Homeಮುಖಪುಟಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

ಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

- Advertisement -
- Advertisement -

ಸುದರ್ಶನ್ ನ್ಯೂಸ್ ಟಿವಿ ಚಾನೆಲ್‌ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ ಬಳಿಕ ಅಂತರಧರ್ಮೀಯ ವಿವಾಹ ರದ್ದಾಗಿದೆ. ಉಭಯ ಕುಟುಂಬಗಳು ಮದುವೆಯನ್ನು ನಿಲ್ಲಿಸಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

“ಲವ್ ಜಿಹಾದ್” ಎಂದು ಆರೋಪಿಸಿ ಮದುವೆಯ ಆಮಂತ್ರಣ ಪತ್ರವನ್ನು ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ್ದರು. ನಂತರ ಮಹಾರಾಷ್ಟ್ರದ ವಸಾಯಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಎರಡೂ ಕುಟುಂಬಗಳು ರದ್ದುಗೊಳಿಸಿವೆ.

ಅಂತರ್‌ ಧರ್ಮೀಯವಾಗಿದ್ದ ವಿವಾಹ ಕಾರ್ಯಕ್ರಮವನ್ನು ನವೆಂಬರ್ 20, 2022ರಂದು ನಿಗದಿಪಡಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಧು-ವರರ ಕುಟುಂಬಗಳು ಶುಕ್ರವಾರ ಸಂಜೆ ನನ್ನನ್ನು ಭೇಟಿಯಾದರು” ಎಂದು ಸಮಾರಂಭ ನಡೆಯಬೇಕಿದ್ದ ಸ್ಥಳದ ವ್ಯವಸ್ಥಾಪಕರೊಬ್ಬರು ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪಕ, “ಅವರು ದಿನವಿಡೀ ಕರೆಗಳನ್ನು ಸ್ವೀಕರಿಸುತ್ತಿದ್ದರು ಮತ್ತು ತೊಂದರೆಗೊಳಗಾದಂತೆ ತೋರುತ್ತಿತ್ತು” ಎಂದು ಉಲ್ಲೇಖಿಸಿದ್ದಾರೆ.

“ನನ್ನ ಸ್ಥಳದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರು ರದ್ದುಮಾಡಿದರು. ನಾನು ಅವರ ಮುಂಗಡ ಹಣವನ್ನು ಹಿಂದಿರುಗಿಸಿದೆ. ಸಮಾರಂಭದ ಆಮಂತ್ರಣ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾದ ಕಾರಣ ಕಾರ್ಯಕ್ರಮ ರದ್ದಾಯಿತು” ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳವು ವಸಾಯ್‌ನಲ್ಲಿದೆ.

ತಮ್ಮ ಚಾನೆಲ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಕುಖ್ಯಾತರಾದ ಚವ್ಹಾಂಕೆ, ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಾರಂಭದ ಆಮಂತ್ರಣ ಪತ್ರವನ್ನು ಟ್ವೀಟ್ ಮಾಡಿದ್ದರು. ತನ್ನ ಸಂಗಾತಿ ಶ್ರದ್ಧಾ ವಾಕರ್‌‌ರನ್ನು ಅಫ್ತಾಬ್ ಪೂನಾವಾಲಾ ಕೊಂದಿರುವ ಪ್ರಕರಣಕ್ಕೆ ಈ ವಿವಾಹವನ್ನು ತಳುಕು ಹಾಕಿದ ಅವರು, ‘ಲವ್‌ಜಿಹಾದ್‌ ಆಕ್ಟ್‌ಆಫ್‌ಟೆರರ್‌‌’ ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ಟ್ವೀಟ್ ಮಾಡಿದ್ದರು.

ಇಸ್ಲಾಂಗೆ ಮತಾಂತರ ಮಾಡಲು ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಮದುವೆಯಾಗುತ್ತಾರೆಂದು ಹುಟ್ಟಿಸಲಾಗಿರುವ ಹಿಂದುತ್ವ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಎಂಬ ವಿಶ್ಲೇಷಣೆಗಳಿವೆ.

“ಕೊಲೆಗಾರ ಅಫ್ತಾಬ್‌ನ ವಸಾಯ್‌ನಲ್ಲಿ ಇಮ್ರಾನ್ ಮತ್ತು ದಿವ್ಯಾ ಅವರ ಮದುವೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ” ಎಂದು ಚವ್ಹಾಂಕೆ ಬರೆದಿದ್ದಾರೆ. “35 ತುಂಡುಗಳಾಗಿ ಕತ್ತರಿಸಿದ ಹೃದಯ ವಿದ್ರಾವಕ ಕೊಲೆಯ ನಂತರ, ಅದೇ ಊರಿನಲ್ಲಿ ಇದು ಹೇಗೆ ನಡೆಯುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಅವರು ವಸಾಯ್‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ಸೆಪ್ಟೆಂಬರ್ 2020ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಚವ್ಹಾಂಚೆ ಅವರಿಗೆ ಎಚ್ಚರಿಕೆಯನ್ನು ನೀಡಿತ್ತು. ಭಾರತೀಯ ಮುಸ್ಲಿಮರು ಸಂಘಟಿತ ಇಸ್ಲಾಮಿಕ್ ಪಿತೂರಿಯ ಭಾಗವಾಗಿ ನಾಗರಿಕ ಸೇವೆಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಸುದರ್ಶನ್ ನ್ಯೂಸ್ ಸಂಪಾದಕರು ‘UPSE ಜಿಹಾದ್’ ಎಂಬ ಕಾರ್ಯಕ್ರಮ ಮಾಡಿದ್ದಕ್ಕೆ ಕೋರ್ಟ್ ಎಚ್ಚರಿಕೆ ನೀಡಿತ್ತು.

ಸಿಎನ್‌ಎನ್-ನ್ಯೂಸ್ 18, ನ್ಯೂಸ್ 18 ಇಂಡಿಯಾ ಮತ್ತು ರಿಪಬ್ಲಿಕ್ ಭಾರತ್ ಇಂಡಿಯಾದಂತಹ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ವಾಕರ್ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ.

ಮದುವೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಕುಟುಂಬಗಳಲ್ಲಿ ಒಂದನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’, ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...