮಾಡಿಕೊಂಡಿದ್ದರು.

ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಪ್ರತಾಪ್‌ ಸಿಂಹ, “ಮೈಸೂರು ಅರಮನೆ ಮೈದಾನದಲ್ಲಿ ಒಬ್ಬರು ಯೋಗ ಮಾಡಬೇಕಾದರೆ 6*6 ಜಾಗಬೇಕಾಗುತ್ತದೆ. ಅದರನ್ವಯ ಅರಮನೆ ಮೈದಾನದಲ್ಲಿ ಏಳರಿಂದ ಎಂಟು ಸಾವಿರ ಜನ ಸೇರಬಹುದು” ಎಂದು ಹೇಳಿದ್ದರು. ಸಂಸದರು ಮಾತನಾಡುತ್ತಿರುವಾಗಲೇ ರಾಮದಾಸ್‌ ಮಾತಿಗೆ ಮುಂದಾಗಿ, “ಹದಿನೈದು ಸಾವಿರ ಜನ ಈಗಾಗಲೇ ಆರ್ಡರ್‌ ಮಾಡಿದ್ದಾರೆ” ಎಂದಿದ್ದರು. ಅದಕ್ಕೆ ಪ್ರತಾಪ್‌, “ನಾನು ಮಾತನಾಡುತ್ತಿದ್ದೇನೆ. ರಾಮದಾಸ್ ಅವರು ಸಮಾಧಾನದಿಂದ ಇರಬೇಕು” ಎಂದಿದ್ದು ವಿಡಿಯೊದಲ್ಲಿ ರೆಕಾರ್ಡ್ ಆಗಿತ್ತು. ನಂತರ ಪ್ರತಿಕ್ರಿಯಿಸಿದ್ದ ರಾಮದಾಸ್‌, “ಸಂಸದರಿಗೆ ಮಾಹಿತಿ ಇರಲಿಲ್ಲ. ಅದಕ್ಕಾಗಿ ಮಾತನಾಡಿದೆ. ಈಗಾಗಲೇ ನಮಗೆ ಕ್ಲಿಯರೆನ್ಸ್ ಮಾಡಿಕೊಟ್ಟಿರುವುದು ಸಂಸದರಿಗೆ ಗೊತ್ತಿರಲಿಲ್ಲ. ನಿಮಗೆ ಗೊಂದಲವಾಗಬಾರದು ಎಂದು ಮಾತಿನ ಮಧ್ಯೆ ಸ್ಪಷ್ಟನೆ ನೀಡಿದೆ” ಎಂದು ಸಮರ್ಥಿಸಿದ್ದರು.

ಇದನ್ನೂ ಓದಿರಿ: ತಿರುಚಿದ ಟಿಪ್ಪು ಇತಿಹಾಸವನ್ನು ‘ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಈಗ ‘ಗುಂಬಜ್‌’ ವಿವಾದ…

ರಾಮದಾಸ್ ಕ್ಷೇತ್ರದಲ್ಲಿನ ಬಸ್ ನಿಲ್ದಾಣದ ಕುರಿತು ಪ್ರತಾಪ್ ಸಿಂಹ ಬೇಕಂತಲೇ ಕಿತಾಪತಿ ಮಾಡಿದ್ದಾರೆಂದು ಸ್ಥಳೀಯ ಮೂಲಗಳು ಹೇಳುತ್ತವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮೈಸೂರನ್ನು ಯಾರು ಹಿಡಿತದಲ್ಲಿ ಇಟ್ಟುಕೊಳ್ಳಬೇಕೆಂಬ ಪೈಪೋಟಿಯ ಭಾಗವೇ ಈ ಗುಂಬಜ್‌ ವಿವಾದ. ಕಾಮಗಾರಿ ಮುಗಿಯುವ ಹಂತದಲ್ಲಿದೆ. ಅಷ್ಟರಲ್ಲಿಯೇ ಈ ಜಟಾಪಟಿ ನಡೆಸಿದ್ದಾರೆ. ಕಾಮಗಾರಿ ಮಾಡುತ್ತಿರುವುದು ಸರ್ಕಾರಿ ಹಣದಲ್ಲಿ, ರೂಪುರೇಷೆ ಮಾಡಿದ್ದು ಬಿಜೆಪಿ ಎಂಎಲ್‌ಎ ರಾಮದಾಸ್. ಅವರದ್ದೇ ಸರ್ಕಾರದ ಶಾಸಕರು ಕಟ್ಟಿಸಿದ್ದನ್ನು ಒಡೆದು ಹಾಕುವುದಾಗಿ ಪ್ರತಾಪ್‌ ಹೇಳುತ್ತಿದ್ದಾರೆ” ಎಂದು ವಿವರಿಸಿದರು.

“ಮೈಸೂರು ಅರಮನೆ ಮೇಲೆ ಗೊಮ್ಮಟಗಳಿವೆ. ಕಾರಂಜಿ ಮಹಲ್‌, ಜಗನ್ಮೋಹನ ಪಾಲೇಸ್‌, ಲಲಿತ ಮಹಲ್‌, ಮೈಸೂರು ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಗುಂಬಜ್‌ಗಳಿವೆ. ಆ ಎಲ್ಲವೂ ಮಸೀದಿ ರೀತಿ ಕಾಣುವುದಾದರೆ, ಪ್ರತಾಪ್‌ಸಿಂಹ ಅಲ್ಲಿಗೆ ಕಾಲಿಡುವುದಿಲ್ಲವೇ? ಅವುಗಳನ್ನು ಒಡೆದು ಹಾಕುತ್ತಾರೆಯೇ?” ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

“ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ತಪ್ಪಿಸಬೇಕೆಂದು ರಾಮದಾಸ್‌ ಪ್ರಯತ್ನಪಡುತ್ತಿದ್ದರೆ, ರಾಮದಾಸ್‌ಗೆ ಟಿಕೆಟ್ ತಪ್ಪಿಸಬೇಕೆಂದು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ” ಎಂದು ಸ್ಥಳೀಯ ಪತ್ರಕರ್ತರು ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೋ ಫಿಟ್ಟಿಂಗ್ ಇಟ್ಟಿರ್ಬೇಕು, ಕೋಮುಗಲಭೆ ಸ್ಟಾರ್ಟ್ ಆಗ್ಲಿ ಅಂತ ಆದರೆ ಇವರಿಗೆ ಸ್ವಂತಿಕೆ ಬುದ್ಧಿಯೇ ಇಲ್ಲ ಎಂಬಂತೆ ಕಾಣುತ್ತಿದೆ ಆದರೆ ಈ ಕೊಳಕು ಕೋಮುವಾದ ಇಷ್ಟೊಂದು ರೀತಿಯಲ್ಲಿ ಕಿಚ್ಚು ಮನಸ್ಸಿಂದ ಕಕ್ಕಬಾರದು ರಾಜಕೀಯದವರಿಗೆ ಯಾವಾಗಲೂ ಪ್ರಾಮಾಣಿಕತೆ ಸಹನೆ ಸಹಬಾಳುವೆ ಪ್ರೀತಿ ಮನೋಭಾವ ಇರಬೇಕು ……ಸ್ಥಳದಲ್ಲಿ ಜಡ್ಜ್ಮೆಂಟ್ ಕೊಡುವಂತಹ ನಾಯ ಕತ್ವ ಇರಬೇಕು

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...