Homeರಾಷ್ಟ್ರೀಯಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

ಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿ ದೇಶದ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರೊಂದಿಗೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರ್ಮದಾ ಅಣೆಕಟ್ಟು ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಭಾರಿ ಹೋರಾಟ ಸಂಘಟಿಸಿದ್ದರು. ಈ ಯೋಜನೆಯನ್ನು ಪ್ರಧಾನಿ ಮೋದಿ ಗುಜರಾತ್‌ನ ಜೀವಸೆಲೆ ಎಂದು ಬಣ್ಣಿಸಿದ್ದಾರೆ.

ಗುಜರಾತ್‌ ಚುನಾವಣೆಗೆ ಮುಂಚಿತವಾಗಿ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮೂರು ದಶಕಗಳವರೆಗೆ ನರ್ಮದಾ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡರೊಬ್ಬರು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರ್ಮದಾ ನದಿಯ ಮೇಲೆ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಮೂರು ದಶಕಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದಕ್ಕೆ ಕಾರಣ ಮೇಧಾ ಪಟ್ಕರ್ ಸೇರಿದಂತೆ ಇತರ ಹೋರಾಟಗಾರರು ಉಂಟು ಮಾಡಿದ ಕಾನೂನು ಅಡೆತಡೆಗಳಾಗಿವೆ” ಎಂದು ಪ್ರಧಾನಿ ಹೇಳಿದ್ದಾರೆ. ಇಷ್ಟೆ ಅಲ್ಲದೆ ಮೇಧಾ ಪಾಟ್ಕರ್‌ ಅವರು ಗುಜರಾತ್‌ ರಾಜ್ಯವನ್ನು ಅಪಖ್ಯಾತಿ ಗೋಳಿಸಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

“ಕಾಂಗ್ರೆಸ್ ನಿಮ್ಮ ಬಳಿಗೆ ಮತಕ್ಕಾಗಿ ಬಂದಾಗ, ‘ನರ್ಮದಾ ಅಣೆಕಟ್ಟಿನ ವಿರುದ್ಧ ಇದ್ದವರ ಹೆಗಲ ಮೇಲೆ ಕೈ ಇಟ್ಟುಕೊಂಡು ನೀವು ಪಾದಯಾತ್ರೆಯನ್ನು ಮಾಡುತ್ತೀರಿ’ ಕೇಳಿ” ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಸ್ತುತ ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ವೇಳೆ ಈ ವಾರದ ಆರಂಭದಲ್ಲಿ ಮೇಧಾ ಪಟ್ಕರ್ ಸೇರಿಕೊಂಡಿದ್ದರು.

2017 ರಲ್ಲಿ ಉದ್ಘಾಟನೆಯಾದ ಗುಜರಾತ್‌ನ ‘ಸರ್ದಾರ್ ಸರೋವರ್ ಅಣೆಕಟ್ಟು’ ವಿರುದ್ಧ ಮೇಧಾ ಪಟ್ಕರ್ ಅವರು ‘ನರ್ಮದಾ ಬಚಾವೊ ಆಂದೋಲನ್’ ಎಂಬ ಬೃಹತ್ ಅಭಿಯಾನವನ್ನೆ ನಡೆಸಿದ್ದರು. ಈ ಅಣೆಕಟ್ಟಿನಿಂದಾಗಿ ಸಾವಿರಾರು ಬುಡಕಟ್ಟು ಕುಟುಂಬಗಳ ಜೀವನ ಕಷ್ಟಕ್ಕೆ ಒಳಗಾಗುತ್ತದೆ ಎಂದು ಅವರ ಪ್ರತಿಪಾದಿಸಿದ್ದರು. ಇದನ್ನು ಬಿಜೆಪಿ ನಿರಂತರವಾಗಿ ಟೀಕಿಸುತ್ತಿದೆ.

“ಮೇಧಾ ಪಾಟ್ಕರ್‌ ಅವರು ನರ್ಮದಾ ವಿರೋಧಿ, ಗುಜರಾತ್ ವಿರೋಧಿ ಮತ್ತು ಸೌರಾಷ್ಟ್ರ ವಿರೋಧಿಯಾಗಿದ್ದಾರೆ. ಅವರು ನರ್ಮದಾ ಅಣೆಕಟ್ಟಿನ ನಿರ್ಮಾಣವನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದ್ದಲ್ಲದೆ, ಸೌರಾಷ್ಟ್ರದ ಜನರಿಗೆ ನೀರಿನ ಬಳಕೆಯನ್ನು ವಿರೋಧಿಸಿದರು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಹೇಳಿದ್ದರು.

“ಇಂತಹ ಜನರು ರಾಹುಲ್ ಗಾಂಧಿ ಜೊತೆಗೆ ಸೇರಿದರೆ, ಅದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಗುಜರಾತಿಗಳಿಗೆ ನೀರನ್ನು ನಿರಾಕರಿಸಿದವರ ಜೊತೆಗೆ ಕಾಂಗ್ರೆಸ್ ಸಂಸದ ಕೈಜೋಡಿಸಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ರಾಹುಲ್‌ ಗಾಂಧಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

“ಮೇಧಾ ಪಟ್ಕರ್ ಅವರಿಗೆ ಯಾತ್ರೆಯಲ್ಲಿ ಮುಖ್ಯ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಗುಜರಾತ್ ಮತ್ತು ಗುಜರಾತಿಗಳ ಬಗ್ಗೆ ಮತ್ತೆ ತಮ್ಮ ದ್ವೇಷವನ್ನು ತೋರಿಸಿದ್ದಾರೆ. ದಶಕಗಳ ಕಾಲ ಗುಜರಾತಿಗಳಿಗೆ ನೀರನ್ನು ನಿರಾಕರಿಸಿದ ಜನರೊಂದಿಗೆ ಅವರು ಕೈಜೋಡಿಸಿದ್ದಾರೆ. ಗುಜರಾತ್ ಇದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2017 ನಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದರೆ ಎಲ್ಲಿ ಉದ್ಯೋಗ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...