Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

- Advertisement -
- Advertisement -

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್ (34) ಅವರ ವಿರುದ್ಧ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ ಮೂರು ದಿನಗಳ ನಂತರ, ನವೆಂಬರ್ 20 ರ ಭಾನುವಾರದಂದು ಬೆಂಗಳೂರು ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಲ್ಲಿ ಚಿಲುಮೆ ಸಂಸ್ಥೆಯನ್ನು ರಿಜಿಸ್ಟರ್‌‌ ಮಾಡಿದವರಲ್ಲಿ ರವಿಕುಮಾರ್ ಒಬ್ಬರಾಗಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಎನ್‌ಜಿಒ ಹಿಂದಿನ ಪ್ರಮುಖ ವ್ಯಕ್ತಿಯಾಗಿದ್ದಾರೆ. ದಿ ನ್ಯೂಸ್‌ ಮಿನಿಟ್‌ ಮತ್ತು ಪ್ರತಿಧ್ವನಿ ಸುದ್ದಿ ಪೋರ್ಟಾಲ್‌ ನಡೆಸಿದ ಜಂಟಿ ವರದಿಯು ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವ ಅವರ ಎನ್‌ಜಿಒದ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಲ್ಲನಾಯಕನ ಹಳ್ಳಿಯವರಾದ ರವಿಕುಮಾರ್‌ ಅವರ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದಂತೆ ಅವರು ಉತ್ತರ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಹಗರಣ ಬಯಲಾದ ನಂತರ ಅವರು ನಿರಂತರವಾಗಿ ಸಂಚರಿಸುತ್ತಲೆ ಇದ್ದು, ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ವಕೀಲರೊಬ್ಬರ ಬಳಿ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಸಂಸ್ಥೆಯ ಕ್ಷೇತ್ರ ಕಾರ್ಯಕರ್ತರು ಬಳಸಿದ ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಮಾಣವನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಚಿಲುಮೆಯ ಕಚೇರಿಗಳಿಂದ ವಶಪಡಿಸಿಕೊಂಡ ದಾಖಲೆಗಳು, ಅವರ ಫೋನ್, ಇಮೇಲ್ ಮೂಲಕ ರಾಜಕಾರಣಿಗಳಿಗೂ ಅವರಿಗೂ ಇರುವ ಲಿಂಕ್‌ಗಳನ್ನು ಸಹ ಪರಿಶೀಲಿಸುತ್ತಿದ್ದೇವೆ ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ಹೇಳಿದೆ.

ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್ ಡೆವಲಪರ್‌ಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಮತದಾರರ ಮಾಹಿತಿಯನ್ನು ಕದಿಯಲು ಚುನಾವಣಾ ಅಧಿಕಾರಿಗಳಂತೆ ನಟಿಸುವ ಕ್ಷೇತ್ರ ಕಾರ್ಯಕರ್ತರನ್ನು ಎನ್‌ಜಿಒ ನಿಯೋಜಿಸಿದೆ ಎಂದು ತನಿಖಾ ವರದಿಯಲ್ಲಿ ನ್ಯೂಸ್ ಮಿನಿಟ್ ಹೇಳಿತ್ತು. ಇಷ್ಟೆ ಅಲ್ಲದೆ, ಚಿಲುಮೆ ಸಂಸ್ಥೆಯು ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಪರಿಣತಿ ಹೊಂದಿರುವ ಚಿಲುಮೆ ಎಂಟರ್‌ಪ್ರೈಸಸ್ ಎಂಬ ಖಾಸಗಿ ಕಂಪನಿಯನ್ನು ಸಹ ನಡೆಸುತ್ತಿದೆ.

ಕಂಪೆನಿಯ ವೆಬ್‌ಸೈಟ್‌ ಇದೀಗ ನಿಷ್ಕ್ರಿಯವಾಗಿದ್ದು, ಅದರಲ್ಲಿ ರಾಜಕೀಯ ಪಕ್ಷಗಳಿಗೆ, “ವಿದ್ಯುನ್ಮಾನ ಮತಯಂತ್ರ ಮತ್ತು ಎಣಿಕೆ ಹಾಲ್ ತಯಾರಿ, ಸಿಸಿಟಿವಿ ಅಳವಡಿಕೆ, ವೆಬ್‌ಕಾಸ್ಟಿಂಗ್ ಮತ್ತು ಚೆಕ್-ಪೋಸ್ಟ್ ತಯಾರಿ” ಮಾಡುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ಈ ವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ರವಿಕುಮಾರ್‌ ಅವರ ಹಿರಿಯ ಸಹೋದರ ಕೆಂಪೇಗೌಡ, ಎನ್‌ಜಿಒದ ಮೂವರು ಉದ್ಯೋಗಿಗಳಾದ ನಿರ್ದೇಶಕ ರೇಣುಕಾ ಪ್ರಸಾದ್, ಎಚ್‌ಆರ್ ಎಕ್ಸಿಕ್ಯೂಟಿವ್ ಧರ್ಮೇಶ್ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ನವೆಂಬರ್ 18 ರ ಶುಕ್ರವಾರ ರಾತ್ರಿ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...