Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...