Homeರಾಷ್ಟ್ರೀಯನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ...

ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿ ಸಮರ್ಥನೆ & ವೈಭವೀಕರಣ’ ದಿನವಾಗಿ ಆಚರಿಸಲು ಬಿಜೆಪಿ ಸರ್ಕಾರದಿಂದ ತಯಾರಿ!

- Advertisement -
- Advertisement -

ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ನವೆಂಬರ್‌ 26ರ ಸಂವಿಧಾನ ದಿನವನ್ನು ‘‘ಸಂವಿಧಾನ ಸಮರ್ಪಣಾ ದಿನ”ವೆಂದು ಕರೆದಿದ್ದು, ಈ ವರ್ಷದ ಆಚರಣೆಯನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ ಆಚರಿಸುವಂತೆ ಸೂಚಿಸಿದೆ. ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದ ದಿನದಂದು ಒಕ್ಕೂಟ ಸರ್ಕಾರವು ಸುಳ್ಳು ನಿರೂಪಣೆ ಮೂಲಕ “ಭಾರತದ ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’’ ನಡೆಸುತ್ತಿದೆ ಎಂಬ ಅರೋಪ ವ್ಯಕ್ತವಾಗಿದೆ.

ನವಂಬರ್ 9ರಂದು ಬಿಜೆಪಿ ಸರ್ಕಾರದ ಕ್ಯಾಬಿನೆಟ್‌ ಸೆಕ್ರೆಟರಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು, ಈ ಬಾರಿಯ ನವೆಂಬರ್‌ 26ರ ಸಂವಿಧಾನ ಸಮರ್ಪಣಾ ದಿನವನ್ನು “ಭಾರತ – ಪ್ರಜಾತಂತ್ರದ ಜನನಿ” ಎಂಬ ಹೆಸರಿನಲ್ಲಿ “ಜಗತ್ತಿನಲ್ಲಿರುವ ಪ್ರಜಾಪ್ರಭುತ್ವ ಹುಟ್ಟಿದ್ದು ಭಾರತದಲ್ಲಾಗಿದೆ” ಎಂಬ ವಿಷಯವನ್ನು ಸಮರ್ಥಿಸಿಕೊಂಡು ದೇಶಾದ್ಯಂತ ಆಚರಿಸಬೇಕೆಂದು ಸೂಚಿಸಿದೆ. ಇಷ್ಟೆ ಅಲ್ಲದೆ ಈ ಆಚರಣೆಯನ್ನು ಹೇಗೆ ಆಚರಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ (ICHR) ತಯಾರಿಸಿರುವ ಟಿಪ್ಪಣಿಯನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ICHR ತಯಾರಿಸಿರುವ ಈ ಟಿಪ್ಪಣಿಯೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದು, ದೇಶವು ಶತಮಾನಗಳ ಕಾಲದಿಂದಲೂ ನರಳುತ್ತಿರುವ ಜಾತಿ ಪದ್ದತಿಯನ್ನು ಇತಿಹಾಸದ ಸುಳ್ಳು ನಿರೂಪಣೆಯೊಂದಿಗೆ ಇದರಲ್ಲಿ ಹೇಳಲಾಗಿದೆ.

ICHR ಟಿಪ್ಪಣಿಯಲ್ಲಿ ಏನಿದೆ?

ವೇದ, ಪುರಾಣ, ಉಪನಿಷತ್‌, ಭಗವದ್ಗೀತೆ ಕಾಲದಲ್ಲೆ ಭಾರತದಲ್ಲಿ ಪ್ರಜಾಪ್ರಭುತ್ವ ಇತ್ತು. 2 ಸಾವಿರ ವರ್ಷಗಳಿಂದ ನಡೆಯುತ್ತಿರುವ ವಿದೇಶಿ ದಾಳಿಗಳ ನಡುವೆಯು ಪಂಚಾಯತಿ ಕಟ್ಟೆ, ಖಾಪ್ ಪಂಚಾಯತ್‌‌‌ ಈ ಪ್ರಜಾಪ್ರಭುತ್ವನ್ನು ಹಿಂದೂ ಸಂಸ್ಕೃತಿ ಉಳಿಸಿಕೊಂಡು ಬಂದಿದೆ ಎಂದು ICHR ಟಿಪ್ಪಣಿಯಲ್ಲಿ ಹೇಳಿದೆ.

ಅದಾಗ್ಯೂ, ಖಾಪ್‌ ಪಂಚಾಯತ್‌ಗಳು ಜಾತಿ ಶ್ರೇಣೀಕೃತ ವ್ಯವಸ್ಥೆಯ ಭಾಗವಾಗಿದ್ದು ಇಂದಿಗೂ ಅವು ಭಾರತದಲ್ಲಿ ಜಾತಿ ಪದ್ದತಿಯನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಲೆ, ಜಾತಿ ದೌರ್ಜನ್ಯ ಎಸಗುತ್ತಲೆ ಇವೆ ಸಾಬೀತಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಕೂಡಾ ಇವುಗಳು ಹೆಣ್ಣು ಮಕ್ಕಳನ್ನು ಮತ್ತು ಮಹಿಳೆಯವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಬಗ್ಗೆ ಕೂಡಾ ವರದಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಚಿಂತಕ ಶಿವಸುಂದರ್‌ ಅವರು, “ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್ ಪ್ರತಿಪಾದನೆಯಾಗಿದೆ. ಅವರು, ‘ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು’ ಎಂದು ಅವರ ಬಂಚ್ ಆಫ್‌ ಥಾಟ್ಸ್‌‌ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಇತಿಹಾಸದ ಬಗ್ಗೆ ಸಂಶೋಧನೆ ನಡೆಸುವ ಸಂಸ್ಥೆಯಾಗಿರುವ ICHR ಬಿಹಾರದ ರಾಖಿಗರಿಯಲ್ಲಿ ಇತ್ತೀಚೆಗೆ ನಡೆದ ಸಂಶೋಧನೆಯ ಬಗ್ಗೆ ತನ್ನ ಟಿಪ್ಪಣಿಯಲ್ಲಿ ಸುಳ್ಳು ಬರೆದುಕೊಂಡಿದೆ. ICHR ತನ್ನ ಟಿಪ್ಪಣಿಯಲ್ಲಿ, “ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5 ಸಾವಿರ ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ” ಎಂದು ಉಲ್ಲೇಖಿಸಿದೆ.

ಆದರೆ ವಾಸ್ತವದಲ್ಲಿ, ರಾಖಿಗರಿ ಸಂಶೋಧನೆಯು ಹರಪ್ಪಾ ನಾಗರಿಕತೆಗೂ ವೇದ ನಾಗರಿಕತೆಯ ಆರ್ಯರಿಗೂ ಸಂಬಂಧವಿಲ್ಲ ಎಂದು ಸಾಬೀತಾಗಿದೆ. ರಾಖಿಗರಿ ನಾಗರಿಕರೆ ದ್ರಾವಿಡ ನಾಗರೀಕತೆಯೆ ಹೊರತು ವೇದ ನಾಗರಿಕತೆಯಲ್ಲ ಎಂದು ಸಂಶೋಧನೆ ಸಾಬೀತು ಮಾಡಿದೆ. ರಾಖಿಗರಿಯಲ್ಲಿ ಪತ್ತೆಯಾದ ಅಸ್ಥಿಪಂಜರದ DNA ಇದನ್ನ ಪುಷ್ಠಿಕರಿಸಿದ್ದು, ಸಿಂಧೂ ಕಣಿವೆ ನಾಗರಿಕತೆಯನ್ನು ಕಟ್ಟಿರುವವರು ‘ಋಗ್ವೇದ ಕಾಲದ ಆರ್ಯ’ರಲ್ಲ ಎಂಬುದನ್ನು ಈ ಸಂಶೋಧನೆ ಹೇಳಿದೆ. ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಇಷ್ಟೆ ಅಲ್ಲದೆ ICHR ತನ್ನ ಟಿಪ್ಪಣಿಯಲ್ಲಿ ಭಗವದ್ಗೀತೆಯನ್ನು ತಪ್ಪಾಗಿ ವೈಭವೀಕರಿಸಿದ್ದು, “ಭಗವದ್ಗೀತೆ ವೇದದ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಬರೆದಿದೆ.

ಇದನ್ನು ವಿರೋಧಿಸಿರುವ ಶಿವಸುಂದರ್‌ ಅವರು, “ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ , ಭಗವದ್ಗೀತೆಯು ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದೆ. ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ” ಎಂದು ಹೇಳಿದ್ದಾರೆ. ಮೋದಿ ಸರ್ಕಾರ ಇದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆ ಅಲ್ಲದೆ, ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡಿಲ್ಲ ಎಂದು ICHR ತನ್ನ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದು, “ಇದು ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವಾಗಿದೆ” ಎಂದು ಹೇಳಿದೆ.

ಇದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಶಿವಸುಂದರ್‌ ಅವರು, “ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನವನ್ನು ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ-ಪುರಾಣ-ಶಾಸ್ತ್ರ-ಸ್ಮೃತಿ-ಶ್ರುತಿ ಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಂಧೂ ನಾಗರಿಕತೆ ಕುರಿತ ವಿಜ್ಞಾನದ ಹೊಸ ಸಂಶೋಧನೆಗಳೂ… ಸತ್ಯ ತಿರುಚುವ ಪತ್ರಿಕೆಗಳೂ… ಸುಳ್ಳು ಹೇಳಿತೇಕೆ ವಿಜಯ ಕರ್ನಾಟಕ

ಚಿಂತಕ ಶಿವಸುಂದರ್‌ ಅವರು ವೈರಲ್ ಬರಹವನ್ನು ಓದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತ ಪ್ರಜಾತಂತ್ರದ ಜನನಿ ನವಂಬರ್ 26 ಆಚರಣೆಗಳು ಇವೆಲ್ಲವೂ ಮುಂದಿನ ಚುನಾವಣೆಯನ್ನ ಎದುರಿಟ್ಟುಕೊಂಡು ಮಾಡುವ ಆಚರಣೆಗಳ ವಿನಹ ಭಾರತದಲ್ಲಿ ನರಳಾಡುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನ ಮೇಲೆತ್ತುವ ಕೆಲಸವಾಗಲಿ ಇತರ ಅಭಿವೃದ್ಧಿ ಕೆಲಸವಾಗಲಿ, ನಗಣ್ಯ ಈ ಸರಕಾರಕ್ಕೆ ಎಲ್ಲವೂ ನಾವೆಲ್ಲ ನೋಡುವಾಗ ಇದು ಪ್ರಜಾಪ್ರಭುತ್ವ ರಾಷ್ಟ್ರವಾಗದೆ ಏಕಪ್ರಭುತ್ವ ರಾಷ್ಟ್ರವಾಗಿದೆ ಅಂತ ನನಗನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...