Homeಮುಖಪುಟಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಅಫ್ತಾಬ್- ಶ್ರದ್ಧಾ ಪ್ರಕರಣ: ಕತ್ತರಿಸಿ ಕಾಡಿಗೆ ಎಸೆದಿದ್ದ ದೇಹದ ಬಿಡಿಭಾಗಗಳಿಗೆ ಹುಡುಕಾಟ

ಯುವತಿ ಕೊಲೆಗೆ ಸಂಬಂಧಿಸಿದಂತೆ 13 ಬಿಡಿಭಾಗಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪಿಟಿಐ ವರದಿ ಮಾಡಿದೆ

- Advertisement -
- Advertisement -

ತನ್ನ ಸಂಗಾತಿಯನ್ನು ಕೊಂದ ಆರೋಪದಲ್ಲಿ ಬಂಧಿತನಾದ 28 ವರ್ಷದ ಅಫ್ತಾಬ್ ಅಮೀನ್ ಪೂನಾವಾಲಾನನ್ನು ದಕ್ಷಿಣ ದೆಹಲಿಯ ಛತ್ತರ್‌ಪುರದ ಅರಣ್ಯ ಪ್ರದೇಶಕ್ಕೆ ಪೊಲೀಸರು ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತಾವು ಕೊಲೆ ಮಾಡಿದ ಶ್ರದ್ಧಾ ವಾಕರ್ ಅವರ ದೇಹದ ಭಾಗಗಳನ್ನು ಇಲ್ಲಿ ಎಸೆದಿದ್ದನು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿರುವ ವರದಿಯು, “ಅಫ್ತಾಬ್ ತಾನು ಬಿಡಿಭಾಗಗಳನ್ನು ಎಸೆದ ಪ್ರದೇಶಗಳನ್ನು ಗುರುತಿಸಿದ್ದಾನೆ. ನಂತರ ದೇಹದ 13 ಭಾಗಗಳು ಪತ್ತೆಯಾಗಿವೆ. ಆದರೆ ವಿಧಿವಿಜ್ಞಾನ ಪರೀಕ್ಷೆಯ ನಂತರವೇ, ಅವು ಕೊಲೆಯಾದ ಯುವತಿಗೆ ಸೇರಿದೆಯೇ ಎಂದು ದೃಢೀಕರಿಸಬಹುದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಅಫ್ತಾಬ್‌ನನ್ನು ಛತ್ತರ್‌ಪುರ ಪ್ರದೇಶವನ್ನು ಹೊರತುಪಡಿಸಿ ನವದೆಹಲಿಯ ಇತರ ಕೆಲವು ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪೂನವಾಲ ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌ ಅವರ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಂತರ ನಗರದ ವಿವಿಧ ಪ್ರದೇಶಗಳಲ್ಲಿ ಒಂದೊಂದು ಭಾಗವನ್ನು ವಿಲೇವಾರಿ ಮಾಡಿದ್ದ.

ಇದುವರೆಗೆ ಪತ್ತೆಯಾಗಿರುವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅವೆಲ್ಲವೂ ಮಾನವ ಅವಶೇಷಗಳೇ ಎಂದು ಖಚಿತಪಡಿಸಿಕೊಳ್ಳಲಾಗಿದೆ. ತಲೆ ಇನ್ನೂ ಪತ್ತೆಯಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲಾಗಿಲ್ಲ.

ಅಫ್ತಾಬ್ ಹದಿನೈದು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈನಲ್ಲಿರುವ ಹೌಸಿಂಗ್ ಸೊಸೈಟಿಗೆ ಭೇಟಿ ನೀಡಿದ್ದನು. ಆತನ ಕುಟುಂಬ ಸದಸ್ಯರು ಮುಂಬೈಗೆ ತೆರಳಲು ಸಹಾಯ ಮಾಡಿದ್ದರು ಎಂದು ಸೊಸೈಟಿ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಆರೋಪಿ ಅಫ್ತಾಬ್‌‌ ಭೇಟಿ ಮಾಡಿದ ಯುವತಿಯ ವಿವರಗಳನ್ನು ಕಂಡುಹಿಡಿಯಲು ದೆಹಲಿ ಪೊಲೀಸರು ಡೇಟಿಂಗ್ ಆ್ಯಪ್ ಬಂಬಲ್‌ಗೆ ಪತ್ರ ಬರೆಯುವ ಸಾಧ್ಯತೆಯಿದೆ. ಈ ಡೇಟಿಂಗ್ ಆಪ್‌ನಲ್ಲಿ ಶ್ರದ್ಧಾ ಅವರನ್ನು ಅಫ್ತಾಬ್ ಭೇಟಿಯಾಗಿದ್ದನು. ಬಂಬಲ್‌ನ ಪ್ರಧಾನ ಕಛೇರಿಯು ಅಮೆರಿಕಾದ ಟೆಕ್ಸಾಸ್‌ನಲ್ಲಿದೆ.

ಶ್ರದ್ಧಾಳ ತಂದೆ ವಿಕಾಸ್ ವಾಕರ್ ಪ್ರತಿಕ್ರಿಯಿಸಿ, “ಆರೋಪಿಗೆ ಮರಣದಂಡನೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ. ಈ ಜೊತೆಯ ಬೆನ್ನಲ್ಲೇ ಲವ್‌ ಜಿಹಾದ್‌ ಚರ್ಚೆ ನಡೆಯುತ್ತಿದೆ.

ಜಗಳದ ನಂತರ ತನ್ನ ಪ್ರಿಯತಮೆ ಶ್ರದ್ಧಾಳನ್ನು ಕೊಂದಿರುವುದಾಗಿ ಮತ್ತು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸುವ ಆಲೋಚನೆಯನ್ನು ಅಮೇರಿಕನ್ ಕ್ರೈಮ್ ಟಿವಿ ಸರಣಿಯಾದ ‘ಡೆಕ್ಸ್ಟರ್’ನಿಂದ ಬೆಳೆಸಿಕೊಂಡಿದ್ದಾಗಿ ಪೂನಾವಾಲಾ ತನಿಖೆಯ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.

ಪ್ರೇಯಸಿಯ ದೇಹದ ಬಿಡಿಭಾಗಗಳನ್ನು ಸಂರಕ್ಷಿಸಲು ಫ್ರಿಜ್ ಖರೀದಿಸಿದ್ದನು. ಅವುಗಳನ್ನು ವಿಲೇವಾರಿ ಮಾಡಲು ಮಧ್ಯರಾತ್ರಿಯ ನಂತರ ಹೊರಗೆ ಹೋಗುತ್ತಿದ್ದನು. ಯಾವ ಭಾಗವು ಬೇಗನೆ ಕೊಳೆಯಲು ಪ್ರಾರಂಭಿಸುತ್ತದೆ ಎಂಬುದರ ಆಧಾರದ ಮೇಲೆ ಆರೋಪಿಯು ಯಾವುದನ್ನು ಮೊದಲು ವಿಲೇವಾರಿ ಮಾಡಬೇಕೆಂದು ನಿರ್ಧರಿಸುತ್ತಿದ್ದನು ಎಂದು ಪೊಲೀಸರು ವಿವರಿಸಿದ್ದಾರೆ.

ಪೂನಾವಾಲಾ ಜೊತೆಗಿನ ಸಂಬಂಧದ ಬಗ್ಗೆ ಭಿನ್ನಾಭಿಪ್ರಾಯ ಇದ್ದಿದ್ದರಿಂದ ಯುವತಿಯು ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿರಲಿಲ್ಲ.

ಮೇ 18 ರಂದು, ಆರೋಪಿ ಮತ್ತು ಯುವತಿಯ ನಡುವೆ ಜಗಳವಾಗಿತ್ತು. ಯುವತಿಯು ಕೂಗುತ್ತಿದ್ದರಿಂದ ಅಫ್ತಾಬ್ ತನ್ನ ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿದನು. ನಂತರ ಆಕೆಯ ಕತ್ತು ಹಿಸುಕಿ, ದೇಹವನ್ನು ಭಾಗಗಳಾಗಿ ಕತ್ತರಿಸಿ ಹತ್ತಿರದ ಕಾಡಿನಲ್ಲಿ ವಿಲೇವಾರಿ ಮಾಡಲಾರಂಭಿಸಿದನು ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂನಾವಾಲಾನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶ್ರದ್ಧಾಳ ನೆನಪಿಗಾಗಿ ಫ್ರಿಡ್ಜ್‌ನಲ್ಲಿ ದೇಹವಿರಿಸಿದ್ದೆ: ಅಫ್ತಾಬ್

“ಕೊಲೆ ಮಾಡಿದ ನಂತರ ಯುವತಿಯ ತಲೆಯನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದ್ದೆನು. ಆಕೆ ಮತ್ತು ನನ್ನ ನಡುವಿನ ಸಂಬಂಧದ ನೆನಪಿಗಾಗಿ ಆ ದೇಹವನ್ನು ಆಗಾಗ್ಗೆ ನೋಡುತ್ತಿದ್ದೆ. ಆ ನಂತರದ ದಿನಗಳಲ್ಲಿ ಆಕೆಯ ತಲೆಯನ್ನು ಹೊರಗೆ ಎಸೆದಿದ್ದೇನೆ” ಎಂದು ಆರೋಪಿ ಅಫ್ತಾಬ್‌ ಪೊಲೀಸರಿಗೆ ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ತಲೆ ಪತ್ತೆಯಾದ ನಂತರ, ಪೊಲೀಸರು ಸ್ಕಲ್ ಸೂಪರ್‌ಇಂಪೊಸಿಷನ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂತ್ರಸ್ತೆಯ ಗುರುತನ್ನು ಪತ್ತೆಹಚ್ಚಲಿದ್ದಾರೆ. ಸದ್ಯಕ್ಕೆ ಅವರ ಏಕೈಕ ಭರವಸೆ ಎಂದರೆ ವಾಕರ್ ಅವರ ತಂದೆಯೊಂದಿಗೆ, ಈಗ ದೊರೆತಿರುವ ಕೆಲವು ಬಿಡಿಭಾಗಗಳ ಡಿಎನ್‌ಎ ಹೊಂದಾಣಿಕೆಯಾಗಿದೆ.

ಯುವತಿಯ ದೇಹದ ಭಾಗಗಳನ್ನು ಕತ್ತರಿಸುವಾಗ, ಸಂಗ್ರಹಿಸುವಾಗ ಮತ್ತು ವಿಲೇವಾರಿ ಮಾಡುವಾಗ ಆರ್ಥೋಬೊರಿಕ್ ಆಸಿಡ್ (ಬೋರಿಕ್ ಪೌಡರ್), ಫಾರ್ಮಾಲ್ಡಿಹೈಡ್, ಸಲ್ಫ್ಯೂರಿಕ್ ಆಸಿಡ್ ಮತ್ತು ಇತರ ಕೆಲವು ರಾಸಾಯನಿಕಗಳನ್ನು ಪೂನಾವಾಲಾ ಬಳಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಉಲ್ಲೇಖಿಸಿದೆ.

ಕೊಲೆಯಾಗಿ ಆರು ತಿಂಗಳುಗಳು ಕಳೆದಿರುವುದರಿಂದ, ಕೊಲೆಯನ್ನು ದೃಢೀಕರಿಸಲು ಪೊಲೀಸರು ವಿಧಿವಿಜ್ಞಾನವನ್ನು ಅವಲಂಬಿಸಬೇಕಾಗುತ್ತದೆ. ಆರೋಪಿಯು ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ತನ್ನ ಉತ್ತರಗಳನ್ನು ಆಗಾಗ್ಗೆ ಬದಲಾಯಿಸುತ್ತಿದ್ದಾನೆ ಮತ್ತು ಅನೇಕ ವಿವರಗಳನ್ನು ಮರೆತಿರುವುದಾಗಿ ಆತ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...