Homeರಾಷ್ಟ್ರೀಯಅಪ್ರಾಪ್ತ ಮುಸ್ಲಿಂ ಹುಡುಗಿಯೊಂದಿಗಿನ ವಿವಾಹ ಕೂಡಾ ‘ಪೋಕ್ಸೋ’ ಅಡಿ ಅಪರಾಧ: ಕೇರಳ ಹೈಕೋರ್ಟ್

ಅಪ್ರಾಪ್ತ ಮುಸ್ಲಿಂ ಹುಡುಗಿಯೊಂದಿಗಿನ ವಿವಾಹ ಕೂಡಾ ‘ಪೋಕ್ಸೋ’ ಅಡಿ ಅಪರಾಧ: ಕೇರಳ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಸಮುದಾಯದ ಅಪ್ರಾಪ್ತ ವಯಸ್ಕರೊಂದಿಗಿನ ವಿವಾಹವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲಾಗುವುದಿಲ್ಲ ಮತ್ತು ತನ್ನ ಅಪ್ರಾಪ್ತ ಹೆಂಡತಿಯೊಂದಿಗೆ ದೈಹಿಕ ಸಂಪರ್ಕ ಹೊಂದಿರುವ ಪತಿ ಈ ಕಾಯಿದೆಯ ಅಡಿಯಲ್ಲಿ ಹೊಣೆಗಾರನಾಗುತ್ತಾನೆ ಎಂದು ಕೇರಳ ಹೈಕೋರ್ಟ್ ಹೇಳಿದೆ.

ಪಶ್ಚಿಮ ಬಂಗಾಳದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ, ಕಕ್ಷಿದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಪೋಕ್ಸೋ ಅಡಿಯ ಅಪರಾಧಗಳು ಅನ್ವಯಿಸುತ್ತವೆ ಎಂದು ನ್ಯಾಯಮೂರ್ತಿ ಬಚು ಕುರಿಯನ್ ಥಾಮಸ್ ಅವರ ಏಕ ಪೀಠ ಶುಕ್ರವಾರ ತೀರ್ಪು ನೀಡಿದೆ. ಆರೋಪಿಯು ನಂತರ ಬಾಲಕಿಯನ್ನು ಮದುವೆಯಾಗಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಾಸಿಕ್ಯೂಷನ್ ಪ್ರಕಾರ, 31 ವರ್ಷದ ಆರೋಪಿಯು ಅಪ್ರಾಪ್ತೆಯನ್ನು ಅಪಹರಿಸಿ ಅವರೊಂದಿಗೆ ಹಲವಾರು ಬಾರಿ ಲೈಂಗಿಕ ಸಂಪರ್ಕದಲ್ಲಿ ಏರ್ಪಟ್ಟಿದ್ದನು. ನಂತರ ಆತ ಹುಡುಗಿಯನ್ನು ವಿವಾಹವಾಗಿದ್ದಾನೆ.

ತಾನು ಹುಡುಗಿಯನ್ನು ಕಾನೂನುಬದ್ಧವಾಗಿ ಮದುವೆಯಾಗಿದ್ದು, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸಮುದಾಯದ ಹುಡುಗಿಯರು ಪ್ರೌಢಾವಸ್ಥೆಗೆ ಬಂದ ನಂತರ ಮದುವೆಗೆ ಅನುಮತಿ ನೀಡುತ್ತದೆ. ಹೀಗಾಗಿ ಪೋಕ್ಸೋ ಅಡಿಯಲ್ಲಿ ತನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಆರೋಪಿಯು ವಾದಿಸಿದ್ದನು.

ಇದನ್ನೂ ಓದಿ: ಪೋಕ್ಸೊ ವಿಚಾರಣೆ ಉದ್ದೇಶಪೂರ್ವಕ ತಪ್ಪಿಸಿದ್ದಕ್ಕೆ ದೀಪಕ್ ಚೌರಾಸಿಯಾ ವಿರುದ್ಧ ಬಂಧನದ ವಾರಂಟ್

ಆರೋಪಿ ಮಾರ್ಚ್ 2021 ರಲ್ಲಿ ಹುಡುಗಿಯನ್ನು ಮದುವೆಯಾಗಿದ್ದು, ತಮಗೆ ಅನ್ವಯವಾಗುವ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಹುಡುಗಿಯು ತನ್ನ ಕಾನೂನು ಪಾಲುಗಾರ್ತಿಯನ್ನಾಗಿ ಮಾಡಿಕೊಂಡಿದ್ದಾಗಿ ವಾದಿಸಿದ್ದಾನೆ. ಹರ್ಯಾಣ, ದೆಹಲಿ ಮತ್ತು ಕರ್ನಾಟಕ ಹೈಕೋರ್ಟ್‌ಗಳ ಈ ಹಿಂದಿನ ತೀರ್ಪುಗಳನ್ನು ಆರೋಪಿ ತಮ್ಮ ಪ್ರತಿಪಾದನೆಯನ್ನು ಬಲಪಡಿಸಲು ಉಲ್ಲೇಖಿಸಿದ್ದಾನೆ. ಆದರೆ ನ್ಯಾಯಾಲಯವು ಈ ಪ್ರತಿಪಾದನೆಗಳನ್ನು ಒಪ್ಪಲು ನಿರಾಕರಿಸಿತು.

“ವಿವಾಹದ ಸಿಂಧುತ್ವವನ್ನು ಲೆಕ್ಕಿಸದೆ ಅಥವಾ ಇನ್ಯಾವುದೇ ರೀತಿಯಲ್ಲಿ ಕಕ್ಷಿದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ, ಪೋಕ್ಸೋ ಕಾಯ್ದೆಯಡಿ ಅಪರಾಧಗಳು ಅನ್ವಯವಾಗುತ್ತದೆ. ಉಲ್ಲೇಖಿಸಲಾದ ಇತರ ನ್ಯಾಯಾಲಯಗಳನ್ನು ಗೌರವಿಸುತ್ತಲೆ, ಅಪ್ರಾಪ್ತ ವಯಸ್ಕರನ್ನು ಮದುವೆಯಾಗುವ ಮುಸ್ಲಿಂ ವಿರುದ್ಧ ಪೋಕ್ಸೋ ಅಡಿಯ ಅಪರಾಧ ಆಗುವುದಿಲ್ಲ ಎಂಬ ಆ ನಿರ್ಧಾರಗಳಲ್ಲಿ ಸೂಚಿಸಲಾದ ಪ್ರತಿಪಾದನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಪೋಕ್ಸೋ ಕಾಯಿದೆಯು ವಿಶೇಷವಾದ ಕಾನೂನಾಗಿದೆ ಎಂದು ನ್ಯಾಯಾಲಯ ಹೇಳಿದೆ. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಶಾಸ್ತ್ರದಿಂದ ಉದ್ಭವಿಸುವ ತತ್ವಗಳ ಆಧಾರದ ಮೇಲೆ ಈ ವಿಶೇಷ ಕಾನೂನನ್ನು ಜಾರಿಗೊಳಿಸಲಾಗಿದೆ. ಪೋಕ್ಸೋ ಕಾಯಿದೆಯ ಮೂಲಕ ಶಾಸಕಾಂಗದ ಉದ್ದೇಶ ಕೂಡಾ ಮದುವೆಯ ನೆಪದಲ್ಲಿ ಮಗುವಿನೊಂದಿಗೆ ದೈಹಿಕ ಸಂಬಂಧವನ್ನು ನಿಷೇಧಿಸುವುದಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

“ಬಾಲ್ಯ ವಿವಾಹವು ಮಗುವಿನ ಬೆಳವಣಿಗೆಗೆ ಸಂಪೂರ್ಣವಾಗಿ ತಡೆ ನೀಡುತ್ತದೆ. ಇದು ಸಮಾಜದ ಕೇಡು” ಎಂದು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...