Homeಕರ್ನಾಟಕಸ್ವಮೂತ್ರದಿಂದ ಏಡ್ಸ್‌ ವಾಸಿ, ಗೋಮೂತ್ರದಿಂದ ಮಧುಮೇಹ ಚಿಕಿತ್ಸೆ: ಅವೈಜ್ಞಾನಿಕ ಕೃತಿ ಓದಲು ಮೈಸೂರು ವಿವಿ ಸಲಹೆ!

ಸ್ವಮೂತ್ರದಿಂದ ಏಡ್ಸ್‌ ವಾಸಿ, ಗೋಮೂತ್ರದಿಂದ ಮಧುಮೇಹ ಚಿಕಿತ್ಸೆ: ಅವೈಜ್ಞಾನಿಕ ಕೃತಿ ಓದಲು ಮೈಸೂರು ವಿವಿ ಸಲಹೆ!

ಸ್ವಪ್ನ ಬುಕ್‌ಹೌಸ್‌ ಪ್ರಕಟಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಪುಸ್ತಕ ರೆಫರ್‌‌ ಮಾಡಿ ಎಂದ ಮೈಸೂರು ವಿವಿ

- Advertisement -
- Advertisement -

“ಸ್ವಮೂತ್ರದಿಂದ ಕ್ಯಾನ್ಸರ್‌, ಏಡ್ಸ್‌ ಗುಣಪಡಿಸಬಹುದು, ಗೋಮೂತ್ರ ಸೇವನೆಯಿಂದ ಮಧುಮೇಹ ವಾಸಿಯಾಗುತ್ತದೆ” ಎಂಬ ಅಂಶಗಳಿರುವ ಕೃತಿಯನ್ನೇ ಮೈಸೂರು ವಿಶ್ವವಿದ್ಯಾನಿಲಯವು ಸಮಾಜಶಾಸ್ತ್ರ ಪದವಿ ವಿದ್ಯಾರ್ಥಿಗಳಿಗೆ ರೆಫರೆನ್ಸ್‌ (ಆಕಾರ ಕೃತಿ) ಆಗಿ ನೀಡಿರುವುದು ಟೀಕೆಗೆ ಗುರಿಯಾಗಿದೆ.

ನೂತನ ಶಿಕ್ಷಣ ನೀತಿ (ಎನ್‌ಇಪಿ) ಅನ್ವಯ ಮೈಸೂರು ವಿವಿಯು ಐದನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ‘ವೈದ್ಯಕೀಯ ಸಮಾಜಶಾಸ್ತ್ರ’ (ಮೆಡಿಕಲ್ ಸೋಷಿಯಾಲಜಿ) ಪಠ್ಯವನ್ನು ರೂಪಿಸಿದೆ. ಆದರೆ ವಿದ್ಯಾರ್ಥಿಗಳಿಗೆ ರೆಫರೆನ್ಸ್‌ ನೀಡಲಾಗಿರುವ ಕನ್ನಡ ಕೃತಿಯಲ್ಲಿ ಅವೈಜ್ಞಾನಿಕ ವಿಚಾರಗಳಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಭೈರಪ್ಪ ಅವರು ಬರೆದಿರುವ, ‘ಸ್ವಪ್ನ ಬುಕ್‌ಹೌಸ್‌’ ಪ್ರಕಟಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿಯನ್ನು ರೆಫರೆನ್ಸ್‌ ಪುಸ್ತಕಗಳ ಪಟ್ಟಿಯಲ್ಲಿ ನೀಡಲಾಗಿದೆ. ಅದರಲ್ಲಿರುವ ಒಂದು ಅಧ್ಯಾಯದಲ್ಲಿ ಮೂತ್ರಚಿಕಿತ್ಸೆ, ಗೋಮೂತ್ರ ಚಿಕಿತ್ಸೆ, ಶಂಖ ಚಿಕಿತ್ಸೆ, ತೈಲ ಚಿಕಿತ್ಸೆ, ಚುಟ್ಕಿ ಚಿಕಿತ್ಸೆ, ಸಿದ್ಧ ವೈದ್ಯ ಪದ್ಧತಿ, ಜ್ಯೂಸ್‌ ಚಿಕಿತ್ಸೆ ಇತ್ಯಾದಿ ಅಂಶಗಳಿವೆ. ಇವುಗಳಿಗೆ ನೀಡಲಾಗಿರುವ ವಿವರಣೆಗಳು ಅವೈಜ್ಞಾನಿಕವಾಗಿವೆ.

ಮೈಸೂರು ವಿವಿ ರೂಪಿಸಿರುವ ‘ವೈದ್ಯಕೀಯ ಸಮಾಜಶಾಸ್ತ್ರ’ ಪಠ್ಯವಿದು. ರೆಫರೆನ್ಸ್‌ ಪಟ್ಟಿಯಲ್ಲಿ ಕೆ.ಭೈರಪ್ಪ ಅವರ ‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿ ಇದೆ.

ಅವೈಜ್ಞಾನಿಕ ವಿಚಾರಗಳೇನು?

ಪ್ರಕೃತಿಯು ರೋಗನಿರೋಧಕ ಶಕ್ತಿಯನ್ನು ಮನುಷ್ಯನಿಗೆ ಆತನ ದೇಹದಲ್ಲಿಯೇ ಒದಗಿಸಿದೆ. ಅದೆಂದರೆ ಮೂತ್ರ. ಸಹಸ್ರಾರು ವರ್ಷಗಳಿಂದ ಯೋಗಿಗಳು ಮೂತ್ರ ಸೇವಿಸುತ್ತಿದ್ದರು ಎಂಬ ವಿಚಾರವಿದೆ. ಸಂಸ್ಕೃತ ಸಾಹಿತ್ಯ ನಿಧಿಯಲ್ಲಿ ‘ಶಿವಾಂಬು ಸಂಹಿತೆ’ಯಲ್ಲಿ ಈ ಬಗ್ಗೆ ಮಾಹಿತಿ ಇದೆ. ಬೈಬಲ್ ಗ್ರಂಥದಲ್ಲಿ “ನಿಮ್ಮ ಆರೋಗ್ಯ ರಕ್ಷಣೆಗಾಗಿ ನಿಮ್ಮ ದೇಹವನ್ನು ಅವಲಂಬಿಸಿ” ಎಂಬ ಉಲ್ಲೇಖವಿದೆ. ಆರ್ಮ್‌‌ಸ್ಟ್ರಾಂಗ್‌ರವರು ಬರೆದಿರುವ ‘ವಾಟರ್‌ ಆಫ್‌ ಲೈಫ್‌’ ಎಂಬ ಪುಸ್ತಕದಲ್ಲಿ ಈ ಬಗ್ಗೆ ವಿವರಣೆ ಇದೆ. ಮೂತ್ರ ಚಿಕಿತ್ಸೆಯಿಂದ ಅಂದರೆ ಸ್ವಮೂತ್ರ ಪಾನ ಮತ್ತು ಲೇಪನದಿಂದದಿಂದ ಸಿಹಿಮೂತ್ರ ರೋಗ, ಏಡ್ಸ್‌, ಕ್ಯಾನ್ಸರ್‌, ಕಣ್ಣು, ಕಿವಿ, ಹಲ್ಲು, ಚರ್ಮರೋಗಗಳನ್ನು ನಿಯಂತ್ರಿಸಬಹುದಾಗಿದೆ.

ಗೋಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ. ಹಿಂದೂಗಳಲ್ಲಿ ಗೋಮೂತ್ರವನ್ನು ಸೇವಿಸುವುದು ಪವಿತ್ರವೆಂದು ತಿಳಿದಿರುವುದಿದೆ. ಅದನ್ನು ಧಾರ್ಮಿಕ ವಿಧಿವಿಧಾನಗಳಲ್ಲಿ ಸೇವಿಸುವುದಿದೆ. ಗೋವಿನ ಹಾಲು, ಮೊಸರು, ಬೆಣ್ಣೆ, ತುಪ್ಪ ಮತ್ತು ಮೂತ್ರದಿಂದ ಕೂಡಿದ ಪಂಚಗವ್ಯ ಹಿಂದೂಗಳಲ್ಲಿ ಹೆಚ್ಚು ಪರಿಚಿತ ಪದಾರ್ಥವಾಗಿದೆ. ಇದಕ್ಕೆ ಕ್ಯಾನ್ಸರ್‌, ಮೈಗ್ರೇನ್‌, ಅಸ್ತಮಾ, ಅರ್ಥೈಟಿಸ್, ಮಧುಮೇಹ ಮುಂತಾದ ರೋಗಗಳನ್ನು ನಿವಾರಣೆ ಮಾಡುವ ಶಕ್ತಿ ಇದೆ.- ಇತ್ಯಾದಿ ಅವೈಜ್ಞಾನಿಕವಾದ ಅಂಶಗಳನ್ನು ಈ ಪುಸ್ತಕದಲ್ಲಿ ಬರೆಯಲಾಗಿದೆ.

‘ಪ್ರಜಾವಾಣಿ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸಮಾಜಶಾಸ್ತ್ರ ಪಠ್ಯಕ್ರಮ ರಚನಾ ಮಂಡಳಿ ಅಧ್ಯಕ್ಷ ಪ್ರೊ.ಎ.ರಾಮೇಗೌಡ, “ಎನ್‌ಇಪಿ ಪಠ್ಯಕ್ರಮದಂತೆ ಆರೋಗ್ಯ ಸಮಾಜಶಾಸ್ತ್ರ ಪರಿಚಯಿಸಲಾಗಿದೆ. ಆದರೆ ಪೂರ್ಣ ಪಠ್ಯಕ್ರಮ ಅಂತಿಮವಾಗಿಲ್ಲ. ಲೇಖಕರು ಏಕೆ ಹಾಗೆ ಬರೆದಿದ್ದಾರೆ ಎನ್ನುವ ಮಾಹಿತಿ ಇಲ್ಲ” ಎಂದಿದ್ದಾರೆ.

ಆದರೆ ಈಗ ಸಾರ್ವಜನಿಕವಾಗಿ ಲಭ್ಯವಿರುವ ಮೈಸೂರು ವಿವಿ ಪಠ್ಯದಲ್ಲಿ ಪ್ರೊ.ಕೆ.ಭೈರಪ್ಪ ಅವರ ಕೃತಿಯನ್ನು ರೆಫರೆನ್ಸ್ ಆಗಿ ನೀಡಿದ್ದು ಹೇಗೆ? ಇದರಲ್ಲಿ ಅವೈಜ್ಞಾನಿಕ ವಿಷಯಗಳಿವೆ ಎಂಬ ಎಚ್ಚರಿಕೆ ಪಠ್ಯ ರೂಪಿಸಿದವರಿಗೆ ಇರಲಿಲ್ಲವೇ? ಕನ್ನಡದಲ್ಲಿ ಪಠ್ಯವನ್ನು ಓದಲು ಬಯಸುವ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯವೇ ದಾರಿತಪ್ಪಿಸಿದಂತೆ ಅಲ್ಲವೇ? ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.

ಶಿಕ್ಷಣತಜ್ಞರಾದ ಶ್ರೀಪಾದ್ ಭಟ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಅನೇಕ ವಿದ್ಯಾರ್ಥಿಗಳು ಇದನ್ನು ಓದುತ್ತಿದ್ದಾರೆ, ಈ ಪುಸ್ತಕದ ಅಧಿಕೃತವಾಗಿದೆಯೇ ಎಂದು ಕಾಲೇಜು ಶಿಕ್ಷಣ ಇಲಾಖೆಗೆ ಫೋನ್ ಮಾಡಿ ವಿಚಾರಿಸಿದರೆ ಅವರಿಂದ ಪ್ರತ್ಯುತ್ತರ ಬರಲಿಲ್ಲ. ಈ ಪುಸ್ತಕವನ್ನು ಅವರು ಅನುಮೋದಿಸಿದ್ದಾರೆಯೇ? ಹೌದಾಗಿದ್ದರೆ ಯಾವ ಆಧಾರದಲ್ಲಿ? ಇಲ್ಲ ಎಂದಾದರೆ ಸಂಬಂಧಿಸಿದ ಲೇಖಕರು ಈ ಪುಸ್ತಕದ ಮುಖಪುಟದ ಮೇಲೆ ಮೈಸೂರು ವಿವಿ, 5ನೇ ಸೆಮಿಸ್ಟರ್, ಎನ್‌ಇಪಿ ಇತ್ಯಾದಿ ಹೇಗೆ ಬರೆಯಲು ಸಾಧ್ಯವಾಯಿತು? ನಿಮ್ಮ ಕ್ರಮವೇನು? ಎನ್ನುವ ಪ್ರಶ್ನೆಗೆ ಉತ್ತರಗಳಿಲ್ಲ” ಎಂದು ತಿಳಿಸಿದ್ದಾರೆ.

ಮೈಸೂರು ವಿವಿ ಸಮಾಜಶಾಸ್ತ್ರ ಪ್ರಾಧ್ಯಾಪಕಿಯೊಬ್ಬರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಾಧ್ಯಾಪಕರೆಲ್ಲರೂ ಇದನ್ನೇ ಚರ್ಚೆ ಮಾಡುತ್ತಿದ್ದೇವೆ. ರೆಫರೆನ್ಸ್ ಕೊಟ್ಟು ಇದರಲ್ಲಿ ಪಾಠ ಮಾಡಿ ಎಂದರೆ ಏನರ್ಥ? ನಾವು ಯಾವುದನ್ನು ರೆಫರ್‌ ಮಾಡುತ್ತೇವೆ ಎಂಬುದು ನಮ್ಮ ವಿವೇಚನೆಗೆ ಬಿಟ್ಟಿರುತ್ತದೆ ಎಂಬುದೂ ನಿಜ. ಆದರೆ ನೂತನ ಪಠ್ಯದ ಹೆಸರಲ್ಲಿ ಯಾವುದೋ ಪಕ್ಷದ ಸಿದ್ಧಾಂತವನ್ನು ಹೇರುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಕನ್ನಡದಲ್ಲಿ ಓದುವ ವಿದ್ಯಾರ್ಥಿಗಳು ಈ ಪುಸ್ತಕವನ್ನೇ ಖರೀದಿಸಿದರೆ ಕಷ್ಟವಾಗುತ್ತದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ತಮಿಳು ವೀರರನ್ನು ಎರವಲು ತಂದು ಇಲ್ಲದ ‘ಉರಿಗೌಡ, ನಂಜೇಗೌಡ’ರನ್ನು ಸೃಷ್ಟಿಸಿದ ವಾಟ್ಸಾಪ್‌ ವಿವಿ!

ಸಮಾಜದ ಭಾವನೆಗಳನ್ನು ಉಲ್ಲೇಖಿಸಿದ್ದೇನೆ: ಪ್ರೊ.ಕೆ.ಭೈರಪ್ಪ

‘ವೈದ್ಯಕೀಯ ಸಮಾಜಶಾಸ್ತ್ರ’ ಕೃತಿಯ ಲೇಖಕರಾದ ಪ್ರೊ.ಕೆ.ಭೈರಪ್ಪ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು. “ನಾನು ಎಲ್ಲವನ್ನೂ ಮುಕ್ತವಾಗಿ ನೋಡುತ್ತೇನೆ. ನನಗಿಂತ ಕಿರಿಯರು ಹೇಳಿದ್ದನ್ನೂ ಸ್ವೀಕರಿಸುತ್ತೇನೆ. ಭಾರತೀಯ ಸಮಾಜದಲ್ಲಿ ಈ ರೀತಿಯ ಭಾವನೆಗಳಿವೆ ಎಂದು ಉಲ್ಲೇಖಿಸಿದ್ದೇನೆ. ಹಾಗೆಂದು ನಾನು ಬರಿದ್ದದ್ದೇ ಅಂತಿಮವೆಂದು ಹೇಳುತ್ತಿಲ್ಲ. ಈಗಾಗಲೇ ಇರುವ ಹಲವು ಕೃತಿಗಳಲ್ಲಿನ ಉಲ್ಲೇಖಗಳನ್ನು ಆಧರಿಸಿ ಈ ಪುಸ್ತಕ ಬರೆದಿದ್ದೇನೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಥರದ ಪ್ರಾಜ್ಞರೇ ಸ್ವಮೂತ್ರ ಚಿಕಿತ್ಸೆಯನ್ನು ಅನುಸರಿಸಿದ ಉದಾಹರಣೆಗಳಿವೆ. ಅದನ್ನು ಕೃತಿಯಲ್ಲಿ ಉಲ್ಲೇಖಿಸಿದ್ದೇನೆ” ಎಂದು ವಿವರಿಸಿದರು.

“ಮೆಡಿಕಲ್ ಸೋಷಿಯಾಲಜಿ ಬಗ್ಗೆ ಬರೆಯುವಾಗ ಬೆಂಗಳೂರು ವಿವಿಯ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರನ್ನು ಭೇಟಿಯಾಗಿ ಅಗತ್ಯವಾಗಿ ಬೇಕಾದ ಆಕರ ಕೃತಿಗಳನ್ನು ಪಡೆದಿದ್ದೇನೆ. ಮೈಸೂರು ವಿವಿ ಸಿಲಬಸ್‌ನಲ್ಲಿ ಪಟ್ಟಿ ಮಾಡಲಾದ ಕೃತಿಗಳನ್ನು ರೆಫರ್‌ ಮಾಡಿದ್ದೇನೆ. ಇಲ್ಲಿ ಕೃತಿಯಲ್ಲಿ ಬರೆದಿರುವುದೆಲ್ಲವೂ ಅಧಿಕೃತ ಎನ್ನಲು ಸಾಧ್ಯವಿಲ್ಲ. ನನಗೆ ತೋಚಿದ ರೀತಿಯಲ್ಲಿ, ರೆಫರೆನ್ಸ್‌ ಮಾಡಿದ್ದನ್ನು ಆಧರಿಸಿ ಬರೆದಿದ್ದೇನೆ. ಜಾನಪದೀಯ, ಸಾಂಪ್ರದಾಯಿಕ ಔಷಧಿಗಳ ಕುರಿತು ಬರೆಯುತ್ತಾ ಇವುಗಳನ್ನು ಉಲ್ಲೇಖಿಸಿದ್ದೇನೆ. ಸಮಾಜದಲ್ಲಿ ಈ ಆಚರಣೆಗಳು, ಭಾವನೆಗಳಿವೆ ಎಂಬುದನ್ನು ಹೇಳಲು ಯತ್ನಿಸಿದ್ದೇನೆ. ಇವು ಅವೈಜ್ಞಾನಿವಾಗಿವೆಯೇ ಎಂಬುದನ್ನು ಚರ್ಚಿಸಬೇಕಿದೆ. ಆದರೆ ಇವುಗಳನ್ನು ಉಲ್ಲೇಖಿಸುವುದೇ ಅಪರಾಧವೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...