Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

- Advertisement -
- Advertisement -

ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡಿದ ಮೂವರು ಚುನಾವಣಾ ನೋಂದಣಿ ಅಧಿಕಾರಿಗಳನ್ನು (ಇಆರ್‌ಒ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ಅಮಾನತುಗೊಳಿಸಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ ಮಹದೇವಪುರದ ಇಆರ್‌ಒ ಕೆ. ಚಂದ್ರಶೇಖರ, ಚಿಕ್ಕಪೇಟೆ ಇಆರ್‌ಒ ವಿ.ಬಿ.ಭೀಮಾಶಂಕರ್‌, ಕಂದಾಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಶಿವಾಜಿನಗರದ ಇಆರ್‌ಒ ಸುಹೇಲ್‌ ಅಹಮದ್‌ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ, ಯಾವುದೇ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿ ಕಾರ್ಡ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಎಂದು ಬರೆದು ಸಂಸ್ಥೆಗೆ ಇಆರ್‌ಒ ಮೂಲಕ ಗುರುತಿನ ಚೀಟಿ ನೀಡಿರುವುದು ಕಂಡುಬಂದಿದೆ” ಎಂದು ಮಹದೇವಪುರ ಅಮಾನತು ಆದೇಶದಲ್ಲಿ ತಿಳಿಸಿದೆ.

ಶಿವಾಜಿನಗರದ ಆದೇಶದಲ್ಲಿ ಇಆರ್‌ಒ ಸುಹೇಲ್ ಅಹಮದ್ ಅವರು 14 ಬೂತ್ ಮಟ್ಟದ ಸಂಯೋಜಕ (ಬಿಎಲ್‌ಸಿ) ಕಾರ್ಡ್‌ಗಳನ್ನು ನೀಡಿದ್ದಾರೆ ಎಂದು ಹೆಚ್ಚುವರಿಯಾಗಿ ಉಲ್ಲೇಖಿಸಲಾಗಿದೆ.

ದಿ ನ್ಯೂಸ್ ಮಿನಿಟ್‌ ಮತ್ತು ಪ್ರತಿಧ್ವನಿ ನಡೆಸಿದ ಜಂಟಿ ತನಿಖಾ ವರದಿಯ ನಂತರ ಮತದಾರರರ ಮಾಹಿತಿ ಕಳ್ಳತನದ ಬೃಹತ್ ಹಗರಣ ಬಹಿರಂಗವಾಗಿದ್ದು, ಈ ವರೆಗೆ ಐವರನ್ನು ಬಂಧಿಸಲಾಗಿದೆ. ಅಲ್ಲದೆ ಹಗರಣದಲ್ಲಿ ಬಿಜೆಪಿಗೆ ನೇರ ಕೈವಾಡವಿದ್ದು, ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡಲಾಗಿತ್ತು ಎಂದು ಇತ್ತೀಚೆಗಿನ ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸರಿದೆಯೆಂದು ಹುಡುಕುವುದು ಹೇಗೆ? ಡಿಲೀಟ್‌ ಆಗಿದ್ದರೆ ಸೇರಿಸುವುದು ಹೇಗೆ?

ಚುನಾವಣಾ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಅನುಮತಿ ಪತ್ರವನ್ನು ದುರುಪಯೋಗ ಪಡಿಸಿಕೊಂಡಿರುವ ಚಿಲುಮೆ ಎಂಬ ಖಾಸಗಿ ಎನ್‌ಜಿಒ ಮನೆ-ಮನೆ ಸಮೀಕ್ಷೆಯ ಮೂಲಕ ಮತದಾರರ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ಆರೋಪಿಸಲಾಗಿದ್ದು, ಬಿಬಿಎಂಪಿ ಅನುಮತಿ ನೀಡುವಲ್ಲಿ ಕೂಡಾ ಅಕ್ರಮ ಎಸಗಿದೆ ಎಂದು ವರದಿಯಾಗಿದೆ. ಬಿಬಿಎಂಪಿಯಿಂದ BLO ಗಳೆಂದು ಗುರುತಿಸಿಕೊಂಡ ಏಜೆಂಟರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಲಾಗಿತ್ತು.

ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಚಿಕ್ಕಪೇಟೆ ಮೂರು ಕ್ಷೇತ್ರಗಳ ಸಮೀಕ್ಷೆಯನ್ನು ಚಿಲುಮೆ ಎನ್‌ಜಿಓದ ಏಜೆಂಟರು ಬಹುತೇಕ ಪೂರ್ಣಗೊಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ಅದಾಗ್ಯೂ ಏಜೆಂಟರುಗಳಿಗೆ, ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲಾಗುತ್ತಿದೆ ಎಂಬುದು ತಿಳಿದಿರಲಿಲ್ಲ ಎಂದು ವರದಿ ಹೇಳಿದೆ.

“ಸರ್ಕಾರವು ಅನುಮೋದಿಸಿದ ಕಾನೂನುಬದ್ಧ ಚಟುವಟಿಕೆಯನ್ನು ನಾವು ಮಾಡುತ್ತಿದ್ದೇವೆ ಎಂದು ಭಾವಿಸಿದ್ದೆವು” ಎಂದು ಏಜೆಂಟರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಏಜೆಂಟ್‌ಗಳಾಗಿ ಸೇರಿದ್ದ ಹಲವರು ವೇತನ ಪಾವತಿಸದ ಕಾರಣ ಮತ್ತು ಕೆಲಸದ ಭಯಾನಕ ಪರಿಸ್ಥಿತಿಗಳಿಂದಾಗಿ ಕೆಲಸವನ್ನು ತೊರೆದಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಭಾನುವಾರ ಚಿಲುಮೆಯ ನಿರ್ದೇಶಕ ರವಿಕುಮಾರ್ ಕೃಷ್ಣಪ್ಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ನವೆಂಬರ್ 17 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರು ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ನಕಲಿ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬಯಲಾದ ಮೂರು ದಿನಗಳವರೆಗೆ ಅವರು ತಲೆಮರೆಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...