Homeಮುಖಪುಟಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

ಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ.

- Advertisement -
- Advertisement -

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿದೆ. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿದ ಬಳಿಕ ಗೃಹಬಂಧನ ಮತ್ತೆ ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಎತ್ತಿರುವ ಆಕ್ಷೇಪವು ನವ್ಲಾಖಾ ಅವರನ್ನು ಜೈಲಿನಿಂದ ಸ್ಥಳಾಂತರಿಸಲು ಉಂಟಾಗಿರುವ ಎರಡನೇ ಅಡಚಣೆಯಾಗಿದೆ.

ಗೃಹಬಂಧನಕ್ಕೆ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಧಿಸಿದ ಷರತ್ತುಗಳ ಪೈಕಿ, ನವೆಂಬರ್ 14 ರೊಳಗೆ ಪರಿಹಾರದ ಪುರಾವೆಯಾಗಿ 2 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಬೇಕಿತ್ತು. ನವ್ಲಾಖಾ ಅವರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಆರಂಭದಲ್ಲಿ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಲಿಲ್ಲ.

ಮಂಗಳವಾರ ನವ್ಲಾಖಾ ಅವರ ವಕೀಲರು, “ಸಾಲ್ವೆನ್ಸಿ ಪ್ರಮಾಣಪತ್ರವನ್ನು ಪಡೆಯಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ.

ಮನೆಯ ಪ್ರತಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಬೇಕಾಗಿದೆ. ನವಲಾಖಾ ಅವರ ಗೃಹಬಂಧನಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಲ್ಲಿ ಇದೂ ಒಂದಾಗಿದೆ.

ಕಟ್ಟಡದ ನೆಲಮಹಡಿಯು ಸಾರ್ವಜನಿಕ ಗ್ರಂಥಾಲಯವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಆರೋಪಿಗಳ ಮೇಲೆ ನಿಗಾ ಇಡುವುದು ತುಂಬಾ ಕಷ್ಟಕರವಾಗುತ್ತದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ವಾದಿಸಿದೆ. ಕಟ್ಟಡದ ಮಾಲೀಕರನ್ನು “ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ” ಎಂದು ಗುರುತಿಸಿರುವ ಬಗ್ಗೆ ಇದು ಆಕ್ಷೇಪಣೆಗಳನ್ನು ಎತ್ತಿದೆ.

ನವ್ಲಾಖಾ ಪರವಾಗಿ ಹಾಜರಾದ ವಕೀಲ ಯುಗ್ ಮೋಹಿತ್ ಚೌಧರಿ, ಏಜೆನ್ಸಿ ಬಯಸಿದಲ್ಲೆಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಟ್ಟಡದ ಮೊದಲ ಮಹಡಿಗೆ ಮಾತ್ರ ನವ್ಲಾಖಾ ಅವರನ್ನು ನಿರ್ಬಂಧಿಸಲಾಗುವುದು ಮತ್ತು ನೆಲ ಅಂತಸ್ತಿನ ಗ್ರಂಥಾಲಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡದ ಮಾಲೀಕತ್ವದ ಬಗ್ಗೆ ಆಕ್ಷೇಪಣೆಯ ಕುರಿತು ಚೌಧರಿ, “ನೀವು ನಿವೇಶನದ ಮಾಲೀಕತ್ವದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸಿಪಿಐ(ಎಂ) ಒಂದು ನೋಂದಾಯಿತ ರಾಜಕೀಯ ಪಕ್ಷವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಆದಾಗ್ಯೂ ಎನ್‌ಐಎ ಈಗ ಸಲ್ಲಿಸಿರುವ ವರದಿಯ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಕ್ಕಾಗಿ ಕಾಯದೆ ಈ ಹಂತದಲ್ಲಿ ನವ್ಲಾಖಾ ಅವರನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿದ್ದು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠದ ಮುಂದೆ ಇಂದು (ಶುಕ್ರವಾರ) ವಿಚಾರಣೆ ಬರಲಿದೆ.

ಇದರ ನಡುವೆ ಹಿರಿಯ ನಟಿ ಸುಹಾಸಿನಿ ಮುಲೆ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ನವಲಖಾ ಅವರಿಗೆ ಜಾಮೀನುದಾರರಾಗಿ ಹಾಜರಾಗಿದ್ದರು. ಸುಮಾರು 30 ವರ್ಷಗಳಿಂದ ನವ್ಲಾಖಾ ಅವರು ಪರಿಚಯವಿದ್ದಾರೆ ಎಂದು ಸುಹಾಸಿನಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...