Homeಮುಖಪುಟಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

- Advertisement -
- Advertisement -

ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್ ರಾವುತ್‌ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ಕುರಿತು ರಾಹುಲ್ ಆಡಿದ್ದ ಮಾತುಗಳಿಂದಾಗಿ ಮೈತ್ರಿ ಪಕ್ಷಗಳಲ್ಲಿ ಒಡಕು ಮೂಡಿಸುತ್ತಿದೆ ಎಂದು ಚರ್ಚೆಯಾಗುತ್ತಿರುವ ಹೊತ್ತಿನಲ್ಲಿ ಸಂಜಯ್‌ ರಾವುತ್‌ ಅವರು ರಾಹುಲ್‌ ಗಾಂಧಿಯವರನ್ನು ಹೊಗಳಿದ್ದಾರೆ.

“ನನಗೆ ಕರೆ ಮಾಡಿ ಮಾತನಾಡಿರುವುದು ರಾಹುಲ್ ಗಾಂಧಿಯವರ ಮಾನವೀಯತೆಯನ್ನು ತೋರುತ್ತದೆ. ಬಿಡುವಿಲ್ಲದ ತಮ್ಮ ಯಾತ್ರೆಯ ನಡುವೆಯೂ ತಮ್ಮ ರಾಜಕೀಯ ಸಹೋದ್ಯೋಗಿಗೆ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂದು ರಾವುತ್‌ ಮೆಚ್ಚುಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾಗಲೂ ರಾಹುಲ್ ರಾತ್ರಿ ನನಗೆ ಕರೆ ಮಾಡಿದರು. ಅವರು ನನ್ನ ಆರೋಗ್ಯದ ಬಗ್ಗೆ ಕೇಳಿದರು. ‘ನಿಮ್ಮ ಬಗ್ಗೆ ನಮಗೆ ಚಿಂತೆಯಾಗಿದೆ’ ಎಂದರು. ರಾಜಕೀಯ ಮಿತ್ರನನ್ನು ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದುಃಖಿಸಲು ಸಾಧ್ಯವಾಗುವುದು ಮನುಷ್ಯನಿಗೆ ಮಾತ್ರ. 110 ದಿನಗಳ ಕಾಲ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು” ಎಂದು ಸಂಜಯ್ ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂಗ್ಲಿಷ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರಾವುತ್‌, “ಕೆಲವು ವಿಷಯಗಳ ಬಗ್ಗೆ ಬಲವಾದ ಭಿನ್ನಾಭಿಪ್ರಾಯಗಳ ನಡುವೆಯೂ, ನಿಮ್ಮ ರಾಜಕೀಯ ಸಹೋದ್ಯೋಗಿಯನ್ನು ವಿಚಾರಿಸುವುದು ಮಾನವೀಯತೆಯ ಸಂಕೇತವಾಗಿದೆ. ರಾಜಕೀಯದ ಕಹಿ ಗಳಿಗೆಯಲ್ಲಿ, ಇಂತಹ ಕ್ರಿಯೆಗಳು ಅಪರೂಪವಾಗುತ್ತಿವೆ. ರಾಹುಲ್‌ಜಿ ತಮ್ಮ ಯಾತ್ರೆಯನ್ನು ಪ್ರೀತಿ ಮತ್ತು ಸಹಾನುಭೂತಿಯ ಮೇಲೆ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಯಾತ್ರೆಗೆ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ರಾವುತ್‌ ಹೊಗಳಿದ್ದಾರೆ.

ಸಾವರ್ಕರ್‌ ಕುರಿತು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯನ್ನು ಮುರಿಯುವ ಬಗ್ಗೆ ಠಾಕ್ರೆ ಬಣವು ಸುಳಿವು ನೀಡಿತ್ತು. ಇದಾದ ನಂತರ ರಾಹುಲ್ ಗಾಂಧಿಯವರ ಕಾಳಜಿಯ ಬಗ್ಗೆ ಶಿವಸೇನಾ ನಾಯಕ ಸಂಜಯ್‌ ರಾವುತ್ ಮಾಡಿರುವ ಪೋಸ್ಟ್‌- ಈ ವಿವಾದವನ್ನು ಸಮತೂಗಿಸುವ ಸೂಚನೆಯಂತೆ ಕಾಣುತ್ತಿದೆ.

ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ರಾಹುಲ್ ಗಾಂಧಿಯವರು ಮಾತನಾಡುತ್ತಾ, “ವಿ.ಡಿ.ಸಾವರ್ಕರ್‌ರವರು ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು” ಎಂದು ಟೀಕಿಸಿದ್ದರು. “ಬ್ರಿಟಿಷರಿಗೆ ಕ್ಷಮೆ ಕೋರುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ಪಟೇಲ್ ಅವರಂತಹ ಸ್ವಾತಂತ್ರ್ಯದ ಐಕಾನ್‌ಗಳಿಗೆ ಸಾವರ್ಕರ್‌‌ ದ್ರೋಹ ಮಾಡಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗಳು ಶಿವಸೇನೆಯ ಎರಡೂ ಬಣಗಳನ್ನು ಕೆರಳಿಸಿತು. ಕಾಂಗ್ರೆಸ್‌ನೊಂದಿಗಿನ ಸಂಬಂಧದ ಬಗ್ಗೆ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಬಣ ಕುಟುಕಿತ್ತು. ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರವಾಗಿ ಉದ್ಧವ್‌ ಠಾಕ್ರೆ ಬಣವು ಟೀಕೆಯನ್ನು ಎದುರಿಸಿತು.

ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿ, “ನಮ್ಮ ಪಕ್ಷವು ಸಾವರ್ಕರ್ ಬಗ್ಗೆ ಅಪಾರವಾದ ಗೌರವ ಹೊಂದಿದೆ” ಎಂದಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಸಂಜಯ್ ರಾವುತ್, “ಸಾವರ್ಕರ್ ಅವರ ವಿಷಯ ನಮಗೆ ಮುಖ್ಯವಾಗಿದೆ. ನಾವು ಸಾವರ್ಕರ್‌‌ ಸಿದ್ಧಾಂತವನ್ನು ನಂಬುತ್ತೇವೆ. ಕಾಂಗ್ರೆಸ್‌ ಈ ವಿಷಯವನ್ನು ತರಬಾರದಿತ್ತು” ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿರಿ: ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಪಕ್ಷದ ಮತ್ತೊಬ್ಬ ನಾಯಕ, ಶಿವಸೇನಾ ಸಂಸದ ಅರವಿಂದ್ ಸಾವಂತ್ ಒಂದು ಹೆಜ್ಜೆ ಮುಂದೆ ಹೋಗಿ, “ನಾವು ಎಂವಿಎ (ಮಹಾ ವಿಕಾಸ್ ಅಘಾಡಿ ಒಕ್ಕೂಟದಲ್ಲಿ) ಮುಂದುವರಿಯುವುದಿಲ್ಲ ಎಂದು ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ. ಇದು ಪಕ್ಷದಿಂದ ನೀಡಲಾದ ಗಂಭೀರ ಪ್ರತಿಕ್ರಿಯೆಯಾಗಿದೆ. ಉದ್ಧವ್ ಠಾಕ್ರೆ ಅವರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ” ಎಂದಿದ್ದರು.

ವಿವಾದ ಭುಗಿಲೆದ್ದ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, “ರಾಹುಲ್ ಗಾಂಧಿ ಯಾರನ್ನೂ ಅವಮಾನಿಸಿಲ್ಲ. ಆದರೆ ಐತಿಹಾಸಿಕ ಸತ್ಯವನ್ನು ಮಾತ್ರ ಹೇಳಿದ್ದಾರೆ. ನಾನು ಇಂದು ಸಂಜಯ್ ರಾವುತ್ ಅವರೊಂದಿಗೆ ಮಾತನಾಡಿದ್ದೇನೆ. ನಾವು ಭಿನ್ನಾಭಿಪ್ರಾಯವನ್ನು ಒಪ್ಪಿಕೊಳ್ಳುತ್ತೇವೆ. ಇದು ಮಹಾ ವಿಕಾಸ್ ಅಘಾಡಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ಸುಳ್ಳು. ಈ ಹೇಳಿಕೆ ಮೈತ್ರಿ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...