Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...