Homeಮುಖಪುಟಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಮೂಲಕ ಪ್ರಚಲಿತದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ಕಿಡಿಕಾರಿದ್ದಾರೆ. ಅವರು ಕ್ಷಮಾಧಾನ ಅರ್ಜಿಗಳನ್ನು ಬರೆದರೆಂದು ಟೀಕಿಸಿದ್ದಾರೆ. ಇದನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯು “ಸಾವರ್ಕರ್ ಟೀಕಿಸುವ ಕಾಂಗ್ರೆಸ್‌ನೊಡನೆ ಉದ್ಧವ್ ಠಾಕ್ರೆ ಮೈತ್ರಿ ಮಾಡಿಕೊಂಡಿರುವುದೇಕೆ” ಎಂದು ಪ್ರಶ್ನಿಸಿದೆ. ರಾಹುಲ್ ಸಾವರ್ಕರ್‌ರವರನ್ನು ಟೀಕಿಸಿರುವುದರನ್ನು ವಿರೋಧಿಸುತ್ತಲೆ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವ ಸೇನಾ ಬಣದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. “ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿಡಿ ಸಾವರ್ಕರ್ ಅವರ ಬಗ್ಗೆ ತಿರುಚಿದ ಇತಿಹಾಸವನ್ನು ಹರಡುತ್ತಿದೆ. ಆದರೆ ಮಹಾರಾಷ್ಟ್ರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಬಿಜೆಪಿಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ಬಾಳಾಸಾಹೇಬ್ ಠಾಕ್ರೆ ಅವರು ಸಾವರ್ಕರ್ ಅವರ ಹಿಂದುತ್ವ ಸಿದ್ಧಾಂತವನ್ನು ತಮ್ಮ ಜೀವನದುದ್ದಕ್ಕೂ ಮುಂದಕ್ಕೆ ಕೊಂಡೊಯ್ದರು. ವೀರ್ ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸುವವರಿಗೆ ಬೆದರಿಕೆಯೊಡ್ಡಿದರು. ದುರದೃಷ್ಟವಶಾತ್, ಇಂದು ಅವರ ಕುಟುಂಬದ ನಾಯಕರು ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ” ಭಾಗವಹಿಸುತ್ತಿದ್ದಾರೆ ಎಂದು ಫಡ್ನವೀಸ್ ಕಿಡಿಕಾರಿದ್ದರು.

ವಿಡಿ ಸಾವರ್ಕರ್ ಬಗ್ಗೆ “ಅಪಾರ ಗೌರವ” ಎಂದಿರುವ ಉದ್ಧವ್ ಠಾಕ್ರೆ, ರಾಹುಲ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ. ನಾವು ವಿಡಿ ಸಾವರ್ಕರ್‌ರವರನ್ನು ಗೌರವಿಸುತ್ತೇವೆ. ಬಿಜೆಪಿಯನವರು ನಮಗೆ ಪಾಠ ಹೇಳಲು ಬರಬೇಕಿಲ್ಲ. ಏಕೆಂದರೆ ಅವರು ಕಾಶ್ಮೀರದಲ್ಲಿ ಭಾರತ್ ಮಾತಾ ಕೀ ಜೈ ಎನ್ನದ ಪಿಡಿಪಿ ಪಕ್ಷ ಜೊತೆ ಸರ್ಕಾರ ರಚಿಸಿದ್ದರು ಎಂಬುದನ್ನು ಮರೆಯಬಾರದು ಎಂದಿದ್ದಾರೆ. ಅಲ್ಲದೆ ಬ್ರಿಟಿಷರಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಕೋಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಇದನ್ನೂ ಓದಿ; ಸಾವರ್ಕರ್ ಸಿ.ಐ.ಎ. ಏಜೆಂಟರಾಗಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...