Homeಮುಖಪುಟಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

ಸುದರ್ಶನ್‌ ಟಿವಿ ಸಂಪಾದಕ ಚವ್ಹಾಂಕೆ ಟ್ವೀಟ್ ಬಳಿಕ ಅಂತರಧರ್ಮೀಯ ವಿವಾಹ ರದ್ದು

- Advertisement -
- Advertisement -

ಸುದರ್ಶನ್ ನ್ಯೂಸ್ ಟಿವಿ ಚಾನೆಲ್‌ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ ಬಳಿಕ ಅಂತರಧರ್ಮೀಯ ವಿವಾಹ ರದ್ದಾಗಿದೆ. ಉಭಯ ಕುಟುಂಬಗಳು ಮದುವೆಯನ್ನು ನಿಲ್ಲಿಸಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

“ಲವ್ ಜಿಹಾದ್” ಎಂದು ಆರೋಪಿಸಿ ಮದುವೆಯ ಆಮಂತ್ರಣ ಪತ್ರವನ್ನು ಸುರೇಶ್ ಚವ್ಹಾಂಕೆ ಟ್ವೀಟ್ ಮಾಡಿದ್ದರು. ನಂತರ ಮಹಾರಾಷ್ಟ್ರದ ವಸಾಯಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಎರಡೂ ಕುಟುಂಬಗಳು ರದ್ದುಗೊಳಿಸಿವೆ.

ಅಂತರ್‌ ಧರ್ಮೀಯವಾಗಿದ್ದ ವಿವಾಹ ಕಾರ್ಯಕ್ರಮವನ್ನು ನವೆಂಬರ್ 20, 2022ರಂದು ನಿಗದಿಪಡಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಧು-ವರರ ಕುಟುಂಬಗಳು ಶುಕ್ರವಾರ ಸಂಜೆ ನನ್ನನ್ನು ಭೇಟಿಯಾದರು” ಎಂದು ಸಮಾರಂಭ ನಡೆಯಬೇಕಿದ್ದ ಸ್ಥಳದ ವ್ಯವಸ್ಥಾಪಕರೊಬ್ಬರು ‘ನ್ಯೂಸ್‌ಲಾಂಡ್ರಿ’ಗೆ ತಿಳಿಸಿದ್ದಾರೆ. ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪಕ, “ಅವರು ದಿನವಿಡೀ ಕರೆಗಳನ್ನು ಸ್ವೀಕರಿಸುತ್ತಿದ್ದರು ಮತ್ತು ತೊಂದರೆಗೊಳಗಾದಂತೆ ತೋರುತ್ತಿತ್ತು” ಎಂದು ಉಲ್ಲೇಖಿಸಿದ್ದಾರೆ.

“ನನ್ನ ಸ್ಥಳದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರು ರದ್ದುಮಾಡಿದರು. ನಾನು ಅವರ ಮುಂಗಡ ಹಣವನ್ನು ಹಿಂದಿರುಗಿಸಿದೆ. ಸಮಾರಂಭದ ಆಮಂತ್ರಣ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾದ ಕಾರಣ ಕಾರ್ಯಕ್ರಮ ರದ್ದಾಯಿತು” ಎಂದು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳವು ವಸಾಯ್‌ನಲ್ಲಿದೆ.

ತಮ್ಮ ಚಾನೆಲ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಕುಖ್ಯಾತರಾದ ಚವ್ಹಾಂಕೆ, ಶುಕ್ರವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಮಾರಂಭದ ಆಮಂತ್ರಣ ಪತ್ರವನ್ನು ಟ್ವೀಟ್ ಮಾಡಿದ್ದರು. ತನ್ನ ಸಂಗಾತಿ ಶ್ರದ್ಧಾ ವಾಕರ್‌‌ರನ್ನು ಅಫ್ತಾಬ್ ಪೂನಾವಾಲಾ ಕೊಂದಿರುವ ಪ್ರಕರಣಕ್ಕೆ ಈ ವಿವಾಹವನ್ನು ತಳುಕು ಹಾಕಿದ ಅವರು, ‘ಲವ್‌ಜಿಹಾದ್‌ ಆಕ್ಟ್‌ಆಫ್‌ಟೆರರ್‌‌’ ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ಟ್ವೀಟ್ ಮಾಡಿದ್ದರು.

ಇಸ್ಲಾಂಗೆ ಮತಾಂತರ ಮಾಡಲು ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಮದುವೆಯಾಗುತ್ತಾರೆಂದು ಹುಟ್ಟಿಸಲಾಗಿರುವ ಹಿಂದುತ್ವ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಎಂಬ ವಿಶ್ಲೇಷಣೆಗಳಿವೆ.

“ಕೊಲೆಗಾರ ಅಫ್ತಾಬ್‌ನ ವಸಾಯ್‌ನಲ್ಲಿ ಇಮ್ರಾನ್ ಮತ್ತು ದಿವ್ಯಾ ಅವರ ಮದುವೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ” ಎಂದು ಚವ್ಹಾಂಕೆ ಬರೆದಿದ್ದಾರೆ. “35 ತುಂಡುಗಳಾಗಿ ಕತ್ತರಿಸಿದ ಹೃದಯ ವಿದ್ರಾವಕ ಕೊಲೆಯ ನಂತರ, ಅದೇ ಊರಿನಲ್ಲಿ ಇದು ಹೇಗೆ ನಡೆಯುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಅವರು ವಸಾಯ್‌ ನಿವಾಸಿಯಾಗಿದ್ದಾರೆ.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ಸೆಪ್ಟೆಂಬರ್ 2020ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಚವ್ಹಾಂಚೆ ಅವರಿಗೆ ಎಚ್ಚರಿಕೆಯನ್ನು ನೀಡಿತ್ತು. ಭಾರತೀಯ ಮುಸ್ಲಿಮರು ಸಂಘಟಿತ ಇಸ್ಲಾಮಿಕ್ ಪಿತೂರಿಯ ಭಾಗವಾಗಿ ನಾಗರಿಕ ಸೇವೆಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಸುದರ್ಶನ್ ನ್ಯೂಸ್ ಸಂಪಾದಕರು ‘UPSE ಜಿಹಾದ್’ ಎಂಬ ಕಾರ್ಯಕ್ರಮ ಮಾಡಿದ್ದಕ್ಕೆ ಕೋರ್ಟ್ ಎಚ್ಚರಿಕೆ ನೀಡಿತ್ತು.

ಸಿಎನ್‌ಎನ್-ನ್ಯೂಸ್ 18, ನ್ಯೂಸ್ 18 ಇಂಡಿಯಾ ಮತ್ತು ರಿಪಬ್ಲಿಕ್ ಭಾರತ್ ಇಂಡಿಯಾದಂತಹ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ವಾಕರ್ ಹತ್ಯೆಯನ್ನು ‘ಲವ್ ಜಿಹಾದ್’ ಎಂದು ಬಿಂಬಿಸಿವೆ.

ಮದುವೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಕುಟುಂಬಗಳಲ್ಲಿ ಒಂದನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’, ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...