Homeಮುಖಪುಟನಾನು 'ಗೆ' ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

- Advertisement -
- Advertisement -

ನಾನು ‘ಗೆ’ (ಸಲಿಂಗಾಸಕ್ತ) ಎಂಬ ಕಾರಣಕ್ಕೆ ಶಿಫಾರಸ್ಸು ಮಾಡಿ 5 ವರ್ಷವಾದರೂ ನನ್ನನ್ನು ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ ಎಂದು ಲೈಂಗಿಕ ಅಲ್ಪಸಂಖ್ಯಾತ ಹೋರಾಟಗಾರ, ಹಿರಿಯ ವಕೀಲ ಸೌರಭ್‌ ಕಿರ್ಪಾಲ್‌ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಯೊಬ್ಬ ಹೈಕೋರ್ಟ್ ನ್ಯಾಯಾಧೀಶರಾಗಿ ಸರ್ಕಾರ ನೇಮಿಸುತ್ತದೆ ಎಂದು ನನಗನಿಸುತ್ತಿಲ್ಲ ಎಂದು ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ದೆಹಲಿ ಹೈಕೋರ್ಟ್‌ನ 33 ನ್ಯಾಯಾಧೀಶರು ಶಿಫಾರಸ್ಸು ಮಾಡಿದ್ದರು. ಅಲ್ಲದೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಕೊಲಿಜಿಯಂ ಸಹ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ನೀಡದೆ ವಿಳಂಬ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

2018ರಿಂದ ಕನಿಷ್ಠ ನಾಲ್ಕು ಬಾರಿ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಉಮೇದುವಾರಿಕೆಯ ನಿರ್ಧಾರವನ್ನು ಮುಂದೂಡಿದ ನಂತರ 2021ರಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಂತಿಮವಾಗಿ ಅವರ ಹೆಸರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಶಿಫಾರಸು ಮಾಡಿದೆ.

2021ರ ಮಾರ್ಚ್‌ನಲ್ಲಿ ಆಗಿನ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ಅವರು ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.

ಅಕ್ಟೋಬರ್ 2017ರಲ್ಲಿ ಮೊದಲ ಬಾರಿಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ನೇತೃತ್ವದ ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರನ್ನು ಶಿಫಾರಸು ಮಾಡಿತು. ಸೆಪ್ಟೆಂಬರ್ 2018ರಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಇದನ್ನು “ಕೆಲವು ಸಮಯದ ನಂತರ” ಪರಿಗಣನೆಗೆ ತೆಗೆದುಕೊಳ್ಳಲು ನಿರ್ಧರಿಸಿತು. ಜನವರಿ 2019ರಲ್ಲಿ ಮತ್ತು ನಂತರ ಏಪ್ರಿಲ್ 2019ರಲ್ಲಿ ಮತ್ತೆ ಹೆಸರು ಮುನ್ನೆಲೆಗೆ ಬಂದಾಗ ಕೊಲಿಜಿಯಂ ತನ್ನ ನಿರ್ಧಾರವನ್ನು ಮುಂದೂಡಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಂಡಿರಲಿಲ್ಲ. ಯಾಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಕಿರ್ಪಾಲ್ ಅವರ ಹೆಸರನ್ನು ಶಿಫಾರಸು ಮಾಡುವಲ್ಲಿನ ವಿಳಂಬವು ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ ಎನ್ನಲಾಗುತ್ತಿತ್ತು. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ.

ನ್ಯಾಯಾಧೀಶ ಸೌರಭ್ ಕಿರ್ಪಾಲ್ ಅವರ ತಂದೆ, ನ್ಯಾಯಮೂರ್ತಿ ಬಿ.ಎನ್.ಕಿರ್ಪಾಲ್ ಅವರು ಮೇ 2002ರಿಂದ ನವೆಂಬರ್ 2002ರವರೆಗೆ ಸುಪ್ರೀಂಕೋರ್ಟ್‌ನ 31ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ದೆಹಲಿಯ ಸೇಂಟ್ ಸ್ಟೀಫನ್ಸ್‌ನಿಂದ ಭೌತಶಾಸ್ತ್ರದಲ್ಲಿ ಪದವೀಧರರಾಗಿರುವ ನ್ಯಾಯವಾದಿ ಕಿರ್ಪಾಲ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಭಾರತಕ್ಕೆ ಹಿಂದಿರುಗುವ ಮೊದಲು, ಸೌರಭ್ ಕಿರ್ಪಾಲ್ ಜಿನೀವಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಅವರು ಎರಡು ದಶಕಗಳಿಂದ ಭಾರತದಲ್ಲಿ ಕಾನೂನು ಅಭ್ಯಾಸ ಮಾಡುತ್ತಿದ್ದಾರೆ.

‘ಸೆಕ್ಸ್ ಮತ್ತು ಸುಪ್ರೀಂ ಕೋರ್ಟ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯು ಕಾನೂನು, ಲಿಂಗ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುತ್ತದೆ.

ಇದನ್ನೂ ಓದಿ; ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...