Homeಅಂತರಾಷ್ಟ್ರೀಯ5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸ್ವರ್ಗದಿಂದ ಉದುರುತ್ತಿಲ್ಲ: ಪ್ರಣಬ್ ಮುಖರ್ಜಿ ಕಟುನುಡಿ ಆಡಿದರೇಕೆ?

ಆರ್ಥಿಕ ಬೆಳವಣಿಗೆಗೆ ತಾನೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ಸರ್ಕಾರಕ್ಕೆ ಮಾಜಿ ರಾಷ್ಟ್ರಪತಿ ನೇರವಾಗಿ ಬಿಸಿ ಮುಟ್ಟಿಸಿದ್ದಾರೆ.

- Advertisement -
- Advertisement -

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿರೀಕ್ಷಿತವಾಗಿ ಕಟುನುಡಿಗಳನ್ನು ಆಡಿದ್ದು, ಮೋದಿ ಸರ್ಕಾರ ಮತ್ತು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್‍ರಿಗೆ ಮುಜುಗರವುಂಟಾಗಿದೆ. ನಿನ್ನೆ ದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಬಜೆಟ್ ಮಂಡನೆ ಮಾಡುತ್ತಾ ಹಣಕಾಸು ಸಚಿವೆ 2024ರೊಳಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಯುತ್ತದೆ ಎಂದಿದ್ದಾರೆ. ಆದರೆ, ಅದು ಸ್ವರ್ಗದಿಂದ ಉದುರುತ್ತಿಲ್ಲ. ಅದಕ್ಕೊಂದು ಗಟ್ಟಿಯಾದ ತಳಹದಿ ಕಾರಣವಾಗಿದೆ ಮತ್ತು ಆ ತಳಹದಿಯನ್ನು ಬ್ರಿಟಿಷರು ಕಟ್ಟಿದ್ದಲ್ಲ. ಸ್ವತಂತ್ರಾನಂತರ ಭಾರತೀಯರು ಕಟ್ಟಿದ ತಳಹದಿ ಅದು’ ಎಂದು ಹೇಳಿರುವುದನ್ನು ಎಎನ್‍ಐ ಮೂಲಗಳನ್ನು ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

ಸಾಮಾನ್ಯವಾಗಿ ಕಟುಮಾತುಗಳನ್ನು ಆಡದ ಅವರು ಈ ಕಾರ್ಯಕ್ರಮದಲ್ಲಿ ನಿಷ್ಠುರವಾದ ಹಲವು ಸಂಗತಿಗಳನ್ನು ಮುಂದಿಟ್ಟಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ವಿಚಾರದಲ್ಲಿ ಪ್ರಧಾನಿ ಮೋದಿಯವರೂ ಒಳಗೊಂಡಂತೆ ಬಿಜೆಪಿಯ ಹಲವು ನಾಯಕರು ತಮ್ಮ ಸಾಧನೆಯೆಂಬಂತೆ ಹೇಳಿಕೊಳ್ಳುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

‘55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ಟೀಕೆ ಮಾಡುವವರು ಸ್ವತಂತ್ರಗೊಂಡಾಗ ಭಾರತ ಎಲ್ಲಿತ್ತು ಮತ್ತು ನಾವು ಅಲ್ಲಿಂದ ಎಷ್ಟು ಮುಂದೆ ಬಂದಿದ್ದೇವೆ ಎಂಬುದನ್ನು ಮರೆಯುತ್ತಿದ್ದಾರೆ. ಇದಕ್ಕೆ ಇತರರ ಕೊಡುಗೆಯೂ ಇದೆ. ಆದರೆ, ಯೋಜಿತ ಆರ್ಥಿಕ ನೀತಿಯ ಮೇಲೆ ವಿಶ್ವಾಸವಿಟ್ಟಿದ್ದ ನಮ್ಮ ಹಿಂದಿನವರೇ ಆಧುನಿಕ ಭಾರತಕ್ಕೆ ಅಡಿಪಾಯ ಹಾಕಿದ್ದು. ಆದರೆ ಇಂದು ಯೋಜನಾ ಆಯೋಗವನ್ನೇ ರದ್ದುಗೊಳಿಸಿದ ಕ್ರಮಕ್ಕಿಂತ ಭಿನ್ನವಾದ ಕ್ರಮಗಳಿಂದ ಅದನ್ನು ಸಾಧಿಸಿದ್ದರು’ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುತ್ತಿದ್ದ ಯೋಜನಾ ಆಯೋಗವನ್ನು ಮೋದಿ ಸರ್ಕಾರ 2014ರಲ್ಲಿ ಬಂದ ಕೆಲಕಾಲದಲ್ಲೇ ರದ್ದುಗೊಳಿಸಲಾಯಿತು. ಅದರ ಬದಲಿಗೆ ಸರ್ಕಾರೀ ಚಿಂತನಾಕೂಟವಾದ ನೀತಿ ಆಯೋಗವನ್ನು ಸ್ಥಾಪಿಸಲಾಯಿತು.

‘50-55 ವರ್ಷಗಳ ಕಾಂಗ್ರೆಸ್ ಆಡಳಿತವನ್ನು ದೂಷಿಸುವವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪರಿಸ್ಥಿತಿ ಏನಿತ್ತು, ಅದು ಅಧಿಕಾರ ಕಳೆದುಕೊಂಡಾಗ ಎಂತಹ ಆರ್ಥಿಕತೆಯನ್ನು ಕಟ್ಟಿದ್ದರು ಎಂಬುದನ್ನು ಮರೆಯಬಾರದು. ಇಂದು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆ ಕಡೆಗೆ ನಾವು ಹೋಗುತ್ತಿದ್ದೇವೆ ಎಂದರೆ, ಶೂನ್ಯದಿಂದ 1.8 ಟ್ರಿಲಿಯನ್ ಡಾಲರ್‍ಗಳವರೆಗೆ ಬಂದಿದ್ದೇ ಅದಕ್ಕೆ ಅಡಿಪಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

2012ರಲ್ಲಿ ರಾಷ್ಟ್ರಪತಿಯಾಗುವ ಮುಂಚೆ ಮುಖರ್ಜಿಯವರು ಹಲವು ಸಾರಿ ಹಣಕಾಸು ಸಚಿವರಾಗಿದ್ದರು. ಅವರ ಪ್ರಕಾರ ಮುಂದೊಂದು ದಿನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಬೇಕಾದ ತಳಹದಿ ರೂಪಿಸಿದ್ದು ಜವಹರಲಾಲ್ ನೆಹರೂ, ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಸರ್ಕಾರ ಸೇರಿದಂತೆ ಹಿಂದಿನ ಎಲ್ಲಾ ಸರ್ಕಾರಗಳು.

ಭಾರತವು ನೆಗೆತಗಳಲ್ಲಿ ಅಭಿವೃದ್ಧಿ ಸಾಧಿಸಿದೆ ಎಂದರೆ ಅದಕ್ಕೆ ನೆಹರೂ ಮತ್ತಿತರರು ಸ್ಥಾಪಿಸಿದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕ್ ಜಾಲ ಇತ್ಯಾದಿಗಳು ಕಾರಣ. ಇದರ ಆಧಾರದ ಮೇಲೆ ಡಾ.ಮನಮೋಹನ್‍ಸಿಂಗ್ ಮತ್ತು ನರಸಿಂಹರಾವ್ ಅವರು ಆರ್ಥಿಕ ಉದಾರೀಕರಣವನ್ನು ಜಾರಿಗೊಳಿಸಿದರು. ಅದು ಭಾರತದ ಆರ್ಥಿಕ ಸಾಮಥ್ರ್ಯವನ್ನು ಅನಾವರಣಗೊಳಿಸಿತು. ಅದರ ಆಧಾರದ ಮೇಲೆ ಇಂದಿನ ಹಣಕಾಸು ಸಚಿವರು ಭಾರತವು 5 ಟ್ರಿಲಿಯನ್ ಡಾಲರ್‍ಗಳ ಆರ್ಥಿಕತೆಯಾಗಲಿದೆ ಎಂದು ಹೇಳಿಕೊಳ್ಳಬಹುದು’ ಎಂಬುದು ಮುಖರ್ಜಿಯವರ ಸ್ಪಷ್ಟ ನುಡಿಗಳಾಗಿತ್ತು.

ಇದರ ಜೊತೆಗೆ ಅವರು ಸಾರ್ವಜನಿಕ ವಲಯದಲ್ಲಿ ಬೆಳೆಯುತ್ತಿರುವ ಹಿಂಸೆಯ ಮತ್ತು ಸಾಮಾಜಿಕ ಹಾಗೂ ರಾಜಕೀಯ ವಿಕೃತಿಗಳ ಬಗ್ಗೆ ಎಚ್ಚರಿಸಿದರು. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಕುರಿತೂ ಮಾತಾಡಿದ್ದಾರೆ.

ಸಾಮಾನ್ಯವಾಗಿ ತನ್ನ ಅಭಿಪ್ರಾಯಗಳನ್ನು ಈ ರೀತಿ ವ್ಯಕ್ತಪಡಿಸದ ಪ್ರಣಬ್ ಮುಖರ್ಜಿಯವರಿಗೆ ಮೋದಿ ಸರ್ಕಾರವು ಕೆಲವು ವಿಚಾರಗಳ ಬಗ್ಗೆ ತನ್ನದೇ ಸಾಧನೆ ಎಂದು ಕೊಚ್ಚಿಕೊಳ್ಳುತ್ತಿರುವುದನ್ನು ನೋಡಿ ಸಿಟ್ಟು ಬಂದಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...