Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...