Homeಚಳವಳಿಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

- Advertisement -
- Advertisement -

ದಲಿತರು ಒಗ್ಗಟ್ಟಾದರೆ ಒಂದು ಕೋಟಿ, ಛಿದ್ರಗೊಂಡರೆ ಕಾಯುತ್ತಿದೆ ಚಾಟಿ.. ಹೋಗೋಣ ಬೆಂಗಳೂರಿಗೆ, ಅಂಬೇಡ್ಕರ್ ದಾರಿಗೆ, ಹೋರಾಟದ ತೇರಿಗೆ, ಸಮಾನತೆಯ ಬೆಳಕಿಗೆ… ಕೋಮುವಾದಿ ಕೂಟದಿಂದ ಸಂವಿಧಾನಕ್ಕೆ ಆಪತ್ತು, ದಮನಿತರ ಒಗ್ಗಟ್ಟಿನಿಂದ ಭಾರತಕ್ಕೆ ತಾಕತ್ತು.. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ, ನೊಂದವರ ಐಕ್ಯ ಹೋರಾಟ, ಇಂದಲ್ಲ ನಾಳೆ ಫಲ ಕೊಡುತ್ತದೆ.. ಸಂಬಂಜ ಅನ್ನೋದು ದೊಡ್ಡದು ಕನಾ.. ಈ ರೀತಿಯ ವೈವಿಧ್ಯಮಯ, ವಿಚಾರಪೂರ್ಣ ಮಾಹಿತಿಗಳುಳ್ಳ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕದ ಎಲ್ಲಾ ದಲಿತ ಸಂಘಟನೆಗಳೂ ಒಗ್ಗೂಡಿ ಹೋರಾಡುವ ಐತಿಹಾಸಿಕ ಸಂದರ್ಭ ಸನ್ನಿಹಿತವಾಗಿದೆ.  ಹಲವು ಹಂತದ ಮಾತುಕತೆ, ಚರ್ಚೆ ಮೂಲಕ 12 ಪ್ರಮುಖ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪ್ರಯತ್ನದ ಭಾಗವಾಗಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರೂಪುಗೊಂಡಿದೆ ಎಂದು ಹಿರಿಯ ಚಿಂತಕರಾದ ಇಂದೂಧರ ಹೊನ್ನಾಪುರರವರು ಘೋಷಿಸಿದ್ದರು. ಸಮಿತಿಯ ಮೊದಲ ಐಕ್ಯ ಕಾರ್ಯಕ್ರಮ ಡಿಸೆಂಬರ್ 6 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣದ ದಿನದಂದು ನಡೆಯಲಿದೆ.

ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್‌-ಬಿಜೆಪಿ ದುರಾಡಳಿತದ ವಿರುದ್ಧ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ – ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜರುಗಲಿದೆ.

ದಲಿತ ಮುಖಂಡರಾದ ಎನ್, ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಾ.ಡಿ.ಜಿ ಸಾಗರ್, ಲಕ್ಷ್ಮೀನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್ ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್ ಮತ್ತು ಎಸ್.ಆರ್ ಕೊಲ್ಲೂರುರವರು ಸಮಾವೇಶದ ಮುಂದಾಳತ್ವ ವಹಿಸಿದ್ದಾರೆ.

ಅಲ್ಲದೆ ದೇವನೂರ ಮಹಾದೇವ, ಎಸ್.ಮರಿಸ್ವಾಮಿ, ಇಂದೂಧರ ಹೊನ್ನಾಪುರ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್, ಹೆಚ್.ಎಂ ರುದ್ರಸ್ವಾಮಿ, ಲಕ್ಷ್ಮೀಪತಿ ಕೋಲಾರ, ಮಂಗ್ಳೂರ ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್, ಕೆ.ದೊರೈರಾಜ್, ಸಿ.ಬಸವಲಿಂಗಯ್ಯ, ಹೆಚ್, ಜನಾರ್ಧನ್ ಜನ್ನಿ, ಕುಪ್ಪೆ ನಾಗರಾಜ್, ಗಂಗಮ್ಮ ತುಮಕೂರು, ಭಾರತಿ ರಾಜಣ್ಣ, ಪುರುಷೋತ್ತಮ್ ದಾಸ್, ಸಿ.ಜಿ ಶ್ರೀನಿವಾಸ್, ಪಿಚ್ಚಳ್ಳಿ ಶ್ರೀನಿವಾಸ್ ಮತ್ತು ಗೊಲ್ಲಹಳ್ಳಿ ಶಿವಪ್ರಸಾದ್‌ರವರು ಸಮಿತಿಯ ಜೊತೆಗಿದ್ದಾರೆ.

ಖಾಸಗೀಕರಣ, ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮೀಸಲಾತಿಯ ಅಸ್ತಿತ್ವ ನಾಶವಾಗುತ್ತಿದ್ದರೆ, ಮತ್ತೊಂದೆಡೆ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಕಡಿತ, ಪಠ್ಯಗಳ ಕೇಸರಿಕರಣ ನಡೆಯುತ್ತಿದೆ. ಅದೇ ಸಮಯದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟಿ ಬೆಳೆಸಿದ ತಳ ಸಮುದಾಯಗಳ ವೈವಿಧ್ಯಮತ ಸಂಸ್ಕೃತಿ, ಆಚರಣೆಗಳನ್ನು ಬಲಿಕೊಟ್ಟು ಬ್ರಾಹ್ಮಣ್ಯ ತಾರತಮ್ಯ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಬ್ರಾಹ್ಮಣ್ಯವಾದ ಮತ್ತು ಬಂಡವಾಳವಾದವನ್ನು ಧಿಕ್ಕರಿಸುವುದಕ್ಕಾಗಿ, ಅಂಬೇಡ್ಕರ್‌ರವರ ಹೋರಾಟದ ಫಲವಾಗಿ ದಕ್ಕಿದ ಹಕ್ಕುಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಡಿ.6 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯುತ್ತಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...