Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...