Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

- Advertisement -
- Advertisement -

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್ (34) ಅವರ ವಿರುದ್ಧ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದ ಮೂರು ದಿನಗಳ ನಂತರ, ನವೆಂಬರ್ 20 ರ ಭಾನುವಾರದಂದು ಬೆಂಗಳೂರು ಪೊಲೀಸರು ಅವರನ್ನು ಬಂಧಿಸಿದ್ದಾರೆ.

2013ರಲ್ಲಿ ಚಿಲುಮೆ ಸಂಸ್ಥೆಯನ್ನು ರಿಜಿಸ್ಟರ್‌‌ ಮಾಡಿದವರಲ್ಲಿ ರವಿಕುಮಾರ್ ಒಬ್ಬರಾಗಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಎನ್‌ಜಿಒ ಹಿಂದಿನ ಪ್ರಮುಖ ವ್ಯಕ್ತಿಯಾಗಿದ್ದಾರೆ. ದಿ ನ್ಯೂಸ್‌ ಮಿನಿಟ್‌ ಮತ್ತು ಪ್ರತಿಧ್ವನಿ ಸುದ್ದಿ ಪೋರ್ಟಾಲ್‌ ನಡೆಸಿದ ಜಂಟಿ ವರದಿಯು ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವ ಅವರ ಎನ್‌ಜಿಒದ ರಹಸ್ಯ ಕಾರ್ಯಾಚರಣೆಯ ವಿವರಗಳನ್ನು ಬಹಿರಂಗಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಲ್ಲನಾಯಕನ ಹಳ್ಳಿಯವರಾದ ರವಿಕುಮಾರ್‌ ಅವರ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದಂತೆ ಅವರು ಉತ್ತರ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಹಗರಣ ಬಯಲಾದ ನಂತರ ಅವರು ನಿರಂತರವಾಗಿ ಸಂಚರಿಸುತ್ತಲೆ ಇದ್ದು, ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ವಕೀಲರೊಬ್ಬರ ಬಳಿ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಸಂಸ್ಥೆಯ ಕ್ಷೇತ್ರ ಕಾರ್ಯಕರ್ತರು ಬಳಸಿದ ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಮಾಣವನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಚಿಲುಮೆಯ ಕಚೇರಿಗಳಿಂದ ವಶಪಡಿಸಿಕೊಂಡ ದಾಖಲೆಗಳು, ಅವರ ಫೋನ್, ಇಮೇಲ್ ಮೂಲಕ ರಾಜಕಾರಣಿಗಳಿಗೂ ಅವರಿಗೂ ಇರುವ ಲಿಂಕ್‌ಗಳನ್ನು ಸಹ ಪರಿಶೀಲಿಸುತ್ತಿದ್ದೇವೆ ” ಎಂದು ತನಿಖಾಧಿಕಾರಿ ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ಹೇಳಿದೆ.

ಡಿಜಿಟಲ್ ಸಮೀಕ್ಷಾ ಅಪ್ಲಿಕೇಶನ್ ಡೆವಲಪರ್‌ಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಮತದಾರರ ಮಾಹಿತಿಯನ್ನು ಕದಿಯಲು ಚುನಾವಣಾ ಅಧಿಕಾರಿಗಳಂತೆ ನಟಿಸುವ ಕ್ಷೇತ್ರ ಕಾರ್ಯಕರ್ತರನ್ನು ಎನ್‌ಜಿಒ ನಿಯೋಜಿಸಿದೆ ಎಂದು ತನಿಖಾ ವರದಿಯಲ್ಲಿ ನ್ಯೂಸ್ ಮಿನಿಟ್ ಹೇಳಿತ್ತು. ಇಷ್ಟೆ ಅಲ್ಲದೆ, ಚಿಲುಮೆ ಸಂಸ್ಥೆಯು ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಪರಿಣತಿ ಹೊಂದಿರುವ ಚಿಲುಮೆ ಎಂಟರ್‌ಪ್ರೈಸಸ್ ಎಂಬ ಖಾಸಗಿ ಕಂಪನಿಯನ್ನು ಸಹ ನಡೆಸುತ್ತಿದೆ.

ಕಂಪೆನಿಯ ವೆಬ್‌ಸೈಟ್‌ ಇದೀಗ ನಿಷ್ಕ್ರಿಯವಾಗಿದ್ದು, ಅದರಲ್ಲಿ ರಾಜಕೀಯ ಪಕ್ಷಗಳಿಗೆ, “ವಿದ್ಯುನ್ಮಾನ ಮತಯಂತ್ರ ಮತ್ತು ಎಣಿಕೆ ಹಾಲ್ ತಯಾರಿ, ಸಿಸಿಟಿವಿ ಅಳವಡಿಕೆ, ವೆಬ್‌ಕಾಸ್ಟಿಂಗ್ ಮತ್ತು ಚೆಕ್-ಪೋಸ್ಟ್ ತಯಾರಿ” ಮಾಡುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಈ ಪ್ರಕರಣದಲ್ಲಿ ರವಿಕುಮಾರ್ ಸೇರಿದಂತೆ ಈ ವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ರವಿಕುಮಾರ್‌ ಅವರ ಹಿರಿಯ ಸಹೋದರ ಕೆಂಪೇಗೌಡ, ಎನ್‌ಜಿಒದ ಮೂವರು ಉದ್ಯೋಗಿಗಳಾದ ನಿರ್ದೇಶಕ ರೇಣುಕಾ ಪ್ರಸಾದ್, ಎಚ್‌ಆರ್ ಎಕ್ಸಿಕ್ಯೂಟಿವ್ ಧರ್ಮೇಶ್ ಮತ್ತು ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ನವೆಂಬರ್ 18 ರ ಶುಕ್ರವಾರ ರಾತ್ರಿ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...