Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...