Homeರಾಷ್ಟ್ರೀಯಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

ಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿ ದೇಶದ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರೊಂದಿಗೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರ್ಮದಾ ಅಣೆಕಟ್ಟು ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಭಾರಿ ಹೋರಾಟ ಸಂಘಟಿಸಿದ್ದರು. ಈ ಯೋಜನೆಯನ್ನು ಪ್ರಧಾನಿ ಮೋದಿ ಗುಜರಾತ್‌ನ ಜೀವಸೆಲೆ ಎಂದು ಬಣ್ಣಿಸಿದ್ದಾರೆ.

ಗುಜರಾತ್‌ ಚುನಾವಣೆಗೆ ಮುಂಚಿತವಾಗಿ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮೂರು ದಶಕಗಳವರೆಗೆ ನರ್ಮದಾ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡರೊಬ್ಬರು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರ್ಮದಾ ನದಿಯ ಮೇಲೆ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಮೂರು ದಶಕಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದಕ್ಕೆ ಕಾರಣ ಮೇಧಾ ಪಟ್ಕರ್ ಸೇರಿದಂತೆ ಇತರ ಹೋರಾಟಗಾರರು ಉಂಟು ಮಾಡಿದ ಕಾನೂನು ಅಡೆತಡೆಗಳಾಗಿವೆ” ಎಂದು ಪ್ರಧಾನಿ ಹೇಳಿದ್ದಾರೆ. ಇಷ್ಟೆ ಅಲ್ಲದೆ ಮೇಧಾ ಪಾಟ್ಕರ್‌ ಅವರು ಗುಜರಾತ್‌ ರಾಜ್ಯವನ್ನು ಅಪಖ್ಯಾತಿ ಗೋಳಿಸಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

“ಕಾಂಗ್ರೆಸ್ ನಿಮ್ಮ ಬಳಿಗೆ ಮತಕ್ಕಾಗಿ ಬಂದಾಗ, ‘ನರ್ಮದಾ ಅಣೆಕಟ್ಟಿನ ವಿರುದ್ಧ ಇದ್ದವರ ಹೆಗಲ ಮೇಲೆ ಕೈ ಇಟ್ಟುಕೊಂಡು ನೀವು ಪಾದಯಾತ್ರೆಯನ್ನು ಮಾಡುತ್ತೀರಿ’ ಕೇಳಿ” ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಸ್ತುತ ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ವೇಳೆ ಈ ವಾರದ ಆರಂಭದಲ್ಲಿ ಮೇಧಾ ಪಟ್ಕರ್ ಸೇರಿಕೊಂಡಿದ್ದರು.

2017 ರಲ್ಲಿ ಉದ್ಘಾಟನೆಯಾದ ಗುಜರಾತ್‌ನ ‘ಸರ್ದಾರ್ ಸರೋವರ್ ಅಣೆಕಟ್ಟು’ ವಿರುದ್ಧ ಮೇಧಾ ಪಟ್ಕರ್ ಅವರು ‘ನರ್ಮದಾ ಬಚಾವೊ ಆಂದೋಲನ್’ ಎಂಬ ಬೃಹತ್ ಅಭಿಯಾನವನ್ನೆ ನಡೆಸಿದ್ದರು. ಈ ಅಣೆಕಟ್ಟಿನಿಂದಾಗಿ ಸಾವಿರಾರು ಬುಡಕಟ್ಟು ಕುಟುಂಬಗಳ ಜೀವನ ಕಷ್ಟಕ್ಕೆ ಒಳಗಾಗುತ್ತದೆ ಎಂದು ಅವರ ಪ್ರತಿಪಾದಿಸಿದ್ದರು. ಇದನ್ನು ಬಿಜೆಪಿ ನಿರಂತರವಾಗಿ ಟೀಕಿಸುತ್ತಿದೆ.

“ಮೇಧಾ ಪಾಟ್ಕರ್‌ ಅವರು ನರ್ಮದಾ ವಿರೋಧಿ, ಗುಜರಾತ್ ವಿರೋಧಿ ಮತ್ತು ಸೌರಾಷ್ಟ್ರ ವಿರೋಧಿಯಾಗಿದ್ದಾರೆ. ಅವರು ನರ್ಮದಾ ಅಣೆಕಟ್ಟಿನ ನಿರ್ಮಾಣವನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದ್ದಲ್ಲದೆ, ಸೌರಾಷ್ಟ್ರದ ಜನರಿಗೆ ನೀರಿನ ಬಳಕೆಯನ್ನು ವಿರೋಧಿಸಿದರು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಹೇಳಿದ್ದರು.

“ಇಂತಹ ಜನರು ರಾಹುಲ್ ಗಾಂಧಿ ಜೊತೆಗೆ ಸೇರಿದರೆ, ಅದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಗುಜರಾತಿಗಳಿಗೆ ನೀರನ್ನು ನಿರಾಕರಿಸಿದವರ ಜೊತೆಗೆ ಕಾಂಗ್ರೆಸ್ ಸಂಸದ ಕೈಜೋಡಿಸಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ರಾಹುಲ್‌ ಗಾಂಧಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

“ಮೇಧಾ ಪಟ್ಕರ್ ಅವರಿಗೆ ಯಾತ್ರೆಯಲ್ಲಿ ಮುಖ್ಯ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಗುಜರಾತ್ ಮತ್ತು ಗುಜರಾತಿಗಳ ಬಗ್ಗೆ ಮತ್ತೆ ತಮ್ಮ ದ್ವೇಷವನ್ನು ತೋರಿಸಿದ್ದಾರೆ. ದಶಕಗಳ ಕಾಲ ಗುಜರಾತಿಗಳಿಗೆ ನೀರನ್ನು ನಿರಾಕರಿಸಿದ ಜನರೊಂದಿಗೆ ಅವರು ಕೈಜೋಡಿಸಿದ್ದಾರೆ. ಗುಜರಾತ್ ಇದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2017 ನಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದರೆ ಎಲ್ಲಿ ಉದ್ಯೋಗ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...