Homeಮುಖಪುಟಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

ಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

- Advertisement -
- Advertisement -

“ಚುನಾವಣೆಯಲ್ಲಿ ಗೆಲ್ಲಬೇಕಾದರೆ ಬಂದೂಕು ಬಳಸಬೇಕು” ಎಂದು ಬಿಜೆಪಿ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿಕೆ ನೀಡಿರುವ ವಿಡಿಯೊವೊಂದು ಬೆಳಕಿಗೆ ಬಂದಿದೆ.

ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕವಾದ ಭಾರತೀಯ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಸದರ್ ಬಜಾರ್ ಘಟಕದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆಂದು ‘ಎಪಿಎನ್‌ಲೈವ್.ಕಾಂ’ ವರದಿ ಮಾಡಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ ಮುಖಂಡರೊಬ್ಬರು ಮಾತನಾಡುವುದನ್ನು, ವಿದ್ಯಾರ್ಥಿ ಘಟಕವನ್ನು ಉದ್ದೇಶಿಸಿ ಅವರು ಘೋಷಣೆಗಳನ್ನು ಕೂಗುವುದನ್ನು ಕಾಣಬಹುದು.

“ಉತ್ತಮ ವಾಗ್ಮಿ ಎಂಬ ಬಗ್ಗೆ ತನಗೆ ಹೆಚ್ಚು ತಿಳಿದಿಲ್ಲ” ಎಂದು ವಿದ್ಯಾರ್ಥಿ ನಾಯಕ ಹೇಳುವುದನ್ನು ಕಾಣಬಹುದು. “ಆದರೆ ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರ ಶಕ್ತಿ ಮತ್ತು ಶ್ರಮಕ್ಕೆ ಸಾಕ್ಷಿಯಾಗಿರುವುದರಿಂದ  ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ” ಎನ್ನುತ್ತಾರೆ.

ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರು ಚುನಾವಣೆ ಗೆಲ್ಲಲು ದೇಹ, ಮನಸ್ಸು, ಹಣ, ಬೇಕಿದ್ದರೆ ಬಂದೂಕು ಬಳಸುತ್ತಾರೆ ಎಂಬ ಮಾತುಗಳನ್ನು ಉಲ್ಲೇಖಿಸುತ್ತಾರೆ. ಈ ಮಾತುಗಳನ್ನು ಯಾರೋ ದೊಡ್ಡ ನಾಯಕರೊಬ್ಬರಿಗೆ ಹೇಳುತ್ತಿರುವಂತೆ ತೋರುತ್ತದೆ. ಆದರೆ ವಿಡಿಯೋದಲ್ಲಿ ಈ ದೊಡ್ಡ ಮುಖಂಡ ಯಾರೆಂಬುದು ದಾಖಲಾಗಿಲ್ಲ.

ಟ್ವಿಟರ್‌ನಲ್ಲಿ ವಿಡಿಯೊ ವೈರಲ್‌: ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ, ಅನೇಕ ಟ್ವಿಟರ್‌ ಬಳಕೆದಾರರು ವಿದ್ಯಾರ್ಥಿ ಮುಖಂಡನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯಾರ್ಥಿ ಮುಖಂಡನ ವಿರುದ್ಧ ಕ್ರಮಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಪರಿಶೀಲಿಸುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದ್ದರೂ, ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಹೊರಬೀಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ತನ್ನ ಘನತೆಯನ್ನು ಉಳಿಸಿಕೊಳ್ಳಲು ಇಂಥವರ ವಿರುದ್ಧ ಕ್ರಮ ಜರುಗಿಸಬೇಕು. ಈ ವಿಚಾರದಲ್ಲಿ ಆಯೋಗ ವಿಫಲವಾದರೆ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೆರಿಫೈ ಮಾಡಲ್ಪಟ್ಟ ಅನೇಕ ಟ್ವಿಟರ್‌ ಖಾತೆದಾರರು ಈ ವಿಡಿಯೊವನ್ನು ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚುನಾವಣೆಯಲ್ಲಿ ಬಂದೂಕು ಬಳಸಬೇಕು ಅಂತ ಹೇಳ್ತಾರೆ…ಆದರೆ ಅದೇ ಬಂದೂಕು ಅವನಿಗೆ ತಿರುಗಿ ಮುಟ್ಟಿದರೆ ಸುಖ ಸುಮ್ಮನೆ ಅವನೇ ಸಾಯ್ಬೇಕಲ್ಲ…ಹಾಗಾಗಿ ಇಂಥ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು….

  2. “ಬಂದೂಕು ಬಳಸಬೇಕು” ಎಂದು ಹೇಳಿರುವವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...