Homeರಾಜಕೀಯಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

ಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

- Advertisement -
- Advertisement -

ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್‌ನ ಶಾಸಕರನ್ನು ಆಪರೇಷನ್‌ ಕಮಲ ನಡೆಸಲು ಯತ್ನಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇರಳ ಮೂಲದ ರಾಜಕಾರಣಿ, ಉದ್ಯಮಿ ತುಷಾರ್ ವೆಲ್ಲಪಲ್ಲಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತುಷಾರ್ ಅವರ ಪಕ್ಷವಾದ ಭಾರತ ಧರ್ಮ ಜನ ಸೇನೆಯ (ಬಿಡಿಜೆಎಸ್)ಯು ಕೇರಳದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಚಾಲಕರೂ ಆಗಿರುವ ತುಷಾರ್ ಮತ್ತು ಡಾ.ಜಗ್ಗಿ ಸ್ವಾಮಿ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲುಕ್‌ಔಟ್‌‌ ನೋಟಿಸ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತುಷಾರ್ ಅವರು ವಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮೂಲಕ ಪಕ್ಷಾಂತರ ನಡೆಸಲು ತ್ರಂತ್ರ ರೂಪಿಸಿದ್ದಾರೆ ಎಂದು ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆರೋಪಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ತುಷಾರ್ ಅವರು ರಾಜ್ಯದ ನಾಲ್ವರು ಟಿಆರ್‌ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು 100 ಕೋಟಿ ರೂ. ಆಫರ್‌ ಮಾಡಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

ಟಿಆರ್‌ಎಸ್‌ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಐದು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅರ್ಧ ಗಂಟೆ ಕಾಲ ತುಷಾರ್ ಅವರ ಏಜೆಂಟ್‌ಗಳು ಟಿಆರ್‌ಎಸ್ ಶಾಸಕರಿಗೆ ಆಫರ್ ಬಗ್ಗೆ ಮಾತನಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಅವರು ಅಮಿತ್ ಶಾ ಜೊತೆಗೆ ತುಷಾರ್ ಇರುವ ಕೆಲವು ಫೋಟೋಗಳು ಮತ್ತು ಇತರ ಕೆಲವು ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.

ಟಿಆರ್‌ಎಸ್ ಶಾಸಕರನ್ನು ಆಪರೇಷನ್ ಕಮಲ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಹಿಂದೆ ತುಷಾರ್ ಇದ್ದಾರೆ ಎಂದು ಟಿಆರ್‌ಎಸ್‌ ಆರೋಪಿಸಿತ್ತು.

ನೋಟಿಸ್‌ ನೀಡಿದ ಬೆನ್ನಲ್ಲೇ ತೆಲಂಗಾಣ ಪೊಲೀಸರು ಕೊಚ್ಚಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಕಣಿಚುಕುಲಂಗರದಲ್ಲಿರುವ ತುಷಾರ್ ಅವರ ಮನೆಗೆ ಕಳೆದ ದಿನ ಎಸ್‌ಐಟಿ ತಂಡ ತಲುಪಿದ್ದು, ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ದಾಳಿಯನ್ನು ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರಮಾ ಮಹೇಶ್ವರಿ ನೇತೃತ್ವದಲ್ಲಿ ನಡೆದಿತ್ತು.

ಬಿಜೆಪಿಗೆ ಪಕ್ಷಾಂತರ ಮಾಡಲು 100 ಕೋಟಿ ಆಮಿಷ ಒಡ್ಡಲಾಗಿದೆ ಎಂದು ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮಚಂದ್ರ ಭಾರತಿ, ಕೋರೆ ನಂದು ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಧನಕ್ಕೆ ಒಳಗಾದವರು ನಾಲ್ವರು ಶಾಸಕರಿಗೆ ಟಿಆರ್‌ಎಸ್ ತೊರೆದ ನಂತರ ಬಿಜೆಪಿ ಸೇರುವುದರಿಂದ ಆಗುವ ಲಾಭಗಳ ಕುರಿತು ವಿವರಿಸುತ್ತಿರುವ ವಿಡಿಯೋ ತುಣುಕುಗಳನ್ನು ಟಿಆರ್‌ಎಸ್‌ ಬಿಡುಗಡೆ ಮಾಡಿವೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್…

ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ಅವರು ಮೊಬೈಲ್ ಸ್ಪೀಕರ್ ಆನ್ ಮಾಡಿ ತುಷಾರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ದಾಖಲಾಗಿದೆ. ಫೋನ್‌ನ ಇನ್ನೊಂದು ಕಡೆಯಲ್ಲಿ ತುಷಾರ್ ಅವರ ಧ್ವನಿಯನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಬಹುದು ಎಂದು ಮುಖ್ಯಮಂತ್ರಿ ರಾವ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...