Homeಮುಖಪುಟಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

ಗುಜರಾತ್‌: ನಾಮಪತ್ರ ಹಿಂಪಡೆಯಲು ಒತ್ತಾಯಿಸಿ ಆಪ್‌ ಅಭ್ಯರ್ಥಿಯನ್ನು ಎಳೆದೊಯ್ದ ಬಿಜೆಪಿ- ಎಎಪಿ ಆರೋಪ

- Advertisement -
- Advertisement -

“ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಬಿಜೆಪಿ ಗೂಂಡಾಗಳು ಹಾಗೂ ಪೊಲೀಸರು ಎಳೆದೊಯ್ದಿದ್ದಾರೆ” ಎಂದು ಆರೋಪಿಸಿರುವ ಎಎಪಿ ವಿಡಿಯೊ ಬಿಡುಗಡೆ ಮಾಡಿದೆ.

ಈ ಕುರಿತು ವಿಡಿಯೊ ತುಣುಕು ಟ್ವೀಟ್ ಮಾಡಿರುವ ಎಎಪಿ ನಾಯಕ ರಾಘವ್ ಚಡ್ಡ, “ಪೊಲೀಸರು ಮತ್ತು ಬಿಜೆಪಿ ಗೂಂಡಾಗಳು ಹೇಗೆ ಒಟ್ಟಾಗಿ ನಮ್ಮ ಸೂರತ್ ಪೂರ್ವ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ತಮ್ಮ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿ ಆರ್‌ಒ ಕಚೇರಿಗೆ ಎಳೆದೊಯ್ದಿದ್ದಾರೆ ಎಂಬುದನ್ನು ನೋಡಿರಿ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎಂಬ ಪದವೇ ಜೋಕ್ ಆಗಿಬಿಟ್ಟಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್‌ನಲ್ಲಿ ತನ್ನ ಅಭ್ಯರ್ಥಿಯೊಬ್ಬರನ್ನು ಅಪಹರಣ ಮಾಡಲಾಗಿದೆ ಮತ್ತು ಮುಂದಿನ ತಿಂಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಒತ್ತಾಯಿಸಿ ನಾಮಪತ್ರವನ್ನು ಹಿಂಪಡೆಯಲು ಯತ್ನಿಸಲಾಗಿದೆ ಎಂದು ಎಎಪಿ ದೂರಲು ಆರಂಭಿಸಿತು.

ಸೂರತ್ (ಪೂರ್ವ) ಕ್ಷೇತ್ರದ ಅಭ್ಯರ್ಥಿ ಕಾಂಚನ್ ಜರಿವಾಲಾ ನಿನ್ನೆಯಿಂದ ಕಾಣೆಯಾಗಿದ್ದಾರೆ ಎಂದು ಎಎಪಿ ಟ್ವೀಟ್‌ ಮಾಡುವ ಮೂಲಕ ಆರೋಪಿಸಲಾರಂಭಿಸಿತು. ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರನ್ನು ಬಿಜೆಪಿ ಅಪಹರಿಸಿದೆ ಎಂದು ಮನೀಶ್ ಸಿಸೋಡಿಯಾ ಹೇಳಿಕೆ ನೀಡಿದರು.

ಸ್ವಲ್ಪ ಸಮಯದ ನಂತರ ಸಿಸೋಡಿಯಾ ಟ್ವೀಟ್ ಮಾಡಿ, “ಜರಿವಾಲಾ ಪತ್ತೆಯಾಗಿದ್ದಾರೆ. 500 ಪೊಲೀಸರು ಸುತ್ತುವರೆದಿದ್ದು, ಗುಜರಾತ್ ಚುನಾವಣಾ ರಿಟರ್ನಿಂಗ್ ಕಚೇರಿಗೆ ಕರೆತರಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಜರಿವಾಲ ಅವರ ಮೇಲೆ ನಾಮಪತ್ರ ಹಿಂಪಡೆಯುವ ಒತ್ತಡ ಹೇರಲಾಗಿದೆ. ಅವರನ್ನು ಚುನಾವಣಾ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಗಿದೆ. ಪೊಲೀಸರಿಂದ ಒತ್ತಡ ತರಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಡ್ಡಿದ ಬಹಿರಂಗ ಬೆದರಿಕೆಯಾಗಿದೆ ಎಂದು ನಾನು ಚುನಾವಣಾ ಆಯೋಗಕ್ಕೆ ಹೇಳಲು ಬಯಸುತ್ತೇನೆ” ಎಂದು ಸಿಸೋಡಿಯಾ ಪ್ರತಿಕ್ರಿಯಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಇದೆ. ಆದ್ದರಿಂದ ಎಎಪಿ ಅಭ್ಯರ್ಥಿಯನ್ನು ಅಪಹರಿಸಲು ಮುಂದಾಗಿದೆ ಎಂದು ಸಿಸೋಡಿಯಾ ದೂರಿದ್ದಾರೆ.

ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ಸದಸ್ಯರು ನಿನ್ನೆ ನಾಮಪತ್ರ ಪರಿಶೀಲನೆಗೆ ಹೋದಾಗ ನಾಪತ್ತೆಯಾಗಿದ್ದರು. ಅವರು ತಮ್ಮ ನಾಮಪತ್ರ ಪರಿಶೀಲನೆಯ ನಂತರ ಕಚೇರಿಯಿಂದ ಹೊರಬಂದ ಕ್ಷಣ, ಬಿಜೆಪಿಯ ಗೂಂಡಾಗಳು ಜರಿವಾಲ ಅವರನ್ನು ಎಳೆದೋಯ್ದರು ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಇದು ಅಪಾಯಕಾರಿ. ಇದು ಕೇವಲ ಅಭ್ಯರ್ಥಿಯ ಅಪಹರಣವಲ್ಲ, ಪ್ರಜಾಪ್ರಭುತ್ವದ ಅಪಹರಣವಾಗಿದೆ” ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಎಎಪಿ ಆರೋಪಗಳಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗುಜರಾತ್‌ನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಆಡಳಿತರೂಢ ಬಿಜೆಪಿಯು ಈ ಬಾರಿ ಎಎಪಿಯಿಂದ ಆಕ್ರಮಣಕಾರಿ ಸವಾಲನ್ನು ಎದುರಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ರಾಜ್ಯದಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುತ್ತಿತ್ತು. ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ.

ಡಿಸೆಂಬರ್ 1 ಮತ್ತು 5 ರಂದು ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...