Homeರಾಷ್ಟ್ರೀಯರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

ರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.

ಈ ವಾರ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. “ಆದೇಶದಲ್ಲಿ ನಿಗದಿಪಡಿಸಿದ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಮುಂದಿನ ಕೆಲವು ದಿನಗಳಲ್ಲಿ ಪಕ್ಷದ ಪರವಾಗಿ ಸಲ್ಲಿಸಲಾಗುವುದು” ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್‌ನಿಂದ ಟೀಕೆಗಳನ್ನು ಎದುರಿಸುತ್ತಿರುವ ಒಕ್ಕೂಟ ಸರ್ಕಾರವು ಕಳೆದ ವಾರ ಪ್ರಕರಣದಲ್ಲಿ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನವೆಂಬರ್ 11 ರಂದು ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಸೇರಿ ಆರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಆದೇಶ

1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಕೊಲ್ಲಲ್ಪಟ್ಟರು.

ಈ ಪ್ರಕರಣದಲ್ಲಿ ಮುರುಗನ್ ಅಲಿಯಾಸ್ ಶ್ರೀಹರನ್, ನಳಿನಿ, ಎಜಿ ಪೆರಾರಿವಾಲನ್, ಸಂತನ್, ಜಯಕುಮಾರ್, ರಾಬರ್ಟ್ ಪಾಯಸ್ ಮತ್ತು ಪಿ. ರವಿಚಂದ್ರನ್ ಅವರನ್ನು ಪ್ರಕರಣ ನಡೆದ ವರ್ಷದಲ್ಲೆ ವಿಚಾರಣೆ ನಡೆಸಿ ದೋಷಿಗಳೆಂದು ಘೋಷಿಸಿ, ಅವರಿಗೆ ಮರಣದಂಡನೆ ವಿಧಿಸಲಾಯಿತು. ನಂತರದ ವರ್ಷಗಳಲ್ಲಿ ಇದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಯಿತ್ತು.

ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ. ಪೆರಾರಿವಾಲನ್ ಅವರನ್ನು 2022ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದಾಗಿ ಆರು ತಿಂಗಳ ನಂತರ, ಉಳಿದ ಆರು ಜನರನ್ನು ಕೂಡಾ ಬಿಡುಗಡೆ ಮಾಡಲಾಗಿದೆ. ಪೆರಿಯರಿವಾಲನ್ ಬಿಡುಗಡೆಯಾದಾಗ ಅಪರಾಧಿಗಳನ್ನು ಬಿಡುಗಡೆ ಮಾಡುವ ಕಾನೂನು ತರ್ಕವನ್ನು ಈಗಾಗಲೇ ಸ್ಥಾಪಿಸಲಾಗಿದೆ, ಅದೇ ವಾದಗಳು ಇತರರಿಗೂ ಅನ್ವಯಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಅಪರಾಧಿಗಳೆಲ್ಲರೂ ಜೈಲಿನಲ್ಲಿ ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಜೈಲಿನಲ್ಲಿದ್ದಾಗ ಅವರು ಶೈಕ್ಷಣಿಕ ಅರ್ಹತೆಗಳನ್ನು ಸಹ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...