Homeಮುಖಪುಟದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

ದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

- Advertisement -
- Advertisement -

“ದಲಿತ ಮುಸ್ಲಿಮರು ಮುಖ್ಯವಾಹಿನಿಯಿಂದ ದೂರವಿದ್ದಾರೆ, ಇವರಿಗೆ ಎಸ್‌ಸಿ ಸ್ಥಾನಮಾನ ಅಗತ್ಯ” ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಜಾಜ಼್ ಅಲಿ ಅಭಿಪ್ರಾಯಪಟ್ಟಿದ್ದಾರೆ.

ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆಂದು ಕಳೆದ 25 ವರ್ಷಗಳಿಂದ ಹೋರಾಡುತ್ತಿರುವ ಅವರು ‘ದಿ ಕ್ವಿಂಟ್‌’ ಜಾಲತಾಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಹೋರಾಡುತ್ತೇವೆ, ನಾವು ಸಾಧಿಸಿ ತೋರಿಸುತ್ತೇವೆ. ಏಕೆಂದರೆ ಅದು ಸಮಾಜಕ್ಕೆ, ದೇಶಕ್ಕೆ ಪ್ರಯೋಜನಕಾರಿಯಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲಿ ಅವರು ಹಿಂದುಳಿದ ಮುಸ್ಲಿಂ ಮೋರ್ಚಾವನ್ನು ಸ್ಥಾಪಿಸಿದವರು. ನಂತರ ಯುನೈಟೆಡ್ ಮುಸ್ಲಿಂ ಮೋರ್ಚಾ ಎಂದು ಇದಕ್ಕೆ ಮರುನಾಮಕರಣ ಮಾಡಲಾಯಿತು. ಈಗ ಆಲ್-ಇಂಡಿಯಾ ಬ್ಯಾಕ್‌ವರ್ಡ್ ಮುಸ್ಲಿಂ ಮೋರ್ಚಾ ಎಂದು ಕರೆಯಲಾಗುತ್ತಿದೆ.

ಅಲಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. 1980ರ ದಶಕದಿಂದ ಪಾಟ್ನಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಶುಲ್ಕವನ್ನಷ್ಟೇ ಪಡೆಯುವುದರಿಂದ ಅತ್ಯಂತ ಕಡುಬಡವರು ಇವರ ಕ್ಲಿನಿಕ್‌ಗೆ ಬರುತ್ತಾರೆ.

“ನಾನು ವೃತ್ತಿಯಲ್ಲಿ ವೈದ್ಯ, ನಾನು ಬಡವರ ಜೊತೆ ಕೆಲಸ ಮಾಡುತ್ತೇನೆ. ಅವರ ಸ್ಥಿತಿಯನ್ನು ನಾನು ನೇರವಾಗಿ ನೋಡಿದೆ. ಅವರಿಗೆ ಸಹಾಯ ಮಾಡಬೇಕೆಂದರೆ 341ನೇ ವಿಧಿ ಒಂದು ದಾರಿ ಎಂದು ನಾನು ಅರಿತುಕೊಂಡೆ” ಎನ್ನುತ್ತಾರೆ.

ಅನುಚ್ಛೇದ 341- ಯಾವ ಸಮುದಾಯಗಳು ಪರಿಶಿಷ್ಟ ಜಾತಿಗಳ ಪಟ್ಟಿಯ ಭಾಗವಾಗಬೇಕೆಂದು ಸೂಚಿಸಿ ಸಂಸತ್ತಿಗೆ (ರಾಷ್ಟ್ರಪತಿಯವರ ಮೂಲಕ) ಅಧಿಕಾರ ನೀಡುತ್ತದೆ. ಆದಾಗ್ಯೂ, ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ 1950ರ ಪ್ರಕಾರ ಪ್ರಸ್ತುತ ಹಿಂದೂ, ಸಿಖ್ ಅಥವಾ ಬೌದ್ಧ ಎಂದು ಪ್ರತಿಪಾದಿಸುವ ವ್ಯಕ್ತಿಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಸಾಧ್ಯವಾಗಿದೆ.

ದಲಿತ ಕ್ರಿಶ್ಚಿಯನ್‌, ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಲ್ಲಿ ಅಸ್ಪೃಶ್ಯತೆ ಇಲ್ಲವಾದ ಕಾರಣ, ಇಲ್ಲಿನ ದಲಿತರನ್ನು ಎಸ್‌ಸಿ ಅಡಿ ಗುರುತಿಸಲು ಸಾಧ್ಯವಿಲ್ಲ ಎಂದಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಹಲವು ಜನರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಲ್ಲಿ ಅಲಿಯವರೂ ಒಬ್ಬರಾಗಿದ್ದಾರೆ.

“ನಾತ್, ಬಕ್ಖೋ, ಹಲಾಲ್‌ಖೋರ್, ಮೆಹ್ತಾರ್, ಭಂಗಿ, ಭಂಟ್, ಭಟಿಯಾರ, ಮೋಚಿ, ಪಾಸಿ, ಖಾತಿಕ್, ಜುಲಾಹಾ, ಕೇರಳದಲ್ಲಿ ಮಲಬಾರಿ ಮುಸ್ಲಿಮರು, ತಮಿಳುನಾಡಿನಲ್ಲಿ ಲಬ್ಬಾಯಿ, ರೌಥರ್‌ಗಳು, ಮರಕ್ಕರ್‌ಗಳು, ಆಂಧ್ರಪ್ರದೇಶದ ದೂದೇಕುಲ- ಹೀಗೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. 1950ರ ಆದೇಶದ ನಂತರ ಅವರನ್ನು ಎಸ್‌ಸಿ ಪಟ್ಟಿಯಿಂದ ಹೊರಹಾಕಲಾಯಿತು. ಈ ಕಾರಣದಿಂದಾಗಿ ಈ ಸಮುದಾಯಗಳು ಮುಖ್ಯವಾಹಿನಿಯಿಂದ ದೂರವಾಗಿವೆ” ಎಂದು ಅಲಿ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ಈ [ದಲಿತ ಮುಸ್ಲಿಂ] ಸಮುದಾಯಗಳು ಮುಖ್ಯವಾಹಿನಿಯ ಭಾಗವಾಗಬೇಕಾದರೆ ಎಸ್‌ಸಿ ಸ್ಥಾನಮಾನವನ್ನು ಪಡೆಯಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಕೋಮು ರಾಜಕೀಯ ಕೊನೆಗೊಳ್ಳಬೇಕು, ಸಾಮಾನ್ಯ ರಾಜಕೀಯ ಪ್ರಾರಂಭವಾಗಬೇಕು. ಸಾಮಾನ್ಯ ರಾಜಕೀಯ ಅಂದರೇನು? ಹಣದುಬ್ಬರವನ್ನು ಕೊನೆಗೊಳಿಸಬೇಕು, ನಿರುದ್ಯೋಗ ಕೊನೆಯಾಗಬೇಕು. ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು… ಜನರು ಈ ಸಮಸ್ಯೆಗಳ ಬಗ್ಗೆ ಹೋರಾಡಬೇಕು” ಎನ್ನುತ್ತಾರೆ ಅಲಿ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಎಸ್‌ಸಿ ಸ್ಥಾನಮಾನದ ಬೇಡಿಕೆಯನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯೋಗವನ್ನು ಕೇಂದ್ರದ ಬಿಜೆಪಿ ಸರ್ಕಾರ ರಚಿಸಿದೆ. ಆಯೋಗವು ಎರಡು ವರ್ಷಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು.

70-75 ವರ್ಷಗಳ ನಂತರ ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಹೆಸರಿನಲ್ಲಿ ಆಯೋಗವನ್ನು ರಚಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಲಿ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...