Homeರಾಷ್ಟ್ರೀಯಮತಾಂತರಕ್ಕೆ ಮುಂಚೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು ಎನ್ನುವುದು ಸಂವಿಧಾನ ಬಾಹಿರ: ಮತಾಂತರ ಕಾಯ್ದೆ ಕುರಿತು ಮಧ್ಯಪ್ರದೇಶ...

ಮತಾಂತರಕ್ಕೆ ಮುಂಚೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು ಎನ್ನುವುದು ಸಂವಿಧಾನ ಬಾಹಿರ: ಮತಾಂತರ ಕಾಯ್ದೆ ಕುರಿತು ಮಧ್ಯಪ್ರದೇಶ ಹೈಕೋರ್ಟ್‌

- Advertisement -
- Advertisement -

ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ವ್ಯಕ್ತಿಯೊಬ್ಬರು ಮತಾಂತರಗೊಳ್ಳುವ ಮೊದಲು ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂಬ ನಿಯಮವೂ ಪ್ರಾಥಮಿಕವಾಗಿ ಅಸಂವಿಧಾನಿಕವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮತಾಂತರ ಕಾಯ್ದೆಯ ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳದಂತೆ ನ್ಯಾಯಾಲಯವು ರಾಜ್ಯದ ಅಧಿಕಾರಿಗಳಿಗೆ ತಡೆ ನೀಡಿದೆ.

‘ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ-2021’ ರ ಸೆಕ್ಷನ್ 10 ರ ಪ್ರಕಾರ, ಯಾರಾದರೂ ತಮ್ಮ ಧರ್ಮವನ್ನು ಬದಲಾಯಿಸಲು ಬಯಸಿದರೆ, ತಾನು ಯಾವುದೆ ಬಲವಂತವಾಗಿ, ದಬ್ಬಾಳಿಕೆ, ಅನಗತ್ಯ ಪ್ರಭಾವ ಅಥವಾ ಆಮಿಷದಿಂದ ಮತಾಂತರ ಆಗುತ್ತಿಲ್ಲ ಎಂದು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗೆ ಘೋಷಣೆಯನ್ನುಸಲ್ಲಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡವನ್ನು ವಿಧಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಮಧ್ಯಪ್ರದೇಶ ಮತಾಂತರ ವಿರೋಧಿ ಕಾನೂನನ್ನು ಕಳೆದ ವರ್ಷ ಅಧಿಸೂಚನೆ ಮಾಡಲಾಗಿತ್ತು. ಈ ಕಾನೂನು ಯಾರನ್ನಾದರೂ ತಮ್ಮ ಧರ್ಮವನ್ನು ಬದಲಾಯಿಸಲು ಬಲವಂತವಾಗಿ ಮದುವೆಯನ್ನು ಬಳಸಿದ ತಪ್ಪಿತಸ್ಥರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶವಿದೆ.

ಮತಾಂತರ-ವಿರೋಧಿ ಕಾನೂನನ್ನು ಕಳೆದ ವರ್ಷ ಅಧಿಸೂಚನೆ ಮಾಡಲಾಗಿತ್ತು. ಈ ಕಾನೂನಿನ ಅಡಿಯಲ್ಲಿ, ಮದುವೆಯ ಕಾರಣಕ್ಕೆ ಬಲವಂತವಾಗಿ ಮತಾಂತರ ಮಾಡಿದ ತಪ್ಪಿತಸ್ಥರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಪ್ರಕಾಶ್ ಚಂದ್ರ ಗುಪ್ತಾ ಅವರ ಪೀಠವು, ಬಲವಂತದ ಮತಾಂತರ ಅಲ್ಲದೆ ತಮ್ಮ ಇಚ್ಛೆಯಂತೆ ಮದುವೆಯಾದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಅಸಹಾಯಕರ ಮೇಲೆ ಪ್ರಹಾರ; ಲಿಂಗಾಯತರಿಗೂ ಗಂಡಾಂತರ

ಮತಾಂತರ ವಿರೋಧಿ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಪ್ರಕರಣದ ವಿಚಾರಣೆ ನಡೆಯುವವರೆಗೆ ಕಾನೂನಿನಡಿಯಲ್ಲಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸದಂತೆ ಸರ್ಕಾರವನ್ನು ನಿರ್ಬಂಧಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಒತ್ತಾಯಿಸಿದ್ದರು.

ಮತಾಂತರ ವಿರೋಧಿ ಕಾಯ್ದೆಯು ನಾಗರಿಕರನ್ನು ವಿಚಾರಣೆಗೆ ಒಳಪಡಿಸಲು “ಕಡಿವಾಣವಿಲ್ಲದ ಮತ್ತು ಅನಿಯಂತ್ರಿತ ಅಧಿಕಾರವನ್ನು” ಅಧಿಕಾರಿಗಳಿಗೆ ನೀಡಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ನಾಗರಿಕರು ಯಾವುದೆ ಧರ್ಮವನ್ನು ಆಚರಿಸುವ ಮತ್ತು ಯಾವುದೆ ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ತಮ್ಮ ಆಯ್ಕೆಯ ಸಂಗಾತಿಯನ್ನು ಮದುವೆಯಾಗುವ ಮೂಲಭೂತ ಹಕ್ಕುಗಳಿಗೆ ಈ ಕಾನೂನು ಅಡ್ಡಿ ಮಾಡುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

“ಒಬ್ಬ ನಾಗರಿಕನು ತಾನಿರುವ ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವ ಬಗ್ಗೆ ಯಾರಿಗೂ ತಿಳಿಸುವ ಭಾಧ್ಯತೆ ಹೊಂದಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಈ ನಡುವೆ, ಪ್ರಕರಣದಲ್ಲಿ ನ್ಯಾಯಾಲಯ ಯಾವುದೇ ಮಧ್ಯಂತರ ತೀರ್ಪು ನೀಡುವುದು ಈ ಪ್ರಕರಣದ ಅಂತಿಮ ತೀರ್ಪಿಗೆ ಕಾರಣವಾಗಬಹುದು ಎಂದು ಸರ್ಕಾರ ವಾದಿಸಿದ್ದು, ಕಾಯ್ದೆಯ ಸಾಂವಿಧಾನಿಕತೆಯನ್ನು ಎತ್ತಿ ಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ.

ಅಂತರ್‌ಧರ್ಮೀಯ ವಿವಾಹಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಯ ಅಭಿಯಾನವನ್ನು ಅನುಸರಿಸಿ ಈ ಕಾನೂನನ್ನು ತರಲಾಗಿದೆ. ಬಿಜೆಪಿ ಇಂತಹ ವಿವಾಹಗಳನ್ನು ‘‘ಲವ್ ಜಿಹಾದ್” ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...