Homeರಾಷ್ಟ್ರೀಯಮತಾಂತರಕ್ಕೆ ಮುಂಚೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು ಎನ್ನುವುದು ಸಂವಿಧಾನ ಬಾಹಿರ: ಮತಾಂತರ ಕಾಯ್ದೆ ಕುರಿತು ಮಧ್ಯಪ್ರದೇಶ...

ಮತಾಂತರಕ್ಕೆ ಮುಂಚೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು ಎನ್ನುವುದು ಸಂವಿಧಾನ ಬಾಹಿರ: ಮತಾಂತರ ಕಾಯ್ದೆ ಕುರಿತು ಮಧ್ಯಪ್ರದೇಶ ಹೈಕೋರ್ಟ್‌

- Advertisement -
- Advertisement -

ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ವ್ಯಕ್ತಿಯೊಬ್ಬರು ಮತಾಂತರಗೊಳ್ಳುವ ಮೊದಲು ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂಬ ನಿಯಮವೂ ಪ್ರಾಥಮಿಕವಾಗಿ ಅಸಂವಿಧಾನಿಕವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮತಾಂತರ ಕಾಯ್ದೆಯ ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳದಂತೆ ನ್ಯಾಯಾಲಯವು ರಾಜ್ಯದ ಅಧಿಕಾರಿಗಳಿಗೆ ತಡೆ ನೀಡಿದೆ.

‘ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ-2021’ ರ ಸೆಕ್ಷನ್ 10 ರ ಪ್ರಕಾರ, ಯಾರಾದರೂ ತಮ್ಮ ಧರ್ಮವನ್ನು ಬದಲಾಯಿಸಲು ಬಯಸಿದರೆ, ತಾನು ಯಾವುದೆ ಬಲವಂತವಾಗಿ, ದಬ್ಬಾಳಿಕೆ, ಅನಗತ್ಯ ಪ್ರಭಾವ ಅಥವಾ ಆಮಿಷದಿಂದ ಮತಾಂತರ ಆಗುತ್ತಿಲ್ಲ ಎಂದು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗೆ ಘೋಷಣೆಯನ್ನುಸಲ್ಲಿಸಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡವನ್ನು ವಿಧಿಸಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಮಧ್ಯಪ್ರದೇಶ ಮತಾಂತರ ವಿರೋಧಿ ಕಾನೂನನ್ನು ಕಳೆದ ವರ್ಷ ಅಧಿಸೂಚನೆ ಮಾಡಲಾಗಿತ್ತು. ಈ ಕಾನೂನು ಯಾರನ್ನಾದರೂ ತಮ್ಮ ಧರ್ಮವನ್ನು ಬದಲಾಯಿಸಲು ಬಲವಂತವಾಗಿ ಮದುವೆಯನ್ನು ಬಳಸಿದ ತಪ್ಪಿತಸ್ಥರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶವಿದೆ.

ಮತಾಂತರ-ವಿರೋಧಿ ಕಾನೂನನ್ನು ಕಳೆದ ವರ್ಷ ಅಧಿಸೂಚನೆ ಮಾಡಲಾಗಿತ್ತು. ಈ ಕಾನೂನಿನ ಅಡಿಯಲ್ಲಿ, ಮದುವೆಯ ಕಾರಣಕ್ಕೆ ಬಲವಂತವಾಗಿ ಮತಾಂತರ ಮಾಡಿದ ತಪ್ಪಿತಸ್ಥರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಪ್ರಕಾಶ್ ಚಂದ್ರ ಗುಪ್ತಾ ಅವರ ಪೀಠವು, ಬಲವಂತದ ಮತಾಂತರ ಅಲ್ಲದೆ ತಮ್ಮ ಇಚ್ಛೆಯಂತೆ ಮದುವೆಯಾದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಅಸಹಾಯಕರ ಮೇಲೆ ಪ್ರಹಾರ; ಲಿಂಗಾಯತರಿಗೂ ಗಂಡಾಂತರ

ಮತಾಂತರ ವಿರೋಧಿ ಕಾನೂನಿನ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಪ್ರಕರಣದ ವಿಚಾರಣೆ ನಡೆಯುವವರೆಗೆ ಕಾನೂನಿನಡಿಯಲ್ಲಿ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸದಂತೆ ಸರ್ಕಾರವನ್ನು ನಿರ್ಬಂಧಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಒತ್ತಾಯಿಸಿದ್ದರು.

ಮತಾಂತರ ವಿರೋಧಿ ಕಾಯ್ದೆಯು ನಾಗರಿಕರನ್ನು ವಿಚಾರಣೆಗೆ ಒಳಪಡಿಸಲು “ಕಡಿವಾಣವಿಲ್ಲದ ಮತ್ತು ಅನಿಯಂತ್ರಿತ ಅಧಿಕಾರವನ್ನು” ಅಧಿಕಾರಿಗಳಿಗೆ ನೀಡಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ನಾಗರಿಕರು ಯಾವುದೆ ಧರ್ಮವನ್ನು ಆಚರಿಸುವ ಮತ್ತು ಯಾವುದೆ ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ತಮ್ಮ ಆಯ್ಕೆಯ ಸಂಗಾತಿಯನ್ನು ಮದುವೆಯಾಗುವ ಮೂಲಭೂತ ಹಕ್ಕುಗಳಿಗೆ ಈ ಕಾನೂನು ಅಡ್ಡಿ ಮಾಡುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

“ಒಬ್ಬ ನಾಗರಿಕನು ತಾನಿರುವ ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವ ಬಗ್ಗೆ ಯಾರಿಗೂ ತಿಳಿಸುವ ಭಾಧ್ಯತೆ ಹೊಂದಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಈ ನಡುವೆ, ಪ್ರಕರಣದಲ್ಲಿ ನ್ಯಾಯಾಲಯ ಯಾವುದೇ ಮಧ್ಯಂತರ ತೀರ್ಪು ನೀಡುವುದು ಈ ಪ್ರಕರಣದ ಅಂತಿಮ ತೀರ್ಪಿಗೆ ಕಾರಣವಾಗಬಹುದು ಎಂದು ಸರ್ಕಾರ ವಾದಿಸಿದ್ದು, ಕಾಯ್ದೆಯ ಸಾಂವಿಧಾನಿಕತೆಯನ್ನು ಎತ್ತಿ ಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದೆ.

ಅಂತರ್‌ಧರ್ಮೀಯ ವಿವಾಹಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಯ ಅಭಿಯಾನವನ್ನು ಅನುಸರಿಸಿ ಈ ಕಾನೂನನ್ನು ತರಲಾಗಿದೆ. ಬಿಜೆಪಿ ಇಂತಹ ವಿವಾಹಗಳನ್ನು ‘‘ಲವ್ ಜಿಹಾದ್” ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...