Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...