Homeರಾಷ್ಟ್ರೀಯಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಕೇಂದ್ರ ಕಾನೂನು ಮಂತ್ರಿಯ ಮುಂದೆಯೆ ‘ಕೊಲಿಜಿಯಂ’ ವ್ಯವಸ್ಥೆಯನ್ನು ಸಮರ್ಥಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

- Advertisement -
- Advertisement -

ನ್ಯಾಯಾಧೀಶರ ವರ್ಗಾವಣೆಯ ಬಗ್ಗೆ ಧರಣಿ ನಡೆಸುತ್ತಿರುವ ಗುಜರಾತ್ ಹೈಕೋರ್ಟ್‌ನ ವಕೀಲರನ್ನು ಭೇಟಿ ಮಾಡಲು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂದ್ ಅವರು “ನ್ಯಾಯ ಕೇಳಿಕೊಂಡು ಬರುವವರು ಬಳಲುತ್ತಿದ್ದಾರೆ” ಎಂದು ಶನಿವಾರ ಹೇಳಿದ್ದಾರೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಆಯೋಜಿಸಿದ್ದ ಸನ್ಮಾನ ಕಾರ್ಯದಲ್ಲಿ ಮಾತನಾಡಿದ ಚಂದ್ರಚೂಡ್‌‌, ನ್ಯಾಯಾಂಗ ನೇಮಕಾತಿ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಒಕ್ಕೂಟ ಸರ್ಕಾರದ ಕಾನೂನು ಮಂತ್ರಿ ಕಿರಣ್ ರಿಜಿಜಿ ಮುಂದೆಯೆ ಸಮರ್ಥಿಸಿಕೊಂಡಿದ್ದಾರೆ. ಕೊಲೆಜಿಯಂ “ರಾಷ್ಟ್ರೀಯ ದೃಷ್ಟಿಕೋನ”ವನ್ನು ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್‌ ರಿಜಿಜು ಮಾತನಾಡಿ, ವರ್ಗಾವಣೆ ಪ್ರಕರಣದ ವಿಚಾರದಲ್ಲಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಪ್ರತಿಭಟನಾ ವಕೀಲರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಗತ್ಯ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್

“ಇದೊಂದು ವೈಯಕ್ತಿಕ ಸಮಸ್ಯೆಯಾಗಿರಬಹುದು, ಆದರೆ ಸರ್ಕಾರ ಬೆಂಬಲಿಸುವ ಕೊಲಿಜಿಯಂನ ಪ್ರತಿ ನಿರ್ಧಾರಕ್ಕೂ ಇದೇ ರೀತಿ ಪುನರಾವರ್ತನೆಯಾದರೆ, ಇದು ಎಲ್ಲಿಗೆ ಹೋಗಿ ಮುಗಿಯುತ್ತದೆ? ಇಡೀ ಆಯಾಮವು ಬದಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯು ಬಹಳ ಹಿಂದಿನಿಂದಲೂ ಪ್ರಶ್ನಾರ್ಹವಾಗಿದೆ. ಈ ಕೊಲೆಜಿಯಂ ವ್ಯವಸ್ಥೆಯನ್ನು ಮರುಪರಿಶೀಲಿಸಬೇಕಾಗಿದೆ ಎಂದು ಕಾನೂನು ಸಚಿವ ಕಿರೆನ್ ರಿಜಿಜು ಈ ಹಿಂದೆ ಹೇಳಿದ್ದರು.

ನ್ಯಾಯಮೂರ್ತಿ ಪ್ರಕ್ರಿಯೆಯಲ್ಲಿ ಸರ್ಕಾರದ ಪಾತ್ರವು ಕನಿಷ್ಠವಾಗಿದೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರನ್ನು ನ್ಯಾಯಾಧೀಶರಾಗಿ ಉನ್ನತೀಕರಿಸಬೇಕಾದರೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ನಡೆಸಿದ ವಿಚಾರಣೆಯನ್ನು ಪಡೆಯಲು ಮಾತ್ರ ಸರ್ಕಾರ ಸೀಮಿತವಾಗಿದೆ. ಈ ಪ್ರಕ್ರಿಯೆಯಲ್ಲಿ ಸರ್ಕಾರವು ಆಕ್ಷೇಪಣೆಗಳನ್ನು ಎತ್ತಬಹುದು ಮತ್ತು ಕೊಲೆಜಿಯಂನ ಆಯ್ಕೆಗಳ ಬಗ್ಗೆ ಸ್ಪಷ್ಟೀಕರಣಗಳನ್ನು ಪಡೆಯಬಹುದು. ಆದರೆ ಕೊಲೆಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ, ಸಂವಿಧಾನ ನ್ಯಾಯಪೀಠದ ತೀರ್ಪುಗಳ ಅಡಿಯಲ್ಲಿ, ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸಲು ಸರ್ಕಾರ ಬದ್ಧವಾಗಿರುತ್ತದೆ.

ಇದನ್ನೂ ಓದಿ: ಕೊಲಿಜಿಯಂ ಶಿಫಾರಸು: ಕೇಂದ್ರ ಸರ್ಕಾರ ನಿರ್ಲಕ್ಷ್ಯ

ಕೆಲವು ಶಿಫಾರಸುಗಳ ಬಗ್ಗೆ ಅಸಮಾಧಾನಗೊಂಡು ಸರ್ಕಾರವು ನೇಮಕಾತಿಗಳನ್ನು ವಿಳಂಬಗೊಳಿಸಿದ ಉದಾಹರಣೆಗಳಿವೆ. ಇದು ಒಕ್ಕೂಟ ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷದ ಕೇಂದ್ರವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೆಣಗಾಡುವಂತಾಗುತ್ತದೆ.

ನ್ಯಾಯಮೂರ್ತಿ ಚಂದ್ರಚೂಡ್‌ ಅವರನ್ನು ಕಳೆದ ವಾರ ಸುಪ್ರಿಂಕೋರ್ಟ್‌ನ ಉನ್ನತ ಹುದ್ದೆಗೆ ಏರಿಸಲಾಗಿತ್ತು. ನವೆಂಬರ್ 16 ರಂದು ಅವರ ಮೊದಲ ಕೊಲೆಜಿಯಂ ಸಭೆ ನಡೆಸಿದ್ದರು. ಅದರಲ್ಲಿ ಅವರು ಮೂರು ಹೈಕೋರ್ಟ್ ನ್ಯಾಯಾಧೀಶರನ್ನು – ಒಬ್ಬರು ಮದ್ರಾಸ್, ಗುಜರಾತ್ ಮತ್ತು ತೆಲಂಗಾಣ- ವರ್ಗಾಯಿಸಲು ನಿರ್ಧರಿಸಿದ್ದರು.

ಐವರು ಸದಸ್ಯರಿರುವ ಈ ಕೊಲೆಜಿಯಂ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ. ರಾಜಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿತು. ಜೊತೆಗೆ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಮತ್ತು ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: 12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡಿದ ಕೊಲಿಜಿಯಂ

ನ್ಯಾಯಮೂರ್ತಿ ರಾಜಾ ಅವರನ್ನು ಮಾರ್ಚ್ 31, 2009 ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಯಿತು. ಸೆಪ್ಟೆಂಬರ್ 22, 2022 ರಿಂದ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದರು.

ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಪ್ರಸ್ತುತ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ಅಬಿಷೇಕ್ ರೆಡ್ಡಿ ಅವರನ್ನು ತೆಲಂಗಾಣ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಇದ್ದಾರೆ.

ಈ ವರ್ಗಾವನೆಯ ವಿರುದ್ಧ ವಕೀಲರು ಮುಷ್ಕರ ನಡೆಸಿದ್ದು, ವರ್ಗಾವಣೆ ಪ್ರಸ್ತಾಪವನ್ನು ಚರ್ಚಿಸಲು ಗುಜರಾತ್ ಬಾರ್‌ ಅಸೋಶಿಯೇಷನ್‌ನಿಂದ ನಿಯೋಗವನ್ನು ಭೇಟಿ ಮಾಡಲು ಸಿಜೆಐ ಒಪ್ಪಿಕೊಂಡಿದ್ದಾರೆ.

ಆಗಾಗ್ಗೆ ನಡೆಯುವ ಇಂತಹ ಮುಖಾಮುಖಿಗಳು ಆತಂಕಕ್ಕೀಡು ಮಾಡುತ್ತದೆ. ನ್ಯಾಯಾಲಯಕ್ಕೆ ಯಾವುದು ಒಳ್ಳೆಯದು ಎಂದು ಎಲ್ಲಾ ಕಡೆಯವರು ನಿರ್ಧರಿಸಬೇಕು ಎಂದು ಕಾನೂನು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿಖಿಲ್ ಕರಿಯೆಲ್ ಅವರ ವರ್ಗಾವಣೆಯ ಬಗ್ಗೆ ಗುಜರಾತ್ ಬಾರ್ ಪ್ರತಿನಿಧಿಗಳು ಸೋಮವಾರ ಸಿಜೆಐ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ನವೆಂಬರ್ 9 ರಂದು ಸಿಜೆಐ ಚಂದ್ರಚೂಡ್‌ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...