Homeದಲಿತ್ ಫೈಲ್ಸ್ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದ ಟ್ಯಾಂಕ್ ಶುದ್ದೀಕರಿಸಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ಸವರ್ಣೀಯ ವ್ಯಕ್ತಿಯೊಬ್ಬ
ಇಡೀ ಟ್ಯಾಂಕಿನ ನೀರು ಖಾಲಿ ಮಾಡಿ, ಗೋಮೂತ್ರ ಸಿಂಪಡಿಸಿ ಬಹಿರಂಗ ಅಸ್ಪೃಶ್ಯತೆ ಆಚರಿಸಿರುವ
ಘಟನೆ ಚಾಮರಾಜನಗರ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ.

ನವೆಂಬರ್ 18ರ ಶುಕ್ರವಾರ ಹೆಗ್ಗೊಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಯುವಕನ ಮದುವೆ ನಡೆದಿತ್ತು. ಹೆಣ್ಣಿನ ಕಡೆಯವರು ಗ್ರಾಮಕ್ಕೆ ಮದುವೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ದಲಿತ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿನ ಕಿರು ನೀರು ಸರಬರಾಜು ಟ್ಯಾಂಕ್‌ನಲ್ಲಿ ನೀರು ಕುಡಿದಿದ್ದಾರೆ. ಇದನ್ನು ನೋಡಿದ ಸವರ್ಣೀಯ ವ್ಯಕ್ತಿಯೊಬ್ಬ ಮೇಲಿನ ದುಷ್ಕೃತ್ಯ ಎಸಗಿದ್ದಾರೆ ಎಂದು ರಘು ನಾಯಕ್ ಎಂಬುವವರು ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ದಲಿತ ಮಹಿಳೆಯೊಬ್ಬರು ತೊಂಬೆ ನಲ್ಲಿಯಲ್ಲಿ ನೀರು ಕುಡಿದರು ಎನ್ನುವ ಕಾರಣಕ್ಕೆ ವೀರಶೈವ ಸಮೂದಾಯದವನೊಬ್ಬ ಇಡೀ ಟ್ಯಾಂಕಿನ ನೀರನ್ನು ಖಾಲಿ ಮಾಡಿ ಹಸುವಿನ ಉಚ್ಛೆ ಸಿಂಪಡಿಸಿ ಸ್ವಚ್ಛ ಮಾಡಿದ
ಘಟನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ 11km ಅಂತರದಲ್ಲಿರುವ ತಾಲ್ಲೂಕಿನ ಹೆಗ್ಗೊಠಾರದಲ್ಲಿ ನಡೆದಿದೆ….. ಇಂತಹ ಅಸಹ್ಯ ಮನಸ್ಥಿಯನ್ನ ನೋಡಿಯೂ ಅದು ಹೇಗೆ ನಾವೆಲ್ಲ ಒಂದೆನಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೂರಾರು ಜನರು ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿದ್ದಾರೆ.

ಹಿಂದೂ ನಾವೆಲ್ಲ ಒಂದು ಎನ್ನುವವರು ಈಗ ಎಲ್ಲಿದ್ದಾರೆ? ಅಸ್ಪೃಶ್ಯತೆ ಇಲ್ಲ ಎನ್ನುವವರೆ ಎಲ್ಲಿದ್ದಾರೆ, ಬನ್ನಿ ಇಲ್ಲಿ ನೋಡಿ. ಇದು ಸರಿಯೇ ಎಂದು ತೀರ್ಮಾನಿಸಿ. ಬಸವಣ್ಣನವರ ನಿಜ ಆಶಯಗಳನ್ನು ಮರೆತು ಜಾತಿ ಪದ್ದತಿ ಆಚರಿಸುತ್ತಿರುವವರು ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಲವು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಸ್ಫೃಶ್ಯತೆ ಆಚರಣೆ ವಿಡಿಯೋ ಹರಿದಾಡುತ್ತಿದ್ದಂತೆ ತಹಶೀಲ್ದಾರರ ಗಮನಕ್ಕೂ ಬಂದಿದೆ. ಅವರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಾಧಿಕಾಗಿಉ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿ ವಿಚಾರಣೆ ನಡೆಸುತ್ತೇವೆ. ಘಟನೆ ನಡೆದಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಐ.ಇ ಬಸವರಾಜು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, “ಶನಿವಾರ ಸಂಜೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ವಾಸ್ತವಾಂಶ ಗೊತ್ತಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದೇನೆ. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...