Homeಕರ್ನಾಟಕಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

ಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

- Advertisement -
- Advertisement -

ಪೊಲೀಸರ ಬಿಗಿ ಭದ್ರತೆಯಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕವನ್ನು ಮೈಸೂರು ರಂಗಾಯಣದ ಭೂಮಿಗೀತದಲ್ಲಿ ಭಾನುವಾರ ಪ್ರದರ್ಶಿಸಲಾಯಿತು. ಆ ನಾಟಕ ನೋಡಲು ಪತ್ರಕರ್ತ ಟಿ.ಗುರುರಾಜ್‌ ಮತ್ತು ರಂಗಾಯಣದ ಮಾಜಿ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಹೋಗಿದ್ದರು. ಆದರೆ ಇವರನ್ನು ಒಳಗೆ ಪ್ರವೇಶಿಸದಂತೆ ಪೊಲೀಸರು ಅಡಚಣೆ ಉಂಟು ಮಾಡಿದ್ದು ಸುದ್ದಿಯಾಗಿದೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ರಚನೆ ಮಾಡಿ ನಿರ್ದೇಶಿಸಿರುವ ಈ ನಾಟಕವನ್ನು ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ್ದು, ಸುಮಾರು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ನಾಟಕ ಪ್ರದರ್ಶನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್‌ಎಸ್‌ಎಸ್‌ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು. ಟಿಪ್ಪು ನೈಜ ಇತಿಹಾಸದ ಕುರಿತು ಮೊದಲಿನಿಂದಲೂ ಮಾತನಾಡುತ್ತಾ ಬಂದಿರುವ ‘ಹಲೋ ಮೈಸೂರು’ ಪತ್ರಿಕೆಯ ಸಂಪಾದಕರಾದ ಟಿ.ಗುರುರಾಜ್‌ ಹಾಗೂ ರಂಗಕರ್ಮಿ ಬಸವಲಿಂಗಯ್ಯ ಅವರು ನಾಟಕ ವೀಕ್ಷಿಸಲು ತೆರಳಿದ್ದರು. “ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ” ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶಕ್ಕೆ ಅನುಮತಿ ಕೊಡಲಾಯಿತು.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಟಿ.ಗುರುರಾಜ್‌, “ನನ್ನ ಮತ್ತು ಬಸವಲಿಂಗಯ್ಯನವರ ಅಕ್ಕಪಕ್ಕ ಇಬ್ಬರು- ಮೂವರು ಪೊಲೀಸರು ಕೂತುಕೊಂಡಿದ್ದರು. ಇವರಿಲ್ಲದಿದ್ದರೆ ಬಹುಶಃ ನಮ್ಮ ಮೇಲೆ ಹಲ್ಲೆಯಾಗುತ್ತಿತ್ತೇನೋ. ಅಲ್ಲಿ ಸಂಘಪರಿವಾರದವರು ಇದ್ದರು. ನಾಟಕ ನೋಡಿ ಹೊರಬಂದ ಬಳಿಕ ರಂಗಾಯಣದ ನಿರ್ದೇಶಕ ಕಾರ್ಯಪ್ಪ ಮಾತನಾಡಿ ನಮ್ಮ ವಿರುದ್ಧ ಗದಾಪ್ರಹಾರ ಮಾಡಿದರೆಂದು ತಿಳಿಯಿತು. ನಮಗೆ ಸೂಕ್ತ ಭದ್ರತೆ ನೀಡಿದ ಪೊಲೀಸರಿಗೆ ಧನ್ಯವಾದಗಳು” ಎಂದರು.

“ನಾಟಕದ ಬಗ್ಗೆ ಹೇಳುವುದಾದರೆ ಗಿರೀಶ್ ಕಾರ್ನಾಡರು ಬರೆದಿರುವ ಸಾಲುಗಳನ್ನು ಯಥಾವತ್ತು ಕದ್ದು ಈ ನಾಟಕದಲ್ಲಿ ಸೇರಿಸಲಾಗಿದೆ. ಸತ್ಯಗಳಿಗೆ ಸುಳ್ಳಿನ ಪರದೆ ಹೊದಿಸಿ, ಇದೇ ಸತ್ಯವೆಂದು ಬಿಂಬಿಸಲಾಗಿದೆ. ಇಡೀ ನಾಟಕದ ಆಶಯ ಮೂರೇ ಮೂರು ಅಂಶಗಳನ್ನು ಒಳಗೊಂಡಿದೆ. ಜಿಹಾದ್‌, ಅಲ್ಲಾ ಓ ಅಕ್ಬರ್‌, ಮುಸಲ್ಮಾನರ ರಾಜ್ಯವನ್ನಾಗಿ ಪಣತೊಟ್ಟ ಟಿಪ್ಪು ಸುಲ್ತಾನ್- ಈ ಮೂರರ ಮೇಲೆ ಇಡೀ ನಾಟಕ ಕೇಂದ್ರೀಕೃತವಾಗಿದೆ” ಎಂದು ವಿವರಿಸಿದರು.

“ಅಡ್ಡಂಡ ಕಾರ್ಯಪ್ಪನವರಿಗೆ ಮೈಸೂರು ಇತಿಹಾಸದ ಕನಿಷ್ಠ ಪ್ರಜ್ಞೆಯೂ ಇಲ್ಲ. ಯಾವ ರಾಜರು ಹೈದರಾಲಿಯ ಕಾಲದಲ್ಲಿ ಆಳುತ್ತಿದ್ದರು ಎಂಬ ಪರಿವೇ ಇಲ್ಲ. ಇಮ್ಮಡಿ ಕೃಷ್ಣರಾಜ ಒಡೆಯರ ಹೆಸರಿನ ಬದಲಿಗೆ ನಂಜರಾಜ ಒಡೆಯರ್‌ ಎಂದು ಹೇಳಿಸಿದ್ದಾರೆ. ಶೃಂಗೇರಿ ಅರಸರು ಟಿಪ್ಪುವಿನೊಂದಿಗೆ ನಡೆಸುವ ಪತ್ರ ವ್ಯವಹಾರ 1791, 1792ರ ಅವಧಿಗೆ ಸೇರಿವೆ. ಆದರೆ ಅಡ್ಡಂಡ ಕಾರ್ಯಪ್ಪ ಈ ಪತ್ರವನ್ನು 1799, ಮೇ 4ನೇ ತಾರೀಖಿನಂದು ಬರೆಸಿದ್ದಾರೆ. ಈ ನಾಟಕ ಆಭಾಸಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿಯವರೆಗೆ ಯಾವ ಇತಿಹಾಸಕಾರರು ಬರೆಯದ, ಯಾವುದೇ ಕೃತಿಯಲ್ಲೂ ಇರದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದಿರುವುದಾಗಿ ಕೊನೆಯಲ್ಲಿ ತೋರಿಸಲಾಗಿದೆ. ವಾಟ್ಸಾಪ್‌ ವಿಶ್ವವಿದ್ಯಾನಿಲಯ ಸಂಶೋಧನೆಯು ನಾಟಕವೊಂದರ ನಿಜಪಾತ್ರವಾಗಿ ಬಂದಿದೆ” ಎಂದು ವಿಷಾದಿಸಿದರು.

“‘ನಮ್ಮ ಟಿಪ್ಪು: ವದಂತಿ ಮತ್ತು ಸತ್ಯಸಂಗತಿ’ ಎಂಬ ಪುಟ್ಟ ಕೃತಿಯನ್ನು ರಚಿಸುತ್ತಿದ್ದೇನೆ. ಟಿಪ್ಪುವನ್ನು ಸಮರ್ಥಿಸುವ ಕೆಲಸವನ್ನೇನೂ ನಾನು ಮಾಡುತ್ತಿಲ್ಲ. ರಾಜಪ್ರಭುತ್ವದ ಕಾಲದವನಾದ ಟಿಪ್ಪು ಮಾಡಿದ ತಪ್ಪುಗಳನ್ನು ನಾವು ಒಪ್ಪಿಕೊಳ್ಳಬೇಕು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವಕ್ಕೂ ವ್ಯತ್ಯಾಸಗಳಿವೆ. ಭೂತವನ್ನು ವರ್ತಮಾನದಲ್ಲಿಟ್ಟು, ವರ್ತಮಾನದಲ್ಲಿ ಭವಿಷ್ಯಕ್ಕೆ ಮಾರಕವಾಗುವಂತೆ ನಡೆದುಕೊಳ್ಳುವುದು ಮತ್ತಷ್ಟು ಆಘಾತಕಾರಿ. ನಾವು ಕಟ್ಟುವ ಕೆಲಸ ಮಾಡಬೇಕು, ಒಡೆಯುವ ಕೆಲಸವನ್ನಲ್ಲ. ಭಾರತೀಯತೆ ನಮ್ಮ ಎದೆಯೊಳಗೆ ಇದೆ. ಅದರ ಪಾಠವನ್ನು ಇನ್ನ್ಯಾರೋ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“ಟಿಪ್ಪುವಿನ ಬಗ್ಗೆ ಇವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಐತಿಹಾಸಿಕವಾದ ಉತ್ತರವನ್ನು ಕೊಡುವ ಪ್ರಯತ್ನವನ್ನು ಈ ಪುಟ್ಟ ಕೃತಿಯಲ್ಲಿ ಮಾಡುತ್ತಿದ್ದೇನೆ. ನಾನು ಬರೆದಿರುವುದು ಸುಳ್ಳು ಎಂದು ಯಾರಾದರೂ ದಾಖಲೆ ಸಮೇತ ಸಾಬೀತುಪಡಿಸಿದರೆ ಒಪ್ಪಿಕೊಳ್ಳಲು ಸಿದ್ಧವಿದ್ದೇನೆ. ಟಿಪ್ಪು ಯಾರನ್ನೂ ಕೊಂದಿಲ್ಲ, ಮತಾಂತರ ಮಾಡಿಲ್ಲ ಎಂದು ಮೊಂಡುವಾದ ಮಾಡಲ್ಲ. ಇಡೀ ರಾಜಪ್ರಭುತ್ವದ ಚರಿತ್ರೆಯನ್ನು ನೋಡಿದರೆ ಟಿಪ್ಪುವಿನಂತೆಯೇ ಎಲ್ಲ ಅರಸರ ಇತಿಹಾಸವಿರುತ್ತದೆ. ತಮ್ಮ ಸಂಬಂಧಿಕರನ್ನೇ ಕೊಂದ ಘಟನೆಗಳು ಸಿಗುತ್ತವೆ. ಸತ್ಯಕ್ಕೆ ವಿದಾಯ ಹೇಳಿರುವ ಅಡ್ಡಂಡ ಕಾರ್ಯಪ್ಪ ಸರ್ಕಾರಕ್ಕೆ ಋಣಸಂದಾಯ ಮಾಡಿದ್ದಾರೆ ಅನಿಸುತ್ತದೆ. 30 ವರ್ಷಗಳ ರಂಗಾಯಣ ಇತಿಹಾಸದಲ್ಲಿ ಈ ನಮೂನೆಯ ಪೊಲೀಸರು ಯಾವತ್ತೂ ಬರಲಿಲ್ಲ. ಬಸವಲಿಂಗಯ್ಯನವರು ಇಡೀ ರಾತ್ರಿ ‘ಮಲೆಗಳಲ್ಲಿ ಮದುಮಗಳು’ ನಾಟಕವನ್ನು ಆಡಿಸಿದ್ದರು. ಸಾವಿರಾರು ಜನ ಬೇರೆ ಬೇರೆ ದೇಶಗಳಿಂದ ಬಂದು ನೋಡಿದರು. ಅಂದು ಹೀಗೆ ಪೊಲೀಸರು ಪ್ರವೇಶಿಸಿರಲಿಲ್ಲ” ಎಂದು ಹೇಳಿದರು.

“ನಾಟಕ ನೋಡಲು ಹೋಗದಂತೆ ನಮ್ಮನ್ನು ತಡೆಯಲಾಯಿತು. ಆದರೆ ಪೊಲೀಸರ ಅಕ್ಕಪಕ್ಕ ಕೂತು ನಾಟಕ ವೀಕ್ಷಿಸಲು ಅನುಮತಿ ಕೊಡಲಾಯಿತು. ನಮ್ಮ ಅಕ್ಕಪಕ್ಕದಲ್ಲಿ ಕೂತಿದ್ದ ಪೊಲೀಸರಿಗೆ ನಾವು ಕೃತ್ಯಜ್ಞತೆಯನ್ನು ಅರ್ಪಿಸುತ್ತೇವೆ. ಯಾಕೆಂದರೆ ನಾಟಕ ನೋಡಲು ಸಂಘಪರಿವಾರದ ಪ್ರೀತಿಪಾತ್ರರು ಬಂದಿದ್ದರು. ಉದ್ದೇಶಪೂರ್ವಕವಾಗಿ ನಾಟಕ ಮುಗಿದ ಮೇಲೆ ಅಡ್ಡಂಡ ಕಾರ್ಯಪ್ಪ ನಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸುವ ಸಾಧ್ಯತೆಯೂ ಇತ್ತು. ಬಹುಶಃ ಪೊಲೀಸರು ಇಲ್ಲದೆ ಇದ್ದಿದ್ದರೆ ನಾವು ಏಟು ತಿಂದುಕೊಂಡು ಹೊರಬರಬೇಕಿತ್ತೇನೋ, ಗೊತ್ತಿಲ್ಲ. ಹೀಗಾಗಿ ಅವರಿಗೆ ಥ್ಯಾಂಕ್ಸ್‌ ಹೇಳಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...