Homeಮುಖಪುಟಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಮೂಲಕ ಪ್ರಚಲಿತದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ಕಿಡಿಕಾರಿದ್ದಾರೆ. ಅವರು ಕ್ಷಮಾಧಾನ ಅರ್ಜಿಗಳನ್ನು ಬರೆದರೆಂದು ಟೀಕಿಸಿದ್ದಾರೆ. ಇದನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯು “ಸಾವರ್ಕರ್ ಟೀಕಿಸುವ ಕಾಂಗ್ರೆಸ್‌ನೊಡನೆ ಉದ್ಧವ್ ಠಾಕ್ರೆ ಮೈತ್ರಿ ಮಾಡಿಕೊಂಡಿರುವುದೇಕೆ” ಎಂದು ಪ್ರಶ್ನಿಸಿದೆ. ರಾಹುಲ್ ಸಾವರ್ಕರ್‌ರವರನ್ನು ಟೀಕಿಸಿರುವುದರನ್ನು ವಿರೋಧಿಸುತ್ತಲೆ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವ ಸೇನಾ ಬಣದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. “ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿಡಿ ಸಾವರ್ಕರ್ ಅವರ ಬಗ್ಗೆ ತಿರುಚಿದ ಇತಿಹಾಸವನ್ನು ಹರಡುತ್ತಿದೆ. ಆದರೆ ಮಹಾರಾಷ್ಟ್ರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಬಿಜೆಪಿಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ಬಾಳಾಸಾಹೇಬ್ ಠಾಕ್ರೆ ಅವರು ಸಾವರ್ಕರ್ ಅವರ ಹಿಂದುತ್ವ ಸಿದ್ಧಾಂತವನ್ನು ತಮ್ಮ ಜೀವನದುದ್ದಕ್ಕೂ ಮುಂದಕ್ಕೆ ಕೊಂಡೊಯ್ದರು. ವೀರ್ ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸುವವರಿಗೆ ಬೆದರಿಕೆಯೊಡ್ಡಿದರು. ದುರದೃಷ್ಟವಶಾತ್, ಇಂದು ಅವರ ಕುಟುಂಬದ ನಾಯಕರು ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ” ಭಾಗವಹಿಸುತ್ತಿದ್ದಾರೆ ಎಂದು ಫಡ್ನವೀಸ್ ಕಿಡಿಕಾರಿದ್ದರು.

ವಿಡಿ ಸಾವರ್ಕರ್ ಬಗ್ಗೆ “ಅಪಾರ ಗೌರವ” ಎಂದಿರುವ ಉದ್ಧವ್ ಠಾಕ್ರೆ, ರಾಹುಲ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ. ನಾವು ವಿಡಿ ಸಾವರ್ಕರ್‌ರವರನ್ನು ಗೌರವಿಸುತ್ತೇವೆ. ಬಿಜೆಪಿಯನವರು ನಮಗೆ ಪಾಠ ಹೇಳಲು ಬರಬೇಕಿಲ್ಲ. ಏಕೆಂದರೆ ಅವರು ಕಾಶ್ಮೀರದಲ್ಲಿ ಭಾರತ್ ಮಾತಾ ಕೀ ಜೈ ಎನ್ನದ ಪಿಡಿಪಿ ಪಕ್ಷ ಜೊತೆ ಸರ್ಕಾರ ರಚಿಸಿದ್ದರು ಎಂಬುದನ್ನು ಮರೆಯಬಾರದು ಎಂದಿದ್ದಾರೆ. ಅಲ್ಲದೆ ಬ್ರಿಟಿಷರಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಕೋಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಇದನ್ನೂ ಓದಿ; ಸಾವರ್ಕರ್ ಸಿ.ಐ.ಎ. ಏಜೆಂಟರಾಗಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...