Homeಸಿನಿಮಾಕ್ರೀಡೆಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ - ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಪ್ರೊ ಕಬಡ್ಡಿ: 10ನೇ ಗೆಲುವು ದಾಖಲಿಸಿದ ಬೆಂಗಳೂರು ಬುಲ್ಸ್ – ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಬುಲ್ಸ್ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದ್ದು 10ನೇ ಗೆಲುವು ದಾಖಲಿಸಿದೆ. ಶುಕ್ರವಾರ ರಾತ್ರಿ ಗುಜರಾತ್ ಜೈಂಟ್ಸ್ ತಂಡದ ಎದುರಿನ ಪಂದ್ಯದಲ್ಲಿ 45-38 ಅಂಕಗಳಿಂದ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದುವರೆಗೆ ಆಡಿದ 15 ಪಂದ್ಯಗಳಲ್ಲಿ 10 ಗೆಲುವು, ನಾಲ್ಕು ಸೋಲು ಮತ್ತು ಒಂದು ಟೈನೊಂದಿಗೆ 56 ಅಂಕ ಗಳಿಸಿರುವ ಬೆಂಗಳೂರು ತಂಡ ಪ್ಲೇ ಆಫ್‌ ಕಡೆ ಮುಖ ಮಾಡಿದೆ.

ಭರವಸೆಯ ರೈಡರ್ ಭರತ್ 

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಭರತ್‌ಗೆ ಸಹಾಯಕವಾಗಿ ವಿಕಾಸ್ ಖಂಡೋಲ ಮತ್ತು ನೀರಜ್ ನರ್ವಾಲ್ ಪ್ರದರ್ಶನ ನೀಡುತ್ತಿದ್ದಾರೆ. ಒಟ್ಟಾರೆ ಬೆಂಗಳೂರು ತಂಡದ ರೈಡಿಂಗ್ ಯೂನಿಟ್ ಪ್ರಬಲವಾಗಿದೆ. ಹಾಗಾಗಿ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿದೆ.

ಡಿಫೆಂಡಿಂಗ್ ಪ್ರಬಲವಾಗಬೇಕಿದೆ

ಬೆಂಗಳೂರು ತಂಡದ ಡಿಫೆಂಡಿಂಗ್ ಮತ್ತಷ್ಟು ಪ್ರಬಲವಾಗಿದೆ. ಕೆಲ ಪಂದ್ಯಗಳಲ್ಲಿ ಸೌರಭ್ ನಂದಲ್ ಉತ್ತಮ ಪ್ರದರ್ಶನ ನೀಡಿದರೆ ಕೆಲ ಪಂದ್ಯಗಳಲ್ಲಿ ಅಮನ್ ಚೆನ್ನಾಗಿ ಆಡುತ್ತಾರೆ. ಕೆಲವೊಮ್ಮೆ ಮಯೂರ್ ಕದಮ್ ಮಿಂಚಿದ್ದರೆ ಕೆಲವೊಮ್ಮೆ ತಂಡದ ನಾಯಕ ಮಹೇಂದರ್ ಮಿಂಚುತ್ತಿದ್ದಾರೆ. ಆದರೆ ಸಮಸ್ಯೆಯಿರುವುದು ಎಲ್ಲರೂ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದಿರುವುದಾಗಿದೆ. ಇದುವರೆಗೂ ಸೌರಭ್ ನಂದಲ್ 47 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ ಅಮನ್ 31 ಟ್ಯಾಕಲ್ ಪಾಯಿಂಟ್‌ಗಳೊಂದಿಗೆ 15 ಸ್ಥಾನದಲ್ಲಿದ್ದಾರೆ.

ಬೆಂಗಳೂರು ತಂಡದ ಡಿಫೆಂಡಿಂಗ್ ತಂಡ ಸಮನ್ವಯತೆಯಿಂದ, ಆತ್ಮವಿಶ್ವಾಸದಿಂದ ಆಡಿದ್ದಲ್ಲಿ ಅದು ಬೆಂಗಳೂರು ತಂಡಕ್ಕೆ ವರದಾನವಾಗಲಿದೆ. ಮಲ್ಟಿಪಾಯಿಂಟ್ ಬಿಟ್ಟುಕೊಡದಿದ್ದರೆ ಬೆಂಗಳೂರು ತಂಡ ಚಾಂಪಿಯನ್ ಆಗುವ ಎಲ್ಲಾ ಅರ್ಹತೆ ಹೊಂದಿದೆ.

ಬೆಂಗಳೂರಿನ ಪ್ಲೇ ಆಫ್ ಹಾದಿ ಸುಗಮ

ಬೆಂಗಳೂರು ತಂಡ 56 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ ಪುಣೇರಿ ಪಲ್ಟನ್ ತಂಡ ಸಹ 9 ಗೆಲುವಿನೊಂದಿಗೆ 54 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಭಾನುವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಅಗ್ರಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 7 ಪಂದ್ಯಗಳು ಬಾಕಿ ಇವೆ. ಏಳರಲ್ಲಿ ಮೂರು ಅಥವಾ ನಾಲ್ಕು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 5 ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...