Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...