Homeರಾಷ್ಟ್ರೀಯಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

- Advertisement -
- Advertisement -

ನ್ಯಾಯಾಧೀಶರ ವರ್ಗಾವಣೆಯ ಬಗ್ಗೆ ಧರಣಿ ನಡೆಸುತ್ತಿರುವ ಗುಜರಾತ್ ಹೈಕೋರ್ಟ್‌ನ ವಕೀಲರನ್ನು ಭೇಟಿ ಮಾಡಲು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂದ್ ಅವರು “ನ್ಯಾಯ ಕೇಳಿಕೊಂಡು ಬರುವವರು ಬಳಲುತ್ತಿದ್ದಾರೆ” ಎಂದು ಶನಿವಾರ ಹೇಳಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಆಯೋಜಿಸಿದ್ದ ಸನ್ಮಾನ ಕಾರ್ಯದಲ್ಲಿ ಮಾತನಾಡಿದ ಚಂದ್ರಚೂಡ್‌‌, ನ್ಯಾಯಾಂಗ ನೇಮಕಾತಿ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಒಕ್ಕೂಟ ಸರ್ಕಾರದ ಕಾನೂನು ಮಂತ್ರಿ ಕಿರಣ್ ರಿಜಿಜಿ ಮುಂದೆಯೆ ಸಮರ್ಥಿಸಿಕೊಂಡಿದ್ದಾರೆ. ಕೊಲೆಜಿಯಂ “ರಾಷ್ಟ್ರೀಯ ದೃಷ್ಟಿಕೋನ”ವನ್ನು ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್‌ ರಿಜಿಜು ಮಾತನಾಡಿ, ವರ್ಗಾವಣೆ ಪ್ರಕರಣದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಪ್ರತಿಭಟನಾ ವಕೀಲರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಗತ್ಯ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್

“ಇದೊಂದು ವೈಯಕ್ತಿಕ ಸಮಸ್ಯೆಯಾಗಿರಬಹುದು, ಆದರೆ ಸರ್ಕಾರ ಬೆಂಬಲಿಸುವ ಕೊಲಿಜಿಯಂನ ಪ್ರತಿ ನಿರ್ಧಾರಕ್ಕೂ ಇದೇ ರೀತಿ ಪುನರಾವರ್ತನೆಯಾದರೆ, ಇದು ಎಲ್ಲಿಗೆ ಹೋಗಿ ಮುಗಿಯುತ್ತದೆ? ಇಡೀ ಆಯಾಮವು ಬದಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯು ಬಹಳ ಹಿಂದಿನಿಂದಲೂ ಪ್ರಶ್ನಾರ್ಹವಾಗಿದೆ. ಈ ಕೊಲೆಜಿಯಂ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕಾಗಿದೆ ಎಂದು ಕಾನೂನು ಸಚಿವ ಕಿರೆನ್ ರಿಜಿಜು ಈ ಹಿಂದೆ ಹೇಳಿದ್ದರು.

ನ್ಯಾಯಮೂರ್ತಿ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರವು ಕನಿಷ್ಠವಾಗಿದೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರನ್ನು ನ್ಯಾಯಾಧೀಶರಾಗಿ ಉನ್ನತೀಕರಿಸಬೇಕಾದರೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ನಡೆಸಿದ ವಿಚಾರಣೆಯನ್ನು ಪಡೆಯಲು ಮಾತ್ರ ಸರ್ಕಾರ ಸೀಮಿತವಾಗಿದೆ. ಈ ಪ್ರಕ್ರಿಯೆಯಲ್ಲಿ ಸರ್ಕಾರವು ಆಕ್ಷೇಪಣೆಗಳನ್ನು ಎತ್ತಬಹುದು ಮತ್ತು ಕೊಲೆಜಿಯಂನ ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣಗಳನ್ನು ಪಡೆಯಬಹುದು. ಆದರೆ ಕೊಲೆಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ, ಸಂವಿಧಾನ ನ್ಯಾಯಪೀಠದ ತೀರ್ಪುಗಳ ಅಡಿಯಲ್ಲಿ, ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲು ಸರ್ಕಾರ ಬದ್ಧವಾಗಿರುತ್ತದೆ.

ಇದನ್ನೂ ಓದಿ: ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೆಲವು ಶಿಫಾರಸುಗಳ ಬಗ್ಗೆ ಅಸಮಾಧಾನಗೊಂಡು ಸರ್ಕಾರವು ನೇಮಕಾತಿಗಳನ್ನು ವಿಳಂಬಗೊಳಿಸಿದ ಉದಾಹರಣೆಗಳಿವೆ. ಇದು ಒಕ್ಕೂಟ ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷದ ಕೇಂದ್ರವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೆಣಗಾಡುವಂತಾಗುತ್ತದೆ.

ನ್ಯಾಯಮೂರ್ತಿ ಚಂದ್ರಚೂಡ್‌ ಅವರನ್ನು ಕಳೆದ ವಾರ ಸುಪ್ರಿಂಕೋರ್ಟ್‌ನ ಉನ್ನತ ಹುದ್ದೆಗೆ ಏರಿಸಲಾಗಿತ್ತು. ನವೆಂಬರ್ 16 ರಂದು ಅವರ ಮೊದಲ ಕೊಲೆಜಿಯಂ ಸಭೆ ನಡೆಸಿದ್ದರು. ಅದರಲ್ಲಿ ಅವರು ಮೂರು ಹೈಕೋರ್ಟ್ ನ್ಯಾಯಾಧೀಶರನ್ನು – ಒಬ್ಬರು ಮದ್ರಾಸ್, ಗುಜರಾತ್ ಮತ್ತು ತೆಲಂಗಾಣ- ವರ್ಗಾಯಿಸಲು ನಿರ್ಧರಿಸಿದ್ದರು.

ಐವರು ಸದಸ್ಯರಿರುವ ಈ ಕೊಲೆಜಿಯಂ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ. ರಾಜಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತು. ಜೊತೆಗೆ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಮತ್ತು ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: 12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

ನ್ಯಾಯಮೂರ್ತಿ ರಾಜಾ ಅವರನ್ನು ಮಾರ್ಚ್ 31, 2009 ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಯಿತು. ಸೆಪ್ಟೆಂಬರ್ 22, 2022 ರಿಂದ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದರು.

ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಪ್ರಸ್ತುತ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ಅಬಿಷೇಕ್ ರೆಡ್ಡಿ ಅವರನ್ನು ತೆಲಂಗಾಣ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಇದ್ದಾರೆ.

ಈ ವರ್ಗಾವನೆಯ ವಿರುದ್ಧ ವಕೀಲರು ಮುಷ್ಕರ ನಡೆಸಿದ್ದು, ವರ್ಗಾವಣೆ ಪ್ರಸ್ತಾಪವನ್ನು ಚರ್ಚಿಸಲು ಗುಜರಾತ್ ಬಾರ್‌ ಅಸೋಶಿಯೇಷನ್‌ನಿಂದ ನಿಯೋಗವನ್ನು ಭೇಟಿ ಮಾಡಲು ಸಿಜೆಐ ಒಪ್ಪಿಕೊಂಡಿದ್ದಾರೆ.

ಆಗಾಗ್ಗೆ ನಡೆಯುವ ಇಂತಹ ಮುಖಾಮುಖಿಗಳು ಆತಂಕಕ್ಕೀಡು ಮಾಡುತ್ತದೆ. ನ್ಯಾಯಾಲಯಕ್ಕೆ ಯಾವುದು ಒಳ್ಳೆಯದು ಎಂದು ಎಲ್ಲಾ ಕಡೆಯವರು ನಿರ್ಧರಿಸಬೇಕು ಎಂದು ಕಾನೂನು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಅವರ ವರ್ಗಾವಣೆಯ ಬಗ್ಗೆ ಗುಜರಾತ್ ಬಾರ್ ಪ್ರತಿನಿಧಿಗಳು ಸೋಮವಾರ ಸಿಜೆಐ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ನವೆಂಬರ್ 9 ರಂದು ಸಿಜೆಐ ಚಂದ್ರಚೂಡ್‌ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...