Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬಿಬಿಎಂಪಿ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅಕ್ರಮ ನಡೆಯುತ್ತಲೆ ಇತ್ತು!

- Advertisement -
- Advertisement -

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ರಾಜ್ಯದ ಆಡಳಿತರೂಢ ಪಕ್ಷವಾದ ಬಿಜೆಪಿಗೆ ನೇರ ಕೈವಾಡವಿದೆ ಎಂದು ದಿ ನ್ಯೂಸ್ ಮಿನಿಟ್‌ ಹೊಸ ವರದಿ ಹೇಳಿದೆ. ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ತನ್ನ ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡುತ್ತಿತ್ತು ಮತ್ತು ಬಿಬಿಎಂಪಿ ಅವರಿಗೆ ನೀಡಿದ್ದ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅದು ಮುಂದುವರೆದಿತ್ತು ಎಂದು ಆರೋಪಿಸಿದೆ.

ದಿ ನ್ಯೂಸ್ ಮಿನಿಟ್ ಮತ್ತು ಪ್ರತಿಧ್ವನಿ ಜಂಟಿಯಾಗಿ ನಡೆಸಿದ ತನಿಖಾ ವರದಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತದಾರರ ಮಾಹಿತಿ ಕಳ್ಳತನ ಹಗರಣ ಬಯಲಿಗೆಳೆದಿತ್ತು. ಈ ಹಗರಣದಲ್ಲಿ ಪೊಲೀಸರು ಈಗಾಗಲೆ ಒಟ್ಟು ಐವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಹೊಂಗಸಂದ್ರದ ಬಿಜೆಪಿ ವಾರ್ಡ್ ಕಚೇರಿಯಲ್ಲೆ ಏಜೆಂಟರಿಗೆ ತರಬೇತಿ ನೀಡಲಾಗಿತ್ತು ಎಂದು ನ್ಯೂಸ್ ಮಿನಿಟ್‌ ಹೇಳಿದೆ. ಚಿಲುಮೆ ಸಂಸ್ಥೆಯ ಉದ್ಯೋಗಾಕಾಂಕ್ಷಿಯಂತೆ ತೆರಳಿದ್ದ ನ್ಯೂಸ್ ಮಿನಿಟ್‌‌ನ ವ್ಯಕ್ತಿಯೊಬ್ಬರು ಮೂಲಕ ಈ ಮಾಹಿತಿ ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸುವ ಏರಿಯಾಗಳ ನಕ್ಷೆ ಮಾಡುವುದು ಮತ್ತು ಮತದಾರರ ಡೇಟಾವನ್ನು ಹೇಗೆ ಸಂಗ್ರಹಿಸುವುದು ಎಂಬುದರ ಕುರಿತು ಚಿಲುಮೆ ಎನ್‌ಜಿಒ ತನ್ನ ಕ್ಷೇತ್ರ ಕಾರ್ಯಕರ್ತರಿಗೆ ತರಬೇತಿ ನೀಡಿತ್ತು ಎಂದು ನ್ಯೂಸ್ ಮಿನಿಟ್ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬಿಜೆಪಿಯ ಈ ಕಚೇರಿಯನ್ನು ಕಾರ್ಪೊರೇಟರ್ ಹುದ್ದೆಯ ಆಕಾಂಕ್ಷಿಗಳು ಪ್ರಾಥಮಿಕವಾಗಿ ಬಳಸುತ್ತಾರೆ. ಸೆಪ್ಟೆಂಬರ್ 2020 ರವರೆಗೆ ವಾರ್ಡ್‌ನ ಕೌನ್ಸಿಲರ್ ಬಿಜೆಪಿಯ ಭಾರತಿ ರಾಮಚಂದ್ರ ಆಗಿದ್ದರು. ಈ ಕಚೇರಿಗೆ ಪ್ರಸ್ತುತ ಶಾಸಕರ ವಾರ್ಡ್‌ ಕಚೇರಿ ಎಂದು ಹೆಸರು ಹಾಕಲಾಗಿದೆ. ಹೊಂಗಸಂದ್ರವು ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಅವರ ಕ್ಷೇತ್ರಕ್ಕೆ ಸೇರುತ್ತದೆ.

PC: TNM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆದೇಶಿಸಿದ ನಂತರವೂ ಚಿಲುಮೆಯ ಏಜೆಂಟರು ಅಕ್ರಮ ಮತದಾರರ ಮಾಹಿತಿ ಸಂಗ್ರಹಣೆಯನ್ನು ಮುಂದುವರೆಸುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಪರಿಶೀಲಿಸಲು ನ್ಯೂಸ್ ಮಿನಿಟ್‌ ರಹಸ್ಯವಾಗಿ ಅಲ್ಲಿಗೆ ತೆರಳಿತ್ತು.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಈ ಹಿಂದೆ ವರದಿಯಾದಂತೆ, ನವೆಂಬರ್ 2 ರಂದು ಚುನಾವಣಾ ವಂಚನೆಯ ತನಿಖೆಯನ್ನು ನ್ಯೂಸ್ ಮಿನಿಟ್‌ ಪ್ರಾರಂಭಿಸಿದ ನಂತರ BBMP ತರಾತುರಿಯಲ್ಲಿ ಚಿಲುಮೆ ಎನ್‌ಜಿಒಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿತು. ಆದರೂ ಕನಿಷ್ಠ ನವೆಂಬರ್ 17 ರವರೆಗೆ ಚಿಲುಮೆಯು ತನ್ನ ಕಾರ್ಯಾಚರಣೆಯನ್ನು ಯಾವುದೇ ಬದಲಾವಣೆಯಿಲ್ಲದೆ ಮುಂದುವರಿಸಿತ್ತು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಬಿಬಿಎಂಪಿಯ ರದ್ದತಿ ಆದೇಶವನ್ನು ಧಿಕ್ಕರಿಸಿ ಚಿಲುಮೆಯು ಹೊಸ ತಾಜಾ ಫೀಲ್ಡ್ ಏಜೆಂಟರನ್ನು ನೇಮಿಸಿಕೊಳ್ಳುತ್ತಿದೆ ಎಂಬ ಸುಳಿವು ಆಧರಿಸಿ, ನ್ಯೂಸ್‌ ಮಿನಿಟ್‌‌ ನವೆಂಬರ್ 12 ರಂದು ಕೆಲಸ ಹುಡುಕುವ ನೆಪದಲ್ಲಿ ಚಿಲುಮೆ ಎನ್‌ಜಿಒ ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿತ್ತು. ಕೆಲವು ಪ್ರಶ್ನೆಗಳ ನಂತರ ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯನ್ನು ಅಲ್ಲಿ ಕೆಲಸಕ್ಕೆ ಸೇರಿಸಿಕೊಂಡಿದ್ದರು.

ನವೆಂಬರ್ 16 ರಂದು ದಕ್ಷಿಣ ಬೆಂಗಳೂರಿನ ಹೊಂಗಸಂದ್ರ ಪ್ರದೇಶದಲ್ಲಿ ತರಬೇತಿ ಕೇಂದ್ರದ ಸ್ಥಳದ ಲೊಕೇಷನ್‌ ಕಳುಹಿಸಿದ್ದರು. ಮರುದಿನ ಸ್ಥಳಕ್ಕೆ ತೆರಳಿದ್ದ ನ್ಯೂಸ್ ಮಿನಿಟ್‌ನ ವ್ಯಕ್ತಿ, ಬಿಜೆಪಿಯ ಬೊಮ್ಮಸಂದ್ರ ಶಾಸಕ ಸತೀಶ್ ರೆಡ್ಡಿ ಅವರ ಕಚೇರಿಯಲ್ಲಿ ತರಬೇತಿ ನಡೆಯುತ್ತಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಅವರು ಕಚೇರಿಯ ಒಳಗಿನ ಮತ್ತು ಹೊರಗಿನ ಫೋಟೋಗಳನ್ನು ಕ್ಲಿಕ್ ಮಾಡಿದ್ದು, ಅದನ್ನು ನ್ಯೂಸ್ ಮಿನಿಟ್‌ ಪ್ರಕಟಿಸಿದೆ. ಕಚೇರಿಯ ಮುಖ್ಯ ಕಿಟಕಿಯ ಮೇಲೆ ಸತೀಶ್ ರೆಡ್ಡಿ ಅವರ ಚಿತ್ರವಿರುವ ದೊಡ್ಡ ಪೋಸ್ಟರ್ ಅನ್ನು ಫೋಟೋಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ನವೆಂಬರ್‌ 17 ರಂದು ಹಗರಣ ಬಯಲಾಗುತ್ತಿದ್ದಂತೆ ಕನ್ನಡ ಮಾಧ್ಯಮಗಳು ಅದನ್ನು ವರದಿ ಮಾಡಿದ್ದವು. ಹೀಗಾಗಿ ಏಜೆಂಟರಿಗೆ ತರಬೇತಿ ನೀಡುತ್ತಿದ್ದ ಬಿಜೆಪಿ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ನಡೆದ ಸಂಕ್ಷಿಪ್ತ ಚರ್ಚೆಯ ನಂತರ ಎಲ್ಲರೂ ಅಲ್ಲಿಂದ ಹಿಂತಿರುಗಿದ್ದು, ಅಲ್ಲಿನ ಮೇಲ್ವಿಚಾರಕರು, ‘ತಾಂತ್ರಿಕ ಸಮಸ್ಯೆಯಿಂದ ಕೆಸಲ ನಡೆಸಲು ಸಾಧ್ಯವಾಗುತ್ತಿಲ್ಲ. ಮತ್ತೆ ಪುನರಾರಂಭಿಸಿದಾಗ ತಿಳಿಸಲಾಗುವುದು’ ಎಂದು ಹೇಳಿದ್ದರು” ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ನವೆಂಬರ್ 19 ರಂದು, ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯು ಮೇಲ್ವಿಚಾರಕರಿಗೆ ಕರೆ ಮಾಡಿ ಚಿಲುಮೆ ಕಚೇರಿಗಳ ಮೇಲೆ ಪೋಲೀಸ್ ದಾಳಿಯ ಬಗ್ಗೆ ಕೇಳಿದ್ದು, ತಮ್ಮ ಕೆಲಸದ ಬಗ್ಗೆ ಪ್ರಶ್ನಿಸಿದ್ದಾರೆ. ಮೇಲ್ವಿಚಾರಕರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

“ಸಣ್ಣಪುಟ್ಟ ಸಮಸ್ಯೆಗಳಿದ್ದು, ಶೀಘ್ರದಲ್ಲೇ ಕಾರ್ಯಾಚರಣೆ ಪುನರಾರಂಭಿಸಲಾಗುವುದು” ಎಂದು ಮೇಲ್ವಿಚಾರಕರು ತಿಳಿಸಿದ್ದಾರೆ. ಆದರೆ, ಅಂದಿನಿಂದ ಒಂದನ್ನು ಹೊರತುಪಡಿಸಿ ಎಲ್ಲಾ ಸಂಖ್ಯೆಗಳು ಸ್ವಿಚ್ ಆಫ್ ಆಗಿವೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ಉತ್ತರ: ಹಿಂದುತ್ವದ ಫ್ರಿಂಜ್ ಅಖಾಡದಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಯಾರು?

ತಮ್ಮ ವಾರ್ಡ್ ಕಚೇರಿಯಲ್ಲಿ ನಡೆದ ತರಬೇತಿ ಕುರಿತು ಸತೀಶ್ ರೆಡ್ಡಿ ಅವರ ಪ್ರತಿಕ್ರಿಯೆ ಕೇಳಿದಾಗ, ಈ ಬಗ್ಗೆ ಯಾವುದೆ ಮಾಹಿತಿ ತನಗೆ ಇಲ್ಲ ಎಂದು ಶಾಸಕ ಹೇಳಿದ್ದಾಗಿ ನ್ಯೂಸ್ ಮಿನಿಟ್‌ ಹೇಳಿದೆ. ತರಬೇತಿಗಾಗಿ ತಮ್ಮ ಅನುಮತಿಯಿಲ್ಲದೆ ಕಚೇರಿಯನ್ನು ಬಳಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಅನೇಕ ಜನರು ಕಚೇರಿಗೆ ಭೇಟಿ ನೀಡುತ್ತಾರೆ ಮತ್ತು ತರಬೇತಿಯ ಬಗ್ಗೆ ತನಗೆ ತಿಳಿದಿಲ್ಲ ಎಂದು ಅವರು ಉತ್ತರಿಸಿದ್ದಾರೆ.

ನ್ಯೂಸ್ ಮಿನಿಟ್‌‌ನ ಸಂಪೂರ್ಣ ವರದಿ ಇಲ್ಲಿ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...