Homeರಾಜಕೀಯರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

ರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರಿಗೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟದ ಬೆದರಿಕೆಯ ಅನಾಮಧೇಯ ಪತ್ರ ಬಂದ ದಿನದ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ನಿಗದಿತ ರಾತ್ರಿ ಸ್ಥಗಿತಗೊಳಿಸದಿದ್ದರೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲಾಗುವುದು ಎಂದು ಅನಾಮಧೇಯ ಪತ್ರವು ಬೆದರಿಕೆ ಹಾಕಿದೆ. 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿರುವ ಪತ್ರವು ರಾಹುಲ್ ಗಾಂಧಿ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಹತ್ಯೆಯ ಬೆದರಿಕೆಯನ್ನೂ ಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಧ್ಯಪ್ರದೇಶದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ದೋಷಾತೀತ ಭದ್ರತೆ ನೀಡುವುದು ಸರ್ಕಾರವು ಜವಾಬ್ದಾರವಾಗಿದೆ. ಅವರಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಬೆದರಿಕೆ ಪತ್ರದ ಬಗ್ಗೆ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ: ದಲಿತರನ್ನು ಪ್ರಭಾವಿಸಲು ಭಾರತ್‌ ಜೋಡೋ ಯಾತ್ರೆ ಯತ್ನಿಸಿದ್ದು ಹೀಗೆ…

ಈ ತಿಂಗಳ ಆರಂಭದಲ್ಲಿ ಖಾಲ್ಸಾ ಕ್ರೀಡಾಂಗಣಕ್ಕೆ ಹೋಗುವ ಮೂಲಕ 1984 ರ ಸಿಖ್ ವಿರೋಧಿ ದಂಗೆ ಸಂತ್ರಸ್ತರ ಗಾಯಗಳಿಗೆ ಕಮಲ್ ನಾಥ್ ಅವರು ಗಾಯಗಳಿಗೆ ಉಪ್ಪು ಸವರಿದ್ದಾರೆ ಎಂದು ಸಚಿವರು ಆರೋಪಿಸಿದ್ದರು. ಬಹುಶಃ ರಾಹುಲ್ ಗಾಂಧಿ ಅವರ ಯಾತ್ರೆ ರಾಜ್ಯಕ್ಕೆ ಬರುವುದು ಕಮಲ್ ನಾಥ್ ಅವರಿಗೆ ಇಷ್ಟವಿಲ್ಲ ಎಂದು ನರೋತ್ತಮ್‌ ಮಿಶ್ರಾ ಹೇಳಿದ್ದಾರೆ.

ಗುರುವಾರ ಸಂಜೆ ನಗರದ ಜುನಿ ಪ್ರದೇಶದಲ್ಲಿನ ಸಿಹಿತಿಂಡಿ ಅಂಗಡಿಯೊಂದಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ ಎಂದು ಇಂದೋರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅಪರಿಚಿತ ವ್ಯಕ್ತಿಯಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.

ನವೆಂಬರ್ 8 ರಂದು ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕಮಲ್‌ ನಾಥ್ ಅವರನ್ನು ಸನ್ಮಾನಿಸುವುದರ ಕುರಿತು ವಿವಾದ ಉಂಟಾದ ನಂತರ ಇಂದೋರ್‌ನ ಖಾಲ್ಸಾ ಕ್ರೀಡಾಂಗಣವು ಈ ತಿಂಗಳ ಆರಂಭದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

ಕೀರ್ತನ್ ಗಾಯಕ ಮನ್‌ಪ್ರೀತ್ ಸಿಂಗ್ ಕಾನ್ಪುರಿ ಅವರು 1984 ರ ಸಿಖ್ ವಿರೋಧಿ ಗಲಭೆಗಳನ್ನು ಉಲ್ಲೇಖಿಸಿ, ಗಲಭೆಯ ಆರೋಪ ಎದುರಿಸಿದ್ದ ಕಮಲ್‌ ನಾಥ್ ಅವರನ್ನು ಅಭಿನಂದಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ್ ಜೋಡೋ ಯಾತ್ರೆಯ ವೇಳೆ ಕಮಲ್‌ ನಾಥ್ ಕ್ರೀಡಾಂಗಣಕ್ಕೆ ಪ್ರವೇಶಿಸಿದರೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...