Homeಮುಖಪುಟಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

ಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

- Advertisement -
- Advertisement -

“ಚುನಾವಣೆಯಲ್ಲಿ ಗೆಲ್ಲಬೇಕಾದರೆ ಬಂದೂಕು ಬಳಸಬೇಕು” ಎಂದು ಬಿಜೆಪಿ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿಕೆ ನೀಡಿರುವ ವಿಡಿಯೊವೊಂದು ಬೆಳಕಿಗೆ ಬಂದಿದೆ.

ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕವಾದ ಭಾರತೀಯ ಯುವ ಮೋರ್ಚಾದ ವಿದ್ಯಾರ್ಥಿ ಮುಖಂಡರೊಬ್ಬರು ಸದರ್ ಬಜಾರ್ ಘಟಕದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆಂದು ‘ಎಪಿಎನ್‌ಲೈವ್.ಕಾಂ’ ವರದಿ ಮಾಡಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ ಮುಖಂಡರೊಬ್ಬರು ಮಾತನಾಡುವುದನ್ನು, ವಿದ್ಯಾರ್ಥಿ ಘಟಕವನ್ನು ಉದ್ದೇಶಿಸಿ ಅವರು ಘೋಷಣೆಗಳನ್ನು ಕೂಗುವುದನ್ನು ಕಾಣಬಹುದು.

“ಉತ್ತಮ ವಾಗ್ಮಿ ಎಂಬ ಬಗ್ಗೆ ತನಗೆ ಹೆಚ್ಚು ತಿಳಿದಿಲ್ಲ” ಎಂದು ವಿದ್ಯಾರ್ಥಿ ನಾಯಕ ಹೇಳುವುದನ್ನು ಕಾಣಬಹುದು. “ಆದರೆ ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರ ಶಕ್ತಿ ಮತ್ತು ಶ್ರಮಕ್ಕೆ ಸಾಕ್ಷಿಯಾಗಿರುವುದರಿಂದ  ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ” ಎನ್ನುತ್ತಾರೆ.

ಪಕ್ಷದ ವಿದ್ಯಾರ್ಥಿ ಕಾರ್ಯಕರ್ತರು ಚುನಾವಣೆ ಗೆಲ್ಲಲು ದೇಹ, ಮನಸ್ಸು, ಹಣ, ಬೇಕಿದ್ದರೆ ಬಂದೂಕು ಬಳಸುತ್ತಾರೆ ಎಂಬ ಮಾತುಗಳನ್ನು ಉಲ್ಲೇಖಿಸುತ್ತಾರೆ. ಈ ಮಾತುಗಳನ್ನು ಯಾರೋ ದೊಡ್ಡ ನಾಯಕರೊಬ್ಬರಿಗೆ ಹೇಳುತ್ತಿರುವಂತೆ ತೋರುತ್ತದೆ. ಆದರೆ ವಿಡಿಯೋದಲ್ಲಿ ಈ ದೊಡ್ಡ ಮುಖಂಡ ಯಾರೆಂಬುದು ದಾಖಲಾಗಿಲ್ಲ.

ಟ್ವಿಟರ್‌ನಲ್ಲಿ ವಿಡಿಯೊ ವೈರಲ್‌: ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ, ಅನೇಕ ಟ್ವಿಟರ್‌ ಬಳಕೆದಾರರು ವಿದ್ಯಾರ್ಥಿ ಮುಖಂಡನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯಾರ್ಥಿ ಮುಖಂಡನ ವಿರುದ್ಧ ಕ್ರಮಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಪರಿಶೀಲಿಸುವ ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದ್ದರೂ, ಇಂತಹ ಆಕ್ಷೇಪಾರ್ಹ ಹೇಳಿಕೆಗಳು ಹೊರಬೀಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ತನ್ನ ಘನತೆಯನ್ನು ಉಳಿಸಿಕೊಳ್ಳಲು ಇಂಥವರ ವಿರುದ್ಧ ಕ್ರಮ ಜರುಗಿಸಬೇಕು. ಈ ವಿಚಾರದಲ್ಲಿ ಆಯೋಗ ವಿಫಲವಾದರೆ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೆರಿಫೈ ಮಾಡಲ್ಪಟ್ಟ ಅನೇಕ ಟ್ವಿಟರ್‌ ಖಾತೆದಾರರು ಈ ವಿಡಿಯೊವನ್ನು ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಚುನಾವಣೆಯಲ್ಲಿ ಬಂದೂಕು ಬಳಸಬೇಕು ಅಂತ ಹೇಳ್ತಾರೆ…ಆದರೆ ಅದೇ ಬಂದೂಕು ಅವನಿಗೆ ತಿರುಗಿ ಮುಟ್ಟಿದರೆ ಸುಖ ಸುಮ್ಮನೆ ಅವನೇ ಸಾಯ್ಬೇಕಲ್ಲ…ಹಾಗಾಗಿ ಇಂಥ ಹೇಳಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು….

  2. “ಬಂದೂಕು ಬಳಸಬೇಕು” ಎಂದು ಹೇಳಿರುವವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...