Homeಮುಖಪುಟಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

ಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ.

- Advertisement -
- Advertisement -

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿದೆ. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿದ ಬಳಿಕ ಗೃಹಬಂಧನ ಮತ್ತೆ ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಎತ್ತಿರುವ ಆಕ್ಷೇಪವು ನವ್ಲಾಖಾ ಅವರನ್ನು ಜೈಲಿನಿಂದ ಸ್ಥಳಾಂತರಿಸಲು ಉಂಟಾಗಿರುವ ಎರಡನೇ ಅಡಚಣೆಯಾಗಿದೆ.

ಗೃಹಬಂಧನಕ್ಕೆ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಧಿಸಿದ ಷರತ್ತುಗಳ ಪೈಕಿ, ನವೆಂಬರ್ 14 ರೊಳಗೆ ಪರಿಹಾರದ ಪುರಾವೆಯಾಗಿ 2 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಬೇಕಿತ್ತು. ನವ್ಲಾಖಾ ಅವರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಆರಂಭದಲ್ಲಿ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಲಿಲ್ಲ.

ಮಂಗಳವಾರ ನವ್ಲಾಖಾ ಅವರ ವಕೀಲರು, “ಸಾಲ್ವೆನ್ಸಿ ಪ್ರಮಾಣಪತ್ರವನ್ನು ಪಡೆಯಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ.

ಮನೆಯ ಪ್ರತಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಬೇಕಾಗಿದೆ. ನವಲಾಖಾ ಅವರ ಗೃಹಬಂಧನಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಲ್ಲಿ ಇದೂ ಒಂದಾಗಿದೆ.

ಕಟ್ಟಡದ ನೆಲಮಹಡಿಯು ಸಾರ್ವಜನಿಕ ಗ್ರಂಥಾಲಯವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಆರೋಪಿಗಳ ಮೇಲೆ ನಿಗಾ ಇಡುವುದು ತುಂಬಾ ಕಷ್ಟಕರವಾಗುತ್ತದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ವಾದಿಸಿದೆ. ಕಟ್ಟಡದ ಮಾಲೀಕರನ್ನು “ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ” ಎಂದು ಗುರುತಿಸಿರುವ ಬಗ್ಗೆ ಇದು ಆಕ್ಷೇಪಣೆಗಳನ್ನು ಎತ್ತಿದೆ.

ನವ್ಲಾಖಾ ಪರವಾಗಿ ಹಾಜರಾದ ವಕೀಲ ಯುಗ್ ಮೋಹಿತ್ ಚೌಧರಿ, ಏಜೆನ್ಸಿ ಬಯಸಿದಲ್ಲೆಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಟ್ಟಡದ ಮೊದಲ ಮಹಡಿಗೆ ಮಾತ್ರ ನವ್ಲಾಖಾ ಅವರನ್ನು ನಿರ್ಬಂಧಿಸಲಾಗುವುದು ಮತ್ತು ನೆಲ ಅಂತಸ್ತಿನ ಗ್ರಂಥಾಲಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡದ ಮಾಲೀಕತ್ವದ ಬಗ್ಗೆ ಆಕ್ಷೇಪಣೆಯ ಕುರಿತು ಚೌಧರಿ, “ನೀವು ನಿವೇಶನದ ಮಾಲೀಕತ್ವದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸಿಪಿಐ(ಎಂ) ಒಂದು ನೋಂದಾಯಿತ ರಾಜಕೀಯ ಪಕ್ಷವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಆದಾಗ್ಯೂ ಎನ್‌ಐಎ ಈಗ ಸಲ್ಲಿಸಿರುವ ವರದಿಯ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಕ್ಕಾಗಿ ಕಾಯದೆ ಈ ಹಂತದಲ್ಲಿ ನವ್ಲಾಖಾ ಅವರನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿದ್ದು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠದ ಮುಂದೆ ಇಂದು (ಶುಕ್ರವಾರ) ವಿಚಾರಣೆ ಬರಲಿದೆ.

ಇದರ ನಡುವೆ ಹಿರಿಯ ನಟಿ ಸುಹಾಸಿನಿ ಮುಲೆ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ನವಲಖಾ ಅವರಿಗೆ ಜಾಮೀನುದಾರರಾಗಿ ಹಾಜರಾಗಿದ್ದರು. ಸುಮಾರು 30 ವರ್ಷಗಳಿಂದ ನವ್ಲಾಖಾ ಅವರು ಪರಿಚಯವಿದ್ದಾರೆ ಎಂದು ಸುಹಾಸಿನಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...