Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....