Homeರಾಷ್ಟ್ರೀಯತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

ತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

- Advertisement -
- Advertisement -

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಮಂಡಲದ ಶಿವಲಿಂಗಪುರ ಮತ್ತು ಅಕ್ಕೆಪಲ್ಲಿ ಗ್ರಾಮದ ಮಹಿಳೆಯರು ಕಾಡಿನಲ್ಲಿ ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಶನಿವಾರದಂದು ಅರಣ್ಯಾಧಿಕಾರಿಗಳು  ಐವರು ಆದಿವಾಸಿ ಮಹಿಳೆಯರನ್ನು ಬಲವಂತವಾಗಿ ಚೆನ್ನೂರು ಅರಣ್ಯ ಶಿಬಿರದ ಕಚೇರಿಯಲ್ಲಿ ಬಂಧಿಸಿಟ್ಟು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯರನ್ನು ಎರಡು ಗಂಟೆಗಳ ಕಾಲ ಕ್ಯಾಂಪ್ ಕಚೇರಿಯಲ್ಲಿ ಬೀಗ ಹಾಕಲಾಗಿದ್ದು, ಇದನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ ಕೂಡಾ ನಡೆಸಲಾಗಿದೆ ಎಂದು ವರದಿಯಾಗಿದೆ. 25 ವರ್ಷಕ್ಕೂ ಹೆಚ್ಚು ಕಾಲ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದು, ಸರಕಾರಿ ಜಮೀನಿನಲ್ಲಿ ಮರ ಕಡಿಯುತ್ತೇವೆ ಎಂದು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ಮಹಿಳೆಯರು ಪೋಡು ಜಮೀನುಗಳಲ್ಲಿ ಅರಣ್ಯ ಇಲಾಖೆ ನೆಟ್ಟಿದ್ದ ಮರಗಳನ್ನು ಕಡಿದಿದ್ದು, ಇದಕ್ಕಾಗಿ ಮಹಿಳೆಯರನ್ನು ಕಚೇರಿಯೊಳಗೆ ಹಾಕಿ ಬೀಗ ಹಾಕಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ, ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದಾಗಿ ಸಂಜೆ ವೇಳೆಗೆ ಮಹಿಳೆಯರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿ ಉಲ್ಲೇಖಿಸಿವೆ.

ಇದನ್ನೂ ಓದಿ: “ಆದಿವಾಸಿಗಳ ಬದುಕನ್ನು ಅಧ್ಯಯನ ಮಾಡುತ್ತಾ ದಲಿತಳಾದ ನನ್ನ ಬದುಕಿನ ಜೊತೆಗೂ ಸಮೀಕರಿಸಿಕೊಳ್ಳಲು ಸಾಧ್ಯವಾಯ್ತು”: ಕೆ.ಪಿ ಅಶ್ವಿನಿ

ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಅರಣ್ಯ ಕ್ಯಾಂಪ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ತಾವು ಸಾಗುವಳಿ ಮಾಡುತ್ತಿರುವ ಜಮೀನಿನ ದಾಖಲೆಗಳನ್ನು ನೀಡಬೇಕು ಎಂದು ಚೆನ್ನೂರು ಶಾಸಕ ಬಾಲ್ಕ ಸುಮನ್ ಅವರಿಗೆ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆದಿವಾಸಿಗಳು ಎಚ್ಚರಿಸಿದ್ದಾರೆ.

ಪೋಡು ಎಂಬುದು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳು ಶತಮಾನಗಳಿಂದ ಮಾಡಲ್ಪಡುವ ಒಂದು ಸಾಂಪ್ರದಾಯಿಕ ಕೃಷಿ ಅಥವಾ ಪಾಳಿ ಕೃಷಿಯ ಒಂದು ಸಾಂಪ್ರದಾಯಿಕ ರೂಪವಾಗಿದೆ. ಅದಿಲಾಬಾದ್, ಮಂಚೇರಿಯಲ್, ಮಹಬೂಬ್‌ನಗರ ಮತ್ತು ಖಮ್ಮಂ ಜಿಲ್ಲೆಗಳ ಅರಣ್ಯ ಪ್ರದೇಶದ ಗಡಿಯಲ್ಲಿ ವಾಸಿಸುವ ನಿವಾಸಿಗಳು ಪೋಡು ಭೂಮಿಯನ್ನು ಸಾಗುವಳಿ ಮಾಡುತ್ತಿದೆ.

ಪೋಡು ಭೂಮಿಯಲ್ಲಿ ಸಾಗುವಳಿ ಹಕ್ಕು ಕೋರಿ ಸಾವಿರಾರು ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಭೂಮಿಯನ್ನು ಅರಣ್ಯ ಇಲಾಖೆಯು ಸರ್ಕಾರಿ ಭೂಮಿ ಎಂದು ಹೇಳಿಕೊಂಡಿದೆ. ಪೋಡು ಭೂಮಿ ಹಕ್ಕು ವಿಚಾರವಾಗಿ ಅಧಿಕಾರಿಗಳು ಹಾಗೂ ಆದಿವಾಸಿಗಳ ನಡುವೆ ಹಲವು ವರ್ಷಗಳಿಂದ ಜಟಾಪಟಿ ನಡೆಯುತ್ತಲೇ ಇದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ನವೆಂಬರ್ 2021 ರಲ್ಲಿ, ತೆಲಂಗಾಣ ಸರ್ಕಾರವು ಅರ್ಹ ಹಕ್ಕುದಾರರಿಗೆ ಭೂಮಿಯ ಹಕ್ಕು ಪತ್ರಗಳನ್ನು ನೀಡುವುದಾಗಿ ಘೋಷಿಸಿತು, ಆದರೆ ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಥಟ್ಟನೆ ನಿಲ್ಲಿಸಲಾಯಿತು. ಈ ವರ್ಷ ಜುಲೈ 7 ರಂದು ಮಂಚೇರಿಯಲ್ ಜಿಲ್ಲೆಯ ದಂಡೆಪಲ್ಲಿ ಮಂಡಲದ ಕೊಯಪೋಶಗುಡೆಂ ಗ್ರಾಮದಲ್ಲಿ ಅರಣ್ಯ ಇಲಾಖೆ ನೌಕರರು ವಿವಾದಿತ ಅರಣ್ಯ ಭೂಮಿಯಲ್ಲಿ ರೈತರು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು. ಇದನ್ನು ರೈತರು ವಿರೋಧಿಸಿದಾಗ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...