Homeಮುಖಪುಟಶಾಲೆಗಳನ್ನೂ ಬಿಡದ ಹೊಲಸು ರಾಜಕೀಯ: ಶಾಲೆಗಳಿಗೆ ಕೇಸರಿ ಬಣ್ಣಕ್ಕೆ ನಟ ಕಿಶೋರ್ ವಿರೋಧ

ಶಾಲೆಗಳನ್ನೂ ಬಿಡದ ಹೊಲಸು ರಾಜಕೀಯ: ಶಾಲೆಗಳಿಗೆ ಕೇಸರಿ ಬಣ್ಣಕ್ಕೆ ನಟ ಕಿಶೋರ್ ವಿರೋಧ

- Advertisement -
- Advertisement -

ಸರ್ಕಾರಿ ಶಾಲೆಗಳ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ಬಿಜೆಪಿ ಸರ್ಕಾರದ ಕ್ರಮಕ್ಕೆ ನಟ ಕಿಶೋರ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, ‘ಏಳಿ ಎದ್ದೇಳಿ ಪ್ರತಿಭಟಿಸಿ’ ಎಂದು ಕರೆ ನೀಡಿದ್ದಾರೆ.

“ಜ್ಞಾನದ ದೇಗುಲ, ಶಾಲೆಗಳನ್ನೂ ಬಿಡದ ಹೊಲಸು ರಾಜಕೀಯ. ಧರ್ಮದ ಹೆಸರಿನಲ್ಲಿ ವಿವೇಕಾನಂದರ ಉದಾತ್ತ ಚಿಂತನೆಗಳ ಅವಹೇಳನ, ಅವಿವೇಕತನ. ಕೇವಲ ಯಾರದ್ದೊ ಓಟು, ಅಧಿಕಾರದ ದಾಹಕ್ಕಾಗಿ ನಮ್ಮ ಮಕ್ಕಳೂ, ಅವರ ಭವಿಷ್ಯವೂ, ದೇಶವೂ ಬಲಿಯಾಗಬೇಕಾದೀತು. ಏಳಿ ಎದ್ದೇಳಿ ಪ್ರತಿಭಟಿಸಿ” ಎಂದು ಫೇಸ್‌ಬುಕ್‌ ನಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ 8000 ಶಾಲಾ ಕೊಠಡಿಗಳೀಗೆ ವಿವೇಕ ಎಂದು ಹೆಸರಿಡಲಾಗಿದ್ದು, ಆ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಈ ಮೊದಲು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ‘ಶಾಲೆಗಳಿಗೆ ಕೇಸರಿ ಬಣ್ಣ ಅವಶ್ಯಕತೆ ಇರಲಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದರು. ““ಸರ್ಕಾರದ ಈ ಯೋಜನೆಗೆ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕೇಸರಿ ಬಣ್ಣವು ತ್ಯಾಗದ ಪ್ರತೀಕವಾಗಿದ್ದು ಅದನ್ನು ಎಲ್ಲರೂ ಗೌರವಿಸುತ್ತಾರೆ. ಹೀಗಿರುವಾಗ ಕೇಸರಿ ಬಣ್ಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ” ಎಂದಿದ್ದರು.

ವಿರೋಧ ಪಕ್ಷವಾದ ಕಾಂಗ್ರೆಸ್ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯ ಸಮಸ್ಯೆ ಬಗೆಹರಿಸಬೇಕೆ ಹೊರತು ಕೇಸರಿ ಬಣ್ಣ ಬಳಿಯುವುದಲ್ಲ ಎಂದು ಪ್ರತಿಕ್ರಿಯಿಸಿತ್ತು. ಈಗ ನಟ ಕಿಶೋರ್ ಸಹ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಮತೀಯ ಗೂಂಡಾಗಿರಿಯಿಂದ ಹಿಡಿದು ಶಾಲಾ ಕೊಠಡಿಯ ಕೇಸರಿ ಬಣ್ಣದವರೆಗೆ: ಬೊಮ್ಮಾಯಿ ಸರ್ಕಾರದ ಕೋಮು ರಾಜಕಾರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...